ಕೋಟ: ವ್ಯವಸ್ಥಿತ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಬೇಡಿಕೆ

ಭೂತ ಬಂಗಲೆಯಂತಾಗಿರುವ ಬ್ರಿಟಿಷ್‌ ಕಾಲದಲ್ಲಿ ಸ್ಥಾಪನೆಯಾದ ಕಟ್ಟಡ

Team Udayavani, Oct 27, 2021, 5:41 AM IST

ಕೋಟ: ವ್ಯವಸ್ಥಿತ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಬೇಡಿಕೆ

ಕೋಟ: ಇಲ್ಲಿನ ಪಶುವೈದ್ಯ ಆಸ್ಪತ್ರೆಯ ಬಳಿ ಶತಮಾನದ ಇತಿಹಾಸದ, ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡ ಸರಕಾರಿ ಪ್ರವಾಸಿ ಮಂದಿರವೊಂದಿದೆ. ಪ್ರಸ್ತುತ ಈ ಕಟ್ಟಡ ನಿರ್ವಹಣೆ ಇಲ್ಲದೆ ಸೊರಗಿದ್ದು, ಶಿಥಿಲಾವಸ್ಥೆ ತಲುಪಿ ಭೂತಬಂಗಲೆಯಂತಾಗಿದೆ. ಕೋಟ ಬೆಳೆಯುತ್ತಿರುವ ಊರು ಹಾಗೂ ಹೆಸರುವಾಸಿ ಧಾರ್ಮಿಕ, ಸಾಂಸ್ಕೃತಿಕ ಕೇಂದ್ರಗಳಿರುವ ಪ್ರದೇಶವಾಗಿದೆ. ಹೀಗಾಗಿ ಇಲ್ಲಿ ವ್ಯವಸ್ಥಿತ ಪ್ರವಾಸಿ ಮಂದಿರಯೊಂದು ಅಗತ್ಯವಿದೆ ಎನ್ನುವ ಬೇಡಿಕೆ ಸಾರ್ವಜನಿಕ ವಲಯದಲ್ಲಿದೆ.

ಸ್ವಾತಂತ್ರ್ಯಪೂರ್ವದಲ್ಲಿ ಬ್ರಿಟಿಷ್‌ ಅಧಿಕಾರಿಗಳು ಸರಕಾರದ ಕೆಲಸ ಕಾರ್ಯಗಳಿಗಾಗಿ ಕುದುರೆಗಾಡಿ, ಎತ್ತಿನಗಾಡಿಗಳಲ್ಲಿ ಕೋಟ ಆಸುಪಾಸಿನ ಊರುಗಳಿಗೆ ಆಗಮಿಸುತ್ತಿದ್ದು ಹಾಗೂ ಅವರು ಇದೇ ಪ್ರವಾಸಿ ಬಂಗಲೆಯಲ್ಲಿ ಉಳಿಯುತ್ತಿದ್ದರು ಮತ್ತು ಕಂಪೆನಿ ಸರಕಾರದ ಆಪ್ತರು, ಪ್ರವಾಸಿಗರು ಬಂದಾಗ ಕೂಡ ಇಲ್ಲಿ ಉಳಿಯುವ ವ್ಯವಸ್ಥೆ ಮಾಡಲಾಗುತಿತ್ತು ಎನ್ನಲಾಗಿದೆ. ದಶಕದ ಹಿಂದೆ ಉಡುಪಿ ತಾ.ಪಂ. ಅಧೀನದಲ್ಲಿ ಈ ಪ್ರವಾಸಿ ಮಂದಿರ ನಿರ್ವಹಣೆಯಾಗುತ್ತಿತ್ತು ಹಾಗೂ ಸಾಕಷ್ಟು ಜನರು ಇಲ್ಲಿಗೆ ಭೇಟಿ ನೀಡುತ್ತಿದ್ದರು. ದಿನವೊಂದಕ್ಕೆ 50 ರೂ. ಬಾಡಿಗೆ ಪಡೆಯಲಾಗುತ್ತಿತ್ತು. ಕ್ರಮೇಣ ಪ್ರವಾಸಿ ಮಂದಿರಕ್ಕೆ ಆಗಮಿಸುವವರ ಸಂಖ್ಯೆ ಕುಸಿಯುವುದರ ಜತೆಗೆ, ಉಸ್ತುವಾರಿ ನೋಡಿಕೊಳ್ಳುವವರಿಲ್ಲದೆ ಸಂಪೂರ್ಣ ಹಾಳಾಗಿದೆ ಹಾಗೂ 15-20 ವರ್ಷಗಳಿಂದ ಕಾರ್ಯಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡಿದೆ.

ಶಿಥಿಲಾವಸ್ಥೆ; ಅಕ್ರಮ ಚಟುವಟಿಕೆ
ಪ್ರವಾಸಿ ಮಂದಿರದ ಬಾಗಿಲುಗಳಿಗೆ ಗೆದ್ದಲು ಹಿಡಿದಿದ್ದು, ಕೋಣೆಯೊಳಗೆ ಕಸದ ರಾಶಿ ಹಾಗೂ ಸುತ್ತಲು ಪೊದೆ ಆವರಿಸಿದೆ. ಬಂಗಲೆಗೆ ಹೊಂದಿಕೊಂಡಿರುವ ಶೌಚಾಲಯ, ನಿರ್ವಹಣೆಗಾರರ ಕೊಠಡಿ ಕುಸಿದಿದೆ. ಈ ಕಟ್ಟಡ ಇದೀಗ ಅಕ್ರಮ ಚಟುವಟಿಕೆಗಳ ತಾಣವಾಗಿ ಮಾರ್ಪಾಡುಗೊಂಡಿದ್ದು, ಎರಡು ಆತ್ಮಹತ್ಯೆಗಳಾಗಿವೆ.

ಇದನ್ನೂ ಓದಿ:ಇಂದೂ ಜಾಮೀನು ಸಿಕ್ಕಿಲ್ಲ…ಆರ್ಯನ್ ಖಾನ್ ಅರ್ಜಿ ವಿಚಾರಣೆ ಅ.27ಕ್ಕೆ ಮುಂದೂಡಿದ ಹೈಕೋರ್ಟ್

ಪ್ರವಾಸಿ ಮಂದಿರ ಯಾಕೆ ಬೇಕು
ಮಾಬುಕಳದಿಂದ ತೆಕ್ಕಟ್ಟೆಯ ತನಕ ಹಾಗೂ ಕೋಟದಿಂದ ಆವರ್ಸೆಯ ತನಕ ಕೋಟ ಹೋಬಳಿ ವ್ಯಾಪ್ತಿ ಹೊಂದಿದ್ದು, 31 ಗ್ರಾಮ, 14 ಗ್ರಾ.ಪಂ., ಸಾಲಿಗ್ರಾಮ ಪ.ಪಂ. ಈ ಹೋಬಳಿಗೆ ಸೇರಿದೆ ಮತ್ತು ಒಟ್ಟು 96,556 ಜನಸಂಖ್ಯೆ ಇದೆ. ಕೋಟದಲ್ಲಿ ಪ್ರಸಿದ್ಧವಾದ ಅಮೃತೇಶ್ವರೀ ದೇಗುಲ, ಸಾಲಿಗ್ರಾಮದಲ್ಲಿ ಗುರುನರಸಿಂಹ ದೇಗುಲ, ಕಾರಂತ ಕಲಾಭವನ, ಕಡಲ ತೀರ ಮುಂತಾದ ಪ್ರವಾಸಿ ತಾಣಗಳಿದ್ದು ನೂರಾರು ಮಂದಿ ಇಲ್ಲಗೆ ಭೇಟಿ ನೀಡುತ್ತಾರೆ ಹಾಗೂ ಹಲವಾರು ಸರಕಾರಿ ಕಚೇರಿಗಳಿದ್ದು ಸರಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು, ಸಚಿವರು ಭೇಟಿ ನೀಡಿದಾಗ ಸಭೆ ನಡೆಸಲು ಸರಿಯಾದ ವ್ಯವಸ್ಥೆಗಳಿಲ್ಲ. ಭವಿಷ್ಯದಲ್ಲಿ ಕೋಟವನ್ನು ತಾಲೂಕು ಕೇಂದ್ರವಾಗಿಸುವ ನಿಟ್ಟಿನಲ್ಲೂ ಸರಕಾರದ ಮುಂದೆ ಬೇಡಿಕೆ ಇದೆ. ಈ ಎಲ್ಲ ಕಾರಣಕ್ಕೆ ಕೋಟದಲ್ಲಿ ವ್ಯವಸ್ಥಿತವಾದ ಪ್ರವಾಸಿ ಮಂದಿರವೊಂದು ಅಗತ್ಯವಿದೆ.

ಪ್ರವಾಸಿ ಮಂದಿರ ಅಗತ್ಯ
ಕೋಟ ಬೆಳೆಯುತ್ತಿರುವ ಊರು ಹಾಗೂ ಪ್ರಮುಖ ಪ್ರವಾಸಿ ತಾಣಗಳು, ಧಾರ್ಮಿಕ ತಾಣಗಳಿರುವ ಪ್ರದೇಶವಾಗಿದೆ. ಭವಿಷ್ಯದಲ್ಲಿ ಈ ಪ್ರದೇಶ ಇನ್ನೂ ಬೆಳವಣಿಗೆಗೆ ಅವಕಾಶವಿದೆ. ಹೀಗಾಗಿ ಶೀಘ್ರದಲ್ಲಿ ಈಗಿರುವ ಪ್ರವಾಸಿ ಮಂದಿರವನ್ನು ತೆರವುಗೊಳಿಸಿ ವ್ಯವಸ್ಥಿತ ಪ್ರವಾಸಿ ಮಂದಿರವನ್ನು ನಿರ್ಮಿಸಬೇಕಿದೆ.
ಕೋಟ ಗಿರೀಶ್‌ ನಾಯಕ್‌,
ಸಾಮಾಜಿಕ ಕಾರ್ಯಕರ್ತ

ಪ್ರಸ್ತಾವನೆ ಸಲ್ಲಿಕೆ
ಕೋಟದಲ್ಲಿ ಪ್ರವಾಸಿ ಮಂದಿರ ಅಗತ್ಯವಾಗಿ ಬೇಕಿದೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆಗೆ ಪ್ರಸ್ತಾವನೆ ಹಾಗೂ ಸಮಗ್ರ ಕಡತ ಸಲ್ಲಿಕೆಯಾಗಿದೆ. ಸಚಿವರಲ್ಲಿ ಈ ಬಗ್ಗೆ ವಿಶೇಷ ಮನವಿ ಮಾಡಿದ್ದೇನೆ. ಶೀಘ್ರ ದಲ್ಲಿ ಮಂಜೂರಾಗುವ ಸಾಧ್ಯತೆ ಇದೆ.
– ಕೋಟ ಶ್ರೀನಿವಾಸ ಪೂಜಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು

– ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.