ಅಳಿವಿನಂಚಿನಲ್ಲಿ ಶತಮಾನಗಳ ಇತಿಹಾಸದ ಕೋಟ ಹೋರಿಪೈರು


Team Udayavani, Nov 14, 2018, 12:33 PM IST

14-november-6.gif

ಕೋಟ: ಕೋಣಗಳ ವ್ಯಾಪಾರದ ಪ್ರಮುಖ ತಾಣವಾದ ಕೋಟ ಹೋರಿಪೈರಿಗೆ ಸಾಕಷ್ಟು ಇತಿಹಾಸವಿದ್ದು ಜಿಲ್ಲೆಯ ಅತಿದೊಡ್ಡ ಕೋಣಗಳ ಮಾರುಕಟ್ಟೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆದರೆ ಆಧುನಿಕತೆಯ ಹೊಡೆತ, ಮೂಲಸೌಕರ್ಯದ ಕೊರತೆ ಮುಂತಾದ ಕಾರಣಗಳಿಂದ ಪೈರು ಇದೀಗ ಅಳಿವಿನಂಚಿಗೆ ತಲುಪಿದೆ.

ಮೂರು ಶತಮಾನಗಳ ಇತಿಹಾಸ
ಇಲ್ಲಿನ ಪೈರಿಗೆ ಸುಮಾರು ಎರಡು-ಮೂರು ಶತಮಾನಗಳ ಇತಿಹಾಸವಿದೆ. ಮಹಾರಾಷ್ಟ್ರದ ಪಾಂಡರಾಪುರ, ಹೊಳೆಸಾಲು, ಬೈಲುಹೊಂಗಲ, ಅಕ್ಕಿ ಆಲೂರು, ಬೆಳಗಾವಿ, ಹುಬ್ಬಳ್ಳಿ ಮುಂತಾದ ಕಡೆಗಳ ಎಳೆಂಟು ತಂಡಗಳು ಸಾವಿರಾರು ಕೋಣಗಳೊಂದಿಗೆ ಇಲ್ಲಿಗೆ ಆಗಮಿಸಿ ರಾಷ್ಟ್ರೀಯ ಹೆದ್ದಾರಿಯ ಎರಡು ಕಡೆಗಳಲ್ಲಿ ನಡೆಸುತ್ತಿದ್ದರು. ಚತುಷ್ಪಥಗೊಂಡ ಅನಂತರ ಸ್ಥಳಾವಕಾಶವಿಲ್ಲವಾಗಿದೆ. ಹೀಗಾಗಿ ಎ.ಪಿ.ಎಂ.ಸಿ.ಗೆ ಸೇರಿದ ಗಾಂಧೀ ಮೈದಾನದಲ್ಲಿ ಇದೀಗ ಪೈರು ನಡೆಯುತ್ತಿದೆ ಹಾಗೂ ಜಿಲ್ಲೆಯ ಏಕೈಕ ಅತೀ ದೊಡ್ಡ ಕೋಣಗಳ ಪೈರು ಎನ್ನುವ ಹೆಗ್ಗಳಿಕೆ ಉಳಿಸಿಕೊಂಡಿದೆ.

ಹೊರಜಿಲ್ಲೆಗಳಿಂದ ಅಧಿಕ ಬೇಡಿಕೆ
ಇಲ್ಲಿನ ಕೋಣಗಳು ಉಳುಮೆ ಹಾಗೂ ಕಂಬಳಕ್ಕೆ ಹೆಚ್ಚು ಸೂಕ್ತ ಎನ್ನುವ ಕಾರಣಕ್ಕೆ ಹೊರ ಜಿಲ್ಲೆಯಲ್ಲಿ ಅಧಿಕ ಬೇಡಿಕೆ ಇದೆ. ದ.ಕ.,ಉತ್ತರ ಕನ್ನಡ, ಶಿವಮೊಗ್ಗ ಮುಂತಾದ ಕಡೆಗಳ ಕಂಬಳ ಕೋಣಗಳ ಯಜಮಾನರು ಮತ್ತು ಕೃಷಿಕರು ಇಲ್ಲಿಗೆ ಆಗಮಿಸಿ ವ್ಯಾಪಾರ ನಡೆಸುತ್ತಾರೆ.

ಸ್ಥಗಿತಗೊಂಡ ಪೈರು ಈ ಬಾರಿ ಮತ್ತೆ ಆರಂಭ
ಮೂಲಸೌಕರ್ಯಗಳಿಲ್ಲದೆ ಕಳೆದ ವರ್ಷ ಪೈರು ನಡೆದಿರಲಿಲ್ಲ. ಹೀಗಾಗಿ ಇತಿಹಾಸದ ಪುಟ ಸೇರಿತು ಎನ್ನುವ ಭಾವನೆ ಸ್ಥಳೀಯರಲ್ಲಿತ್ತು. ಆದರೆ ಈ ಬಾರಿ ಕೋಣಗಳ ಮಾಲಕರ ಬೇಡಿಕೆಯ ಮೇರೆಗೆ ಪುನರಾರಂಭಿಸಲಾಗಿದೆ.

ಬೇಡಿಕೆ ಉಳಿದಿದೆ
ಪೈರಿಗೆ ಬೇಡಿಕೆ ಇದೆ ಎನ್ನುವುದಕ್ಕೆ ಇಲ್ಲಿ ಪ್ರತಿ ವರ್ಷ ಇಲ್ಲಿ 300ಕ್ಕೂ ಹೆಚ್ಚು ಕೋಣಗಳು ಮಾರಾಟವಾಗುತ್ತಿರುವುದು ಸಾಕ್ಷಿಯಾಗಿದೆ. ಶೇಂಗಾ ಬಿತ್ತನೆ, ಉಳುಮೆ, ಕಂಬಳ ಹಾಗೂ ಹಟ್ಟಿ ಗೊಬ್ಬರಕ್ಕಾಗಿ ಕೋಣಗಳನ್ನು ಬಳಸಿಕೊಳ್ಳಲಾಗುತ್ತದೆ.

ಮೂಲಸೌಕರ್ಯ ಅಗತ್ಯ 
ಇದೀಗ ಹೋರಿಪೈರು ನಡೆಯುತ್ತಿರುವ ಸ್ಥಳದಲ್ಲಿ ಸಮರ್ಪಕವಾದ ಸೂರು, ನೀರು, ವ್ಯಾಪಾರಿಗಳಿಗೆ ಉಳಿಯುವುದಕ್ಕೆ ವ್ಯವಸ್ಥೆ ಇಲ್ಲ. ಹೀಗಾಗಿ ಎ.ಪಿ.ಎಂ.ಸಿ.ಗೆ ಸೇರಿದ ಈ ಜಾಗದಲ್ಲಿ ಇಲಾಖೆಯವರು ಸೂಕ್ತ ಮಾರುಕಟ್ಟೆ ನಿರ್ಮಿಸಿ, ಮೂಲಸೌಕರ್ಯ ಕಲ್ಪಿಸಿದಲ್ಲಿ ಪೈರಿನ ಉಳಿವು ಸಾಧ್ಯವಿದೆ. ಆದರೆ ಈ ಸ್ಥಳವನ್ನು ಸ್ಥಳೀಯರು ಸಾಂಸ್ಕೃತಿಕ ಹಾಗೂ ಕ್ರೀಡಾಚಟುವಟಿಕೆಗೆ ಬಳಸಿಕೊಳ್ಳುತ್ತಿರುವುದರಿಂದ ವಿರೋಧ ವ್ಯಕ್ತವಾಗಬಹುದು ಎನ್ನುವ ಅನುಮಾನವಿದೆ. ಆದರೆ ಮಾರುಕಟ್ಟೆಗೆ ಅಗತ್ಯವಿರುವಷ್ಟೇ ಸ್ಥಳವನ್ನು ಬಳಸಿಕೊಂಡು ಬಾಕಿ ಉಳಿದ ಜಾಗದಲ್ಲಿ ಸಾಮಾಜಿಕ ಚಟುವಟಿಕೆಗೆ ಮೀಸಲಿರಿಸಲು ಅವಕಾಶ ಕೂಡ ಇದೆ.

ಗ್ರಾಹಕರ ಒತ್ತಾಯಕ್ಕಾಗಿ ಪೈರು ಆರಂಭಿಸಿದ್ದೇವೆ
ಸರಿಯಾದ ಮೂಲಸೌಕರ್ಯ ಇಲ್ಲದಿರುವುದರಿಂದ ಪೈರು ನಡೆಸುವುದು ಕಷ್ಟವಾಗುತ್ತಿದೆ. ಹೀಗಾಗಿ ಕಳೆದ ಬಾರಿ ಕೋಣ ತಂದಿಲ್ಲ. ಈ ಬಾರಿ ಗ್ರಾಹಕರ ಬೇಡಿಕೆ ಮೇರೆಗೆ ಪೈರು ಆರಂಭಿಸಿದ್ದೇವೆ ಹಾಗೂ 70ಕ್ಕೂ ಹೆಚ್ಚು ಕೋಣಗಳು ಈಗಾಗಲೇ ಮಾರಾಟವಾಗಿದೆ. ಮೂಲಸೌಕರ್ಯ ಕಲ್ಪಿಸಿದಲ್ಲಿ ಯಾವುದೇ ಸಮಸ್ಯೆ ಇಲ್ಲದೆ ಪೈರು ಮುಂದುವರಿಸಬಹುದು.
ಬುಡಾನ್‌ ಸಾಹೇಬ್‌, ಅಕ್ಕಿಅಲೂರು, ಪೈರಿನ ಮಾಲಕ

ಸರಕಾರದ ಮಟ್ಟದಲ್ಲಿ ಅಭಿವೃದ್ಧಿ ಸಾಧ್ಯ
ಕೋಟದಲ್ಲಿ ಎ.ಪಿ.ಎಂ.ಸಿ.ಗೆ ಸೇರಿದ ಜಾಗವನ್ನು ಅಭಿವೃದ್ಧಿಗೊಳಿಸುವ ಯೋಜನೆ ಈ ಹಿಂದೆ ಹಾಕಿಕೊಳ್ಳಲಾಗಿತ್ತು. ಆದರೆ ಸರಿಯಾದ ಸಹಕಾರ ಸಿಗಲಿಲ್ಲ. ಸ್ಥಳೀಯ ಕೃಷಿಕರು ಹಾಗೂ ಜನಪ್ರತಿನಿಧಿಗಳು ಪೈರು ಉಳಿಯಬೇಕು ಎನ್ನುವ ನಿಟ್ಟಿನಲ್ಲಿ ಮಾರುಕಟ್ಟೆಗಾಗಿ ಬೇಡಿಕೆ ಸಲ್ಲಿಸಿ ಹೋರಾಟ ನಡೆಸಿದಲ್ಲಿ ಸರಕಾರದ ಮಟ್ಟದಲ್ಲಿ ಈಡೇರುವ ಸಾಧ್ಯತೆ ಇದೆ.
– ರಾಮಕೃಷ್ಣ ನಾಯಕ್‌, ಸಹಾಯಕ
ನಿರ್ದೇಶಕರು ಎ.ಪಿ.ಎಂ.ಸಿ. ಉಡುಪಿ

ರಾಜೇಶ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.