ಕೋಟ ಹೋಬಳಿ ವ್ಯಾಪ್ತಿ: ವ್ಯಾಪಕ ಮಳೆ ಹಾನಿ


Team Udayavani, Jul 11, 2019, 5:05 AM IST

rain

ಕೋಟ: ಮಂಗಳವಾರ ಸಂಜೆ ಸುರಿದ ಭಾರೀ ಗಾಳಿ-ಮಳೆಗೆ ಕೋಟ ಹೋಬಳಿಯಲ್ಲಿ ವ್ಯಾಪಕ ಹಾನಿಯಾಗಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

ಮೆಸ್ಕಾಂನ ಸಾಹೇಬ್ರಕಟ್ಟೆ ವಲಯ ವ್ಯಾಪ್ತಿಯಲ್ಲಿ 12 ಹಾಗೂ ಸಾಸ್ತಾನದಲ್ಲಿ 7, ಕೋಟದಲ್ಲಿ 8 ಸೇರಿದಂತೆ ಒಟ್ಟು 27ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ಧರೆಗುರುಳಿವೆ ಹಾಗೂ 11ಕ್ಕೂ ಹೆಚ್ಚು ಮನೆ, ಕೊಟ್ಟಿಗೆಗೆ ಹಾನಿಯಾಗಿದೆ.

ವಿದ್ಯುತ್‌ ಕಂಬಕ್ಕೆ ಹಾನಿ

ಅಚ್ಲಾಡಿಯ ರಬ್ಬರ್‌ ತೋಟ ಸಮೀಪ 6 ಹಾಗೂ ಗರಿಕೆಮಠ, ಅಚ್ಲಾಡಿ ಗುಡ್ಡಿ ಸೇರಿದಂತೆ 3 ಮತ್ತು ಕಳ್ಳಾಡಿಯಲ್ಲಿ 3 ವಿದ್ಯುತ್‌ ಕಂಬಗಳು ಸೇರಿದಂತೆ ಒಟ್ಟು 12 ಕಂಬಗಳು ಧರೆಗುರುಳಿವೆ.

ಸಾಸ್ತಾನದ ಯಕ್ಷಿಮಠ, ದಂಡೆ ಬೆಟ್ಟು, ಪಾಂಡೇಶ್ವರ, ಮಾಬುಕಳ, ಕೋಡಿರಸ್ತೆ, ಹಪ್ಪಳಬೆಟ್ಟು, ಹಂಗಾರಕಟ್ಟೆ ಸೇರಿದಂತೆ 7 ಕಂಬಗಳು ಮತ್ತು ಕೋಟ ವ್ಯಾಪ್ತಿಯ 8 ಕಡೆಗಳಲ್ಲಿ ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದೆ.

11 ಮನೆ, ಕೊಟ್ಟಿಗೆಗೆ ಹಾನಿ

ಶಿರಿಯಾರ ಗ್ರಾ.ಪಂ. ವ್ಯಾಪ್ತಿಯ ಗರಿಕೆಮಠದ ಬಾಬು, ಅನಿತಾ, ಪದ್ದು, ರಾಧಾ, ಚಂದ್ರ ಕುಮಾರ್‌, ರತ್ನಾ, ಲಲಿತಾ, ಮುತ್ತು ಹಾಗೂ ತಂಗಾಡಿಯ ಸಂತೋಷ ಅವರ ಮನೆಯ ಮೇಲೆ ಮರಬಿದ್ದು ಒಟ್ಟು 1 ಲಕ್ಷಕ್ಕೂ ಅಧಿಕ ಹಾನಿಯಾಗಿದೆ ಹಾಗೂ ಅಚ್ಲಾಡಿಯ ರಮಣಿ, ಗಿಳಿಯಾರಿನ ಸಂಜೀವ ಪೂಜಾರಿಯವರ ಮನೆ ಮತ್ತು ಗುಂಡ್ಮಿ ಮಡಿವಾಳರಕೇರಿ ನಾರಾಯಣ ಮಡಿವಾಳ ಅವರ ಶೌಚಾಲಯದ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ.

ಶಿರಿಯಾರ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಾನಿಯಾದ ಪ್ರದೇಶಗಳಿಗೆ ಗ್ರಾ.ಪಂ. ಅಧ್ಯಕ್ಷೆ ವಿಮಲಾ, ಸದಸ್ಯ ಗುಂಡು, ಕಾರ್ಯದರ್ಶಿ ಆನಂದ ನಾಯ್ಕ, ಗ್ರಾಮಕರಣಿಕ ಕೃಷ್ಣ ಮರಕಾಲ ಹಾಗೂ ವಿ.ಎ. ಶರತ್‌ ಶೆಟ್ಟಿ ಭೇಟಿ ನೀಡಿ ಹಾನಿಯ ಕುರಿತು ಪರಿಶೀಲಿಸಿದರು. ಗಿಳಿಯಾರಿನಲ್ಲಿ ಹಾನಿಗೊಂಡ ಪ್ರದೇಶಕ್ಕೆ ವಿ.ಎ. ಚೆಲುವರಾಜು ಭೇಟಿ ನೀಡಿದರು ಮತ್ತು ಕೋಟ ಕಂದಾಯ ಕಚೇರಿಯ ಉಪತಹಶೀಲ್ದಾರ ಚಂದ್ರಹಾಸದ ಬಂಗೇರ ವರದಿ ಪಡೆದ ಮೇಲಾಧಿಕಾರಿಗಳಿಗೆ ರವಾನಿಸಿದರು.

ವಿದ್ಯುತ್‌ ಕಟ್, ಮೆಸ್ಕಾಂ ಮಿಂಚಿನ ಕಾರ್ಯಾಚರಣೆ

ವಿದ್ಯುತ್‌ ಕಂಬಗಳ ಮೇಲೆ ಮರ ಬಿದ್ದು ಹಾನಿಯಾಗಿದ್ದರಿಂದ ಮಂಗಳ ವಾರ ಸಂಜೆ 7ಗಂಟೆಯಿಂದ ಅಪರಾಹ್ನ 12ರ ತನಕ ವಿದ್ಯುತ್‌ ವ್ಯತ್ಯಯವಾಗಿತ್ತು. ಬೆಳಗ್ಗೆ ಬೇಗನೆ ಕಾರ್ಯಚರಣೆ ಆರಂಭಿಸಿದ ಮೆಸ್ಕಾಂ ಸಿಬಂದಿ ಮರಗಳು ಹಾಗೂ ಕಂಬಗಳನ್ನು ತೆರವುಗೊಳಿಸಿ ಹೊಸ ಕಂಬಗಳನ್ನು ಅಳವಡಿಸಿ ತ್ವರಿತಗತಿಯಲ್ಲಿ ವಿದ್ಯುತ್‌ ಸಂಪರ್ಕ ನೀಡಲು ನಿರಂತರವಾಗಿ ಶ್ರಮಿಸಿದರು.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.