ಕೋಟ: 500 ಎಕ್ರೆಗೂ ಅಧಿಕ ಕೃಷಿ ಬೆಳೆಗೆ ಆತಂಕವಾಗಿರುವ ಅಂತರಗಂಗೆ


Team Udayavani, Apr 3, 2019, 6:30 AM IST

kota-500-ekare

ಕೋಟ: ಕೋಟ ಹೋಬಳಿ ವ್ಯಾಪ್ತಿಯ ವಿವಿಧ ಭಾಗದ ಸುಮಾರು 500ಎಕರೆಗೂ ಹೆಚ್ಚು ಪ್ರದೇಶದ ಕೃಷಿ ಭೂಮಿಗೆ ಮಳೆಗಾಲದಲ್ಲಿ ನೀರಿನ ಮೇಲೆ ತೇಲುವ ಅಂತರಗಂಗೆ ಎಂಬ ಜಲಕಳೆಯ ಸಮಸ್ಯೆ ಎದುರಾಗುತ್ತದೆ ಹಾಗೂ ಇದರಿಂದ ಇಲ್ಲಿ ಬೆಳೆದ ಭತ್ತದ ಬೆಳೆ ಹಾನಿಗೊಳಗಾಗುತ್ತದೆ. ಪ್ರತಿವರ್ಷ ಎದುರಾಗುವ ಈ ಸಮಸ್ಯೆಗೆ ಪರಿಹಾರ ಸಿಗದೆ ಕೃಷಿಕರು ಕಂಗಾಲಾಗುತ್ತಿದ್ದಾರೆ ಮತ್ತು ಬೇಸಾಯ ಮಾಡುವುದೇ ಕಷ್ಟ ಸಾಧ್ಯವಾಗಿದೆ. ಕೆಲವರು ಇದೇ ಕಾರಣಕ್ಕೆ ಗದ್ದೆ ಹಡವು ಹಾಕಿದ್ದಾರೆ. ಆದರೆ ಮಳೆಗಾಲಕ್ಕೆ ಮೊದಲು ಸಾಂಪ್ರದಾಯಿಕ ಹಾಗೂ ವೈಜ್ಞಾನಿಕ ವಿಧಾನಗಳಿಂದ ಇದನ್ನು ಹತೋಟಿಗೆ ತರಲು ಸಾಧ್ಯವಿದ್ದು ಈ ಕುರಿತು ಈ ಬಾರಿ ಯೋಜನೆ ರೂಪಿಸಬೇಕಿದೆ.

ಮಳೆಗಾಲದಲ್ಲಿ ವಿಪರೀತ ಹಾನಿ
ಮಳೆಗಾಲಕ್ಕೂ ಮೊದಲು ಆವಿ ಮಣ್ಣಿನ ಹೊಂಡ, ಕೆರೆ, ಹೊಳೆ, ತೋಡುಗಳಲ್ಲಿ ಈ ಕಲೆ ಇರುತ್ತದೆ. ಮಳೆ ಬಿದ್ದಾಕ್ಷಣ ಗಾತ್ರದಲ್ಲಿ ಹಿಗ್ಗಿಕೊಂಡು ನೆರೆ ನೀರಿನೊಂದಿಗೆ ಸೇರಿ ಕೃಷಿ ಭೂಮಿಗೆ ಲಗ್ಗೆ ಇಟ್ಟು ಭತ್ತದ ಸಸಿಯನ್ನು ನಾಶಗೊಳಿಸುತ್ತದೆ ಹಾಗೂ ಜಲಸಸ್ಯ, ಜಲಚರಗಳಿಗೂ ಕಂಟಕವಾಗುತ್ತದೆ.

ಕ್ರಮಕೈಗೊಳ್ಳಬೇಕಿದೆ ಕೃಷಿ ಇಲಾಖೆ
ಮಳೆಗಾಲಕ್ಕೆ ಮೊದಲು ನೀರಿನ ಮೂಲದಲ್ಲೇ ಇದನ್ನು ನಾಶಪಡಿಸಿ ನೀರಿನಿಂದ-ನೀರಿಗೆ ಹರಡದಂತೆ ಎಚ್ಚರಿಕೆ ವಹಿಸುವ ಮೂಲಕ, ಕಳೆನಾಶಕಗಳಾದ ಡೆ„ಕ್ವಾಟ್‌, ಪ್ಯಾರಾಕ್ವಾಟ್‌, ಗ್ಲೆ$ç´ೋಸೆಟ್‌ ಮುಂತಾದ ರಾಸಾಯನಿಕಗಳನ್ನು ಬಳಕೆ ಮತ್ತು ಸಿರಟೊಬ್ಯಾಗಸ್‌ ಸಾಲ್ವೆನಿಯಾ ಎಂಬ ದುಂಬಿಯಿಂದ ಇದನ್ನು ನಾಶಪಡಿಸ ಬಹುದು ಎನ್ನುವುದು ಕೃಷಿ ವಿಜ್ಞಾನಿಗಳ ಅಭಿಪ್ರಾಯವಾಗಿದೆ.

ನೀರಿನಿಂದ ಮೇಲೆತ್ತಿ ಗುಂಡಿ ತೆಗೆದು ಮುಚ್ಚುವುದು, ನೀರು ಮಲೀನವಾಗದಂತೆ ತಡೆಯುವುದು, ಹೊಳೆ, ತೋಡುಗಳ ಹೂಳೆತ್ತಿ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡುವುದರ ಮೂಲಕವೂ ಹತೋಟಿಗೆ ತರಬಹುದು. ಆದರೆ ಇದನ್ನು ರೈತರಿಗೆ ಮಾಡಲು ಸಾಧ್ಯವಿಲ್ಲ. ಸ್ಥಳೀಯಾಡಳಿತ, ಕೃಷಿ ಇಲಾಖೆ ಜಂಟಿಯಾಗಿ ಯೋಜನೆ ರೂಪಿಸಿ ಹತೋಟಿಗೆ ಕ್ರಮಕೈಗೊಳ್ಳಬೇಕು ಎನ್ನುವುದು ರೈತರ ಬೇಡಿಕೆಯಾಗಿದೆ.

ಇಲಾಖೆ ಸಹಕಾರ
ಜೈವಿಕ, ವೈಜ್ಞಾನಿಕ ಹಾಗೂ ಕಾಂಪೋಸ್ಟ್‌ ವಿಧಾನಗಳ ಮೂಲಕ ಅಂತರಗಂಗೆಯನ್ನು ನಾಶಪಡಿಸಬಹುದು. ಈ ಕುರಿತು ಸಂಶೋಧನೆಗಳು ಚಾಲ್ತಿಯಲ್ಲಿದೆ. ರೈತರಿಗೆ ಅಗತ್ಯ ಮಾಹಿತಿ ಹಾಗೂ ಇನ್ನಿತರ ಸಹಕಾರವನ್ನು ನೀಡಲು ಇಲಾಖೆ ಸಿದ್ಧವಿದೆ.
-ಡಾ| ಎಸ್‌.ವಿ. ಪಾಟೀಲ್‌, ಸಹ ಸಂಶೋಧನಾ ನಿರ್ದೇಶಕರು, ಕೃಷಿ ಹಾಗೂ ತೋಟಗಾರಿಕೆ ಕೇಂದ್ರ ಬ್ರಹ್ಮಾವರ

ಕೃಷಿ ಇಲಾಖೆ, ಜಿಲ್ಲಾಧಿಕಾರಿಗಳಿಗೆ ಮನವಿ
ಕೋಟ ಹೋಬಳಿಯ ಮಣೂರು, ಗಿಳಿಯಾರು ಜತೆಗೆ ತೆಕ್ಕಟ್ಟೆ, ಮಲ್ಯಾಡಿ, ಕೆದೂರು, ಉಳೂ¤ರು, ಹಲೂ¤ರು, ಗುಳ್ಳಾಡಿ ಗ್ರಾಮಗಳ ಸಾವಿರಾರು ಎಕ್ರೆ ಕೃಷಿಭೂಮಿಗೆ ಅಂತರಗಂಗೆಯ ಸಮಸ್ಯೆ ಇದೆ. ಪ್ರತಿ ವರ್ಷ ಮಳೆಗಾಲದಲ್ಲಿ ರೈತರು ಇದರ ಹತೋಟಿಗೆ ಕಷ್ಟಪಡುತ್ತಾರೆ. ಕೃಷಿ ಇಲಾಖೆಯವರು ಇದರ ಹತೋಟಿಗೆ ಹಲವು ವಿಧಾನಗಳನ್ನು ಸೂಚಿಸುತ್ತಾರೆ. ಆದರೆ ರೈತರಿಗೆ ಇದನ್ನು ಅನುಷ್ಠಾನ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಈ ಬಾರಿ ಕೃಷಿ ಇಲಾಖೆ, ಸ್ಥಳೀಯಾಡಳಿತದೊಂದಿಗೆ ಸೇರಿ ಮಳೆಗಾಲಕ್ಕೆ ಮೊದಲು ಸಾಂಪ್ರದಾಯಿಕ, ವೈಜ್ಞಾನಿಕ ವಿಧಾನದ ಮೂಲಕ ಸಮಸ್ಯೆ ಪರಿಹರಿಸುವಲ್ಲಿ ಪ್ರಯತ್ನಿಸಬೇಕಿದೆ. ರೈತ ಧ್ವನಿ ಸಂಘಟನೆಯ ವತಿಯಿಂದ ಈ ಕುರಿತು ರೈತರ ನಿಯೋಗ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲಿದ್ದೇವೆ.
– ಜಯರಾಮ್‌ ಶೆಟ್ಟಿ ಮಣೂರು, ಅಧ್ಯಕ್ಷರು ರೈತಧ್ವನಿ ಸಂಘಟನೆ ಕೋಟ

– ರಾಜೇಶ ಗಾಣಿಗ ಅಚಾÉಡಿ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.