ತಡೆಗೋಡೆ ಎತ್ತರಿಸಿದಕ್ಕೆ ವಿರೋಧ: ತೆರವಿಗೆ  ನಿರ್ಣಯ ಕೈಗೊಳ್ಳಲು ಪಟ್ಟ


Team Udayavani, Sep 29, 2018, 6:40 AM IST

2809kota5e.jpg

ಕೋಟ: ಕೋಟ ಕಾರಂತ ಕಲಾಭವನದಲ್ಲಿ ಸೆ.28ರಂದು ಕೋಟತಟ್ಟು ಗ್ರಾ.ಪಂ. 2017-18ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ನಡೆಯಿತು.

ಕೋಟ-ಪಡುಕರೆ ಕಾಲೇಜಿನ ಸಮೀಪ ಕಾರ್ಯನಿರ್ವಹಿಸುತ್ತಿರುವ ಓಶಿಯನ್‌ ಪ್ರೊಡಕ್ಟ್ ಕಾರ್ಖಾನೆಯವರು ರಸ್ತೆಯ ತಿರುವಿನಲ್ಲಿ ಎತ್ತರದ ತಡೆಗೋಡೆ ನಿರ್ಮಿಸಿದ್ದು ಇದರಿಂದ ಪಾರಂಪಳ್ಳಿ ಕಡೆಗೆ ಸಂಚರಿಸುವವರಿಗೆ ಎದುರಿನಿಂದ ಬರುವ ವಾಹನಗಳನ್ನು ಗುರುತಿಸಲು ಅಸಾಧ್ಯವಾಗುತ್ತಿದೆ.ಈ ಕುರಿತು ಹಲವು ಬಾರಿ ಗ್ರಾ.ಪಂ.ಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ತತ್‌ಕ್ಷಣ ಆ  ತಡೆಗೋಡೆಯ ಎತ್ತರವನ್ನು ತಗ್ಗಿಸಲು ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಸ್ಥಳೀಯ ಮುಖಂಡ ವಿವೇಕ ಸುವರ್ಣ ಅವರ ನೇತೃತ್ವದಲ್ಲಿ ಆಗ್ರಹಿಸಿದರು.

ಈ ಸಂದರ್ಭ  ಗ್ರಾ.ಪಂ. ಕಾರ್ಯದರ್ಶಿ ಮೀರಾ ಹಾಗೂ ಗ್ರಾ.ಪಂ. ಅಧ್ಯಕ್ಷ ರಘು ತಿಂಗಳಾಯ ಪಂಚಾಯತ್‌ ಕೈಗೊಂಡ ಕ್ರಮದ ಕುರಿತು ತಿಳಿಸಿದರು ಹಾಗೂ ಸಂಜೆ ಈ ಸ್ಥಳಕ್ಕೆ ಪ್ರಾದೇಶಿಕ ಸಾರಿಗೆ ಆಯುಕ್ತರು ಹಾಗೂ ಮೀನು ಗಾರಿಕೆ ಇಲಾಖೆಯವರು ಭೇಟಿ ನೀಡಿ ಪರಿಶೀಲಿಸಲಿದ್ದಾರೆ.  ಅನಂತರ ಈ ಕುರಿತು ಸೂಕ್ತ  ನಿರ್ಣಯ ಕೈಗೊಳ್ಳಲಾಗುವುದು ಎಂದರು. 

ಆದರೆ ಗ್ರಾಮಸ್ಥರು ತೃಪ್ತರಾಗದೆ ತೆರವಿಗೆ ನಿರ್ಣಯ ಕೈಗೊಳ್ಳಬೇಕು, ಅಧಿಕಾರಿಗಳು ಬಂದು ಪರಿಶೀಲಿಸಿ ತೀರ್ಮಾನ ಕೈಗೊಳ್ಳುವ ತನಕ  ಸಭೆ ಮುಂದುವರಿಸಬೇಕು  ಎಂದು ಪಟ್ಟು ಹಿಡಿದರು. ಅನಂತರ ಈ ಕುರಿತು ನಿರ್ಣಯವನ್ನು  ಬಾಕಿ ಉಳಿಸಿಕೊಂಡು ಸಭೆ ಮುಂದುವರಿಸಲಾಯಿತು. ಅನಂತರ ಸಂಜೆ ಆರ್‌ಟಿಒ ಉಪಆಯುಕ್ತ ವರ್ಣೇಕರ್‌ ಅವರು ಸ್ಥಳ ಪರಿಶೀಲಿಸಿ ಈ ಕುರಿತು ವರದಿಯನ್ನು ಜಿಲ್ಲಾಧಿಕಾರಿಗೆ ನೀಡಲಾಗುವುದು. ಈ ಸಭೆಯಲ್ಲಿ ಗ್ರಾಮಸ್ತರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿ ಮನವಿಯನ್ನು ತಿಳಿಸಿದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಭರವಸೆ ನೀಡಿದರು. 

ಮಕ್ಕಳ ತಜ್ಞರು ಲಭ್ಯ
ಸಭೆಯ ಆರಂಭದಲ್ಲಿ ಇಲಾಖೆ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ  ಕೋಟ ಸಮುದಾಯ ಆರೋಗ್ಯಕೇಂದ್ರದ ವೈದ್ಯಾಧಿಕಾರಿ ಡಾ| ವಿಶ್ವನಾಥ, ಇದೀಗ ನಮ್ಮ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರ ನೇಮಕವಾಗಿದೆ.  ಮಕ್ಕಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಇವರನ್ನು ಸಂಪರ್ಕಿಸಬಹುದು ಮತ್ತು ಅನೇಕ ಆಧುನಿಕ ಸೌಕರ್ಯಗಳು ಲಭ್ಯವಿದ್ದು ರೋಗಿಗಳು ಸದುಪಯೋಗಪಡೆದುಕೊಳ್ಳ ಬಹುದು ಎಂದರು.

ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ತ್ರೀರೋಗ ತಜ್ಞರನ್ನು ನೇಮಕ ಮಾಡುವಂತೆ ಗ್ರಾಮಸ್ಥರಾರ ರಾಮಣ್ಣ ಪೂಜಾರಿ ಹಂದಟ್ಟು , ದಿನೇಶ್‌ ಗಾಣಿಗ ಮನವಿ ಮಾಡಿದರು. ಅರಣ್ಯ ಇಲಾಖೆಯ ಅಧಿಕಾರಿ  ಜೀವನ್‌ದಾಸ್‌ ಶೆಟ್ಟಿ, ಮೆಸ್ಕಾಂನ ಗುರುಪ್ರಸಾದ್‌, ಕಂದಾಯ ಇಲಾಖೆಯ ಚಲುವರಾಜ್‌ ಮುಂತಾದವರು ತಮ್ಮ ಇಲಾಖೆ ಕುರಿತು ಮಾಹಿತಿ ನೀಡಿದರು.

ಪಶು ಇಲಾಖೆಯ ಅರುಣ್‌ ಕುಮಾರ್‌ ಮಾರ್ಗದರ್ಶಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಜಿ.ಪಂ.ಸದಸ್ಯ ರಾಘವೇಂದ್ರ ಕಾಂಚನ್‌, ಪಿ.ಡಿ.ಒ. ಸುಜಾತಾ, ಮಾಜಿ ಅಧ್ಯಕ್ಷ ಪ್ರಮೋದ್‌ ಹಂದೆ, ಉಪಾಧ್ಯಕ್ಷ ಲೋಕೇಶ್‌ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ದಾರಿದೀಪಕ್ಕೆ ಬದಲಿ ವ್ಯವಸ್ಥೆ 
ಕೋಟತಟ್ಟು ಗ್ರಾ.ಪಂ.ನಲ್ಲಿ ಈ ಹಿಂದೆ ಸಂಪೂರ್ಣ ಸೋಲಾರ್‌ ದಾರಿದೀಪವಿತ್ತು. ಆದರೆ ಇದೀಗ  ಅದು ನಿರ್ವಹಣೆ ಇಲ್ಲದೆ ಸೊರಗುತ್ತಿದೆ.  ಆದ್ದರಿಂದ ಇದಕ್ಕೆ ಪೂರಕ ವ್ಯವಸ್ಥೆ ಮಾಡುವಂತೆ ರಂಜಿತ್‌ ಬಾರಿಕೆರೆ  ತಿಳಿಸಿದರು. ಸಮಸ್ಯೆಯ ಕುರಿತು ಈಗಾಗಲೇ ಗಮನಹರಿಸಿದ್ದು ಸೋಲಾರ್‌ ದೀಪ ತೆಗೆದು ಎಲ್‌.ಇ.ಡಿ. ಬಲ್ಬ್ಗಳನ್ನು ಅಳವಡಿಸಲಾಗುವುದು ಎಂದು ಅಧ್ಯಕ್ಷರು ತಿಳಿಸಿದರು. 

ರೈತ ಸಂಪರ್ಕ ಕೇಂದ್ರದಲ್ಲಿ ಬಾಡಿಗೆ ಸೇವಾ ಕೇಂದ್ರ
ಕೋಟ ರೈತ ಸಂಪರ್ಕ ಕೇಂದ್ರದಲ್ಲಿ  ಇದೀಗ ಕೃಷಿ ಯಂತ್ರೋಪಕರಣಗಳ ಬಾಡಿಗೆ ಸೇವಾ ಕೇಂದ್ರದ ಕಚೇರಿ ಆರಂಭ ವಾಗಿದ್ದು, ರೈತರಿಗೆ ಯಾವುದೇ ಕೃಷಿ ಯಂತ್ರಗಳು ಬಾಡಿಗೆಗೆ ಬೇಕಾದಲ್ಲಿ ಸಂಪರ್ಕಿಸಬಹುದು ಎಂದು ಚಂದ್ರಶೇಖರ್‌ ಉಪಾಧ್ಯ ತಿಳಿಸಿದರು.

ಅಕ್ಟೋಬರ್‌ನಲ್ಲಿ  ಎಸ್‌.ಎರ್‌ಎಲ್‌ಎಂ ಘಟಕ 
ಗ್ರಾ.ಪಂ.ವ್ಯಾಪ್ತಿಯಲ್ಲಿ ಕಸದ ಸಮಸ್ಯೆ ಹೆಚ್ಚುತ್ತಿದೆ. ಹೆದ್ದಾರಿ ಬದಿಯಲ್ಲಿ ಅಕ್ರಮವಾಗಿ ಕಸ ಎಸೆಯಲಾಗುತ್ತಿದೆ. ಆದ್ದರಿಂದ ಈ ಕುರಿತು ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ತಿಳಿಸಿದರು. ಸಮಸ್ಯೆಯ ಪರಿಹಾರಕ್ಕಾಗಿ ಈಗಾಗಲೇ ಘನ-ದ್ರವ ತ್ಯಾಜ್ಯ ಸಂಪನ್ಮೂಲ ಸಂಸ್ಕೃರಣಾ ಘಟಕ ಸ್ಥಾಪನೆಗೆ ಮುಂದಾಗಿದ್ದು ಅಕ್ಟೋಬರ್‌ನಲ್ಲಿ ಅಳವಡಿಸಿಕೊಳ್ಳಲಾಗುವುದು. ಆಗ ಗ್ರಾಮಸ್ಥರು ನಿಗದಿತ ರೀತಿಯಲ್ಲಿ ಒಣಕಸಗಳನ್ನು ನೀಡಿ ಸಹಕಾರ ನೀಡಬೇಕು ಎಂದು ಅಧ್ಯಕ್ಷರು ತಿಳಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.