ಕೋಟ: ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಮಕ್ಕಳ ಸಾವು


Team Udayavani, May 31, 2017, 12:54 PM IST

kota.jpg

ಕೋಟ: ಕೃಷಿಗಾಗಿ ನೆನೆ ಹಾಕಿದ ಬೀಜವನ್ನು ಮೇಲೆ ತೆಗೆಯಲು ಕೃಷಿ ಹೊಂಡಕ್ಕೆ ಇಳಿದ ತಾಯಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ದೇಲೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರದ ಬಯಲುಮನೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. 

ಇಲ್ಲಿನ ನರಸಿಂಹ ಶೆಟ್ಟಿ ಅವರ ಪುತ್ರಿ ಭಾರತಿ ಶೆಟ್ಟಿ (42) ಹಾಗೂ ಅವರ ಪುತ್ರಿಯರಾದ ಪೃಥ್ವಿ (21), ಪ್ರಜ್ಞಾ (18) ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟವರು. 

ಬೀಜದ ಭತ್ತವನ್ನು ಗೋಣಿ ಚೀಲದಲ್ಲಿ ಕಟ್ಟಿ ಹೊಲದಲ್ಲಿದ್ದ ಕೃಷಿ ಹೊಂಡದಲ್ಲಿ ನೆನೆಯಲು ಹಾಕಿದ್ದು, ಅದನ್ನು ನೀರಿನಿಂದ ತೆಗೆಯುವ ಸಂದರ್ಭ ಈ ದುರಂತ ಸಂಭವಿಸಿದೆ. ಮನೆಯಲ್ಲಿ ಮೂವರೂ ಇಲ್ಲದೇ ಇರುವುದನ್ನು ಗಮನಿಸಿ ನರಸಿಂಹ ಶೆಟ್ಟಿ ಅವರು ಕೃಷಿ ಹೊಂಡದ ಬಳಿ ಬಂದು ನೋಡಿದಾಗ ಕೆಲವು ಬೀಜದ ಚೀಲಗಳು ಮೇಲ್ಭಾಗದಲ್ಲಿ ಇರುವುದು ಕಂಡು ಬಂತು. ಅನುಮಾನಗೊಂಡ ಅವರು ಅಕ್ಕಪಕ್ಕದವರನ್ನು ಕೂಗಿ ಕರೆದಾಗ ಮೂವರು ಕೃಷಿ ಹೊಂಡದಲ್ಲಿ ಮುಳುಗಿರುವುದು ಬೆಳಕಿಗೆ ಬಂತು. ಬಳಿಕ ಸ್ಥಳೀಯರ ನೆರವಿನಿಂದ ಮೃತದೇಹಗಳನ್ನು ಮೇಲೆತ್ತಲಾಯಿತು. 

ಭಾರತಿ ಶೆಟ್ಟಿ ಅವರ ಪತಿ ಸುರೇಂದ್ರ ಶೆಟ್ಟಿ ಅವರು ಅಂಪಾರಿನಲ್ಲಿರುವ ತನ್ನ ಮನೆ ಯಲ್ಲಿದ್ದುಕೊಂಡು ಕೃಷಿ ಮಾಡುತ್ತಿದ್ದರು. ಭಾರತಿ ಶೆಟ್ಟಿ ತನ್ನ ಇಬ್ಬರು ಪುತ್ರಿಯರೊಂದಿಗೆ ತಂದೆ ಮನೆಯಲ್ಲಿ ವಾಸಿಸುತ್ತಿದ್ದರು. ಸಂಜೆ 7.30ರ ಹೊತ್ತಿಗೆ ಘಟನೆ ಸಂಭವಿಸಿದ್ದು, ಈ ಬಗ್ಗೆ ತಿಳಿದ ಬಳಿಕ ಸುರೇಂದ್ರ ಶೆಟ್ಟಿ ದೇಲೆಟ್ಟುವಿಗೆ ಆಗಮಿಸಿದರು.

ಇಬ್ಬರೇ ಮಕ್ಕಳು
ನರಸಿಂಹ ಶೆಟ್ಟಿ ಅವರದ್ದು ಕೃಷಿ ಕುಟಂಬವಾಗಿದೆ. ಭಾರತಿ ಶೆಟ್ಟಿ-ಸುರೇಂದ್ರ ಶೆಟ್ಟಿ ದಂಪತಿಗೆ ಇಬ್ಬರೇ ಮಕ್ಕಳಿದ್ದು, ಅವರಿಬ್ಬರೂ ತಾಯಿಯೊಂದಿಗೆ ಕೃಷಿ ಸಂಬಂಧಿ ಕಾರ್ಯದಲ್ಲಿರುವಾಗಲೇ ಸಾವಿಗೀಡಾಗಿದ್ದಾರೆ. ಇಬ್ಬರು ಪುತ್ರಿಯರೂ ತಾಯಿಯೊಂದಿಗೆ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುತ್ತಿದ್ದರು. ನೀರಿನಲ್ಲಿ ನೆನೆ ಹಾಕಿದ ಭತ್ತದ ಬೀಜವನ್ನು ತೆಗೆಯುವುದಕ್ಕಾಗಿ ಸಂಜೆಯ ವೇಳೆ ತಾಯಿಯೊಂದಿಗೆ ಇಬ್ಬರೂ ಪುತ್ರಿಯರೂ ಹೋಗಿದ್ದರು. ನೀರಿನಲ್ಲಿ ನೆನೆದು ಭಾರವಾಗಿದ್ದ ಗೋಣಿಯಲ್ಲಿದ್ದ ಭತ್ತವನ್ನು ಮೇಲೆತ್ತುವ ಸಂದರ್ಭ ಓರ್ವರು ಜಾರಿ ನಿಯಂತ್ರಣ ತಪ್ಪಿ ಬಿದ್ದಾಗ ಇತರ ಇಬ್ಬರು ಅವರನ್ನು ರಕ್ಷಿಸುವ ಯತ್ನದಲ್ಲಿ ನೀರಿಗೆ ಬಿದ್ದು ಸಾವಿಗೀಡಾಗಿರಬೇಕೆಂದು ಶಂಕಿಸಲಾಗಿದೆ. ಮೃತಪಟ್ಟ ಪೃಥ್ವಿ ಬ್ರಹ್ಮಾವರದ ಎಸ್‌ಎಂಎಸ್‌ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದು, ಪ್ರಜ್ಞಾ ಅವರು ಆರ್‌.ಎನ್‌. ಶೆಟ್ಟಿ ಕಾಲೇಜಿನಲ್ಲಿ ಪಿಯುಸಿ ಪೂರ್ಣಗೊಳಿಸಿದ್ದರು. ಈ ಇಬ್ಬರು ಮಕ್ಕಳು ಪ್ರತಿಭಾವಂತರಾಗಿದ್ದರು. ಪೃಥ್ವಿ ಕೃಷಿ ಚಟುವಟಿಕೆ ಸಂದರ್ಭ ಟಿಲ್ಲರ್‌ ಬಳಸಿ ಗದ್ದೆ ಉಳುತ್ತಿದ್ದಳು.

ಮುಗಿಲು ಮುಟ್ಟಿದ ರೋದನ: ದೇಲೆಟ್ಟು ಬಯಲುಮನೆಯಲ್ಲಿ ನರಸಿಂಹ ಶೆಟ್ಟಿ ಅವರ ಪುತ್ರ, ಭಾರತಿ ಅವರ ತಮ್ಮ ಉಮೇಶ್‌ ಕೂಡ ವಾಸಿಸುತ್ತಿದ್ದರು. ಈಗ ಒಂದೇ ಮನೆಯ ಮೂವರನ್ನು ಕಳೆದುಕೊಂಡ ಕುಟುಂಬದ ರೋದನ ಮುಗಿಲುಮುಟ್ಟಿದೆ. 

ಘಟನ ಸ್ಥಳಕ್ಕೆ ಕೋಟ ಠಾಣಾಧಿಕಾರಿ ರಾಜ್‌ಗೊàಪಾಲ್‌, ಬ್ರಹ್ಮಾವರ ವೃತ್ತ ನಿರೀಕ್ಷಕ ಶ್ರೀಕಾಂತ್‌ ಭೇಟಿ ನೀಡಿದ್ದಾರೆ.
 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.