ಕೋಟೇಶ್ವರ: ಅಖೀಲ ಕರ್ನಾಟಕ ಬ್ರಾಹ್ಮಣ ಮಹಾ ಸಮ್ಮೇಳನ

ರಾಜ್ಯದೆಲ್ಲೆಡೆಯಿಂದ ಹರಿದು ಬಂತು ಜನಸಾಗರ

Team Udayavani, Dec 29, 2019, 4:56 AM IST

bg-19

ಕುಂದಾಪುರ: ಅವಿಭಜಿತ ದ.ಕ. ಕನ್ನಡ ಜಿಲ್ಲೆಯಲ್ಲಿಯೇ ಇದೇ ಮೊದಲ ಬಾರಿಗೆ ನಡೆಯುತ್ತಿರುವ, ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾ ಸಭಾದ ಆಶ್ರಯದಲ್ಲಿ ಕೋಟೇಶ್ವರದ ಕಾಳಾವರ ಶ್ರೀ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ ಎರಡು ದಿನಗಳ ಕಾಲ ಆಯೋಜನೆಗೊಂಡಿರುವ 10ನೇ ಅಖೀಲ ಕರ್ನಾಟಕ ಬ್ರಾಹ್ಮಣ ಮಹಾ ಸಮ್ಮೇಳನವು ಶನಿವಾರ ವಿಧ್ಯುಕ್ತವಾಗಿ ಆರಂಭಗೊಂಡಿತು.

ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಕೆ.ಎನ್‌. ವೆಂಕಟನಾರಾಯಣ ಅವರು ಈ ಮಹಾಸಮಾವೇಶದ ಧ್ವಜಾರೋಹಣ ನೆರವೇರಿಸಿದರು. ಬೆಳಗ್ಗೆ ವರೇಣ್ಯ ಗಾಯತ್ರೀ ಯಾಗಶಾಲೆಯಲ್ಲಿ ಶೃಂಗೇರಿ ಶ್ರೀ ಶಾರದಾ ಪೀಠದ ಪ್ರಾಂತೀಯ ಧರ್ಮಾಧಿಕಾರಿ ವೇ|ಮೂ| ಪಿ. ಲೋಕೇಶ ಅಡಿಗ ಬಡಾಕೆರೆ ಅವರ ನೇತೃತ್ವದಲ್ಲಿ, ಪ್ರಧಾನ ಅರ್ಚಕ ವೇದಬ್ರಹ್ಮಶ್ರೀ ಲಕ್ಷ್ಮೀನಾರಾಯಣ ಭಟ್‌ಸಹಕಾರದೊಂದಿಗೆ ಶ್ರೀ ಗಾಯತ್ರಿ ಯಜ್ಞ ಪ್ರಾರಂಭಗೊಂಡು, ಬಳಿಕ ಮಹಾಯಜ್ಞದ ಪೂರ್ಣಾಹುತಿಯೊಂದಿಗೆ ಸಂಪನ್ನಗೊಂಡಿತು.

ಸಹಸ್ರಾರು ಮಂದಿ ಭಾಗಿ
ಈ ಮಹಾಸಮ್ಮೇಳನಕ್ಕೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ವಿಪ್ರ ಸಮಾಜ ಬಾಂಧವರು ಆಗಮಿಸಿದ್ದರು. ಬೆಂಗಳೂರು, ಶಿವಮೊಗ್ಗ, ಹೊಸನಗರ, ಶೃಂಗೇರಿ, ಹುಬ್ಬಳ್ಳಿ, ಉತ್ತರ ಕನ್ನಡ, ಮಂಗಳೂರು ಸಹಿತ ರಾಜ್ಯದೆಲ್ಲೆಡೆಯಿಂದ ಅಂದಾಜು 30 ಸಾವಿರಕ್ಕೂ ಮಿಕ್ಕಿ ಮಂದಿ ಭಾಗವಹಿಸಿದ್ದರು.

ವಿವಿಧ ಮಳಿಗೆಗಳು
ಮಹಾ ಸಮ್ಮೇಳನದಲ್ಲಿ ಪುಸ್ತಕ, ತಿಂಡಿ – ತಿನಿಸುಗಳು, ವಸ್ತ್ರ, ಯಂತ್ರೋಪಕರಣಗಳ ಹತ್ತಾರು ಮಳಿಗೆಗಳನ್ನು ಹಾಕಲಾಗಿದ್ದು, ಜನರು ಖರೀದಿಗೆ ಮುಗಿ ಬೀಳುತ್ತಿರುವುದು ಕಂಡು ಬಂತು.

ವಿಶೇಷ ಬಸ್‌
ಇನ್ನೂ ಸಮ್ಮೇಳನಕ್ಕೆ ತೆರಳಲು ಅನುಕೂಲ ವಾಗುವಂತೆ ಕುಂದಾಪುರದಿಂದ ಕೋಟೇಶ್ವರದ ಕಾಲೇಜುವರೆಗೆ ವಿಶೇಷ ಬಸ್‌ ವ್ಯವಸ್ಥೆಗಳನ್ನು ಕೂಡ ಕಲ್ಪಿಸಲಾಗಿತ್ತು.

ಸದಾಚಾರ ಮೈಗೂಡಿಸಿಕೊಳ್ಳಿ: ಶೃಂಗೇರಿ ಶ್ರೀ ಉದ್ಘಾಟನ ಸಮಾರಂಭಕ್ಕೂ ಮುನ್ನ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಮಹಾ ಸ್ವಾಮೀಜಿ ಅವರು ಆಶೀರ್ವಚನ ನೀಡಿ, ಎಲ್ಲ ವೇದಗಳನ್ನು ಅಧ್ಯಯನ ಮಾಡಿದರೂ, ಸದಾಚಾರಗಳನ್ನು ಮೈಗೂಡಿಸಿಕೊಳ್ಳದಿದ್ದರೆ ಏನೂ ಪ್ರಯೋಜನವಿಲ್ಲ. ಲೋಕದ ಕ್ಷೇಮಕ್ಕಾಗಿ ಗಾಯತ್ರಿ ಮಹಾಯಜ್ಞವನ್ನು ನೆರವೇರಿಸಲಾಗಿದೆ. ಒಳ್ಳೆಯ ಕೆಲಸ – ಕಾರ್ಯಗಳು ಯಾರಿಂದಲಾದರೂ ನಡೆಯುತ್ತಿದ್ದರೆ ಅದನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ. ಎಲ್ಲರ ಕ್ಷೇಮ ಬಯಸುವುದರಿಂದ ಸಮಾಜದ ಕ್ಷೇಮವೂ ಒಲಿಯುತ್ತದೆ ಎಂದವರು ಹೇಳಿದರು.

ಜಿಲ್ಲೆಯ ಪ್ರಥಮ ಸಮ್ಮೇಳನ
ಧ್ವಜಪುರ ಖ್ಯಾತಿಯ ಕೋಟೇಶ್ವರದಲ್ಲಿ 10ನೇ ಅಖೀಲ ಕರ್ನಾಟಕ ಬ್ರಾಹ್ಮಣ ಮಹಾ ಸಮ್ಮೇಳನ ನಡೆಯುತ್ತಿದ್ದು, 2016ರಲ್ಲಿ ಬೆಳಗಾವಿಯಲ್ಲಿ 9ನೇ ಸಮ್ಮೇಳನ ಆಯೋಜನೆಗೊಂಡಿದ್ದರೆ, ಅದಕ್ಕೂ ಮೊದಲು 7 ಬಾರಿ ಬೆಂಗಳೂರಿನಲ್ಲಿ ಹಾಗೂ 1 ಸಲ ಹುಬ್ಬಳ್ಳಿಯಲ್ಲಿ ಈ ಮಹಾಸಮ್ಮೇಳನ ನಡೆದಿತ್ತು. ಇದು ಉಡುಪಿ ಜಿಲ್ಲೆ ಮಾತ್ರವಲ್ಲದೆ ಕರಾವಳಿಯಲ್ಲಿ ನಡೆಯುತ್ತಿರುವ ಮೊದಲ ಮಹಾ ಸಮ್ಮೇಳನ ಎನ್ನುವುದು ಇಲ್ಲಿನ ವೈಶಿಷ್ಟ್ಯ.

ಮಹಾ ಸಮ್ಮೇಳನದಲ್ಲಿ ವಿವಿಧ ಗೋಷ್ಠಿಗಳು
ಅಖೀಲ ಕರ್ನಾಟಕ ಬ್ರಾಹ್ಮಣ ಮಹಾ ಸಮ್ಮೇಳನದಲ್ಲಿ ವಿವಿಧ ವಿಚಾರ ಗೋಷ್ಠಿಗಳು, ಚಿಂತನ – ಮಂಥನ ನಡೆಯಿತು. ಶನಿವಾರ ಮಧ್ಯಾಹ್ನ ಬ್ರಾಹ್ಮಣ್ಯ ಆಚರಣೆ – ರಕ್ಷಣೆ – ಸಂಘಟನೆ ವಿಚಾರವಾಗಿ ಧಾರ್ಮಿಕ ವಿಚಾರ ಗೋಷ್ಠಿ ನಡೆಯಿತು.
ಬಳಿಕ ಬ್ರಾಹ್ಮಣ ಸಮಾಜ ಸಂಘಟನೆ – ಸವಾಲುಗಳು, ಮಾಧ್ಯಮ, ಸಂಘ-ಸಂಸ್ಥೆಗಳ ಪಾತ್ರದ ಕುರಿತು ವಿಚಾರಗೋಷ್ಠಿ ನಡೆಯಿತು.
ಬಳಿಕ ಗುರುವಂದನೆ, ಸಂಜೆ ಯುವ ಜನರಿಗೆ ಸಂದೇಶ, ಬಳಿಕ ಚಿಂತನ ಮಂಥನ, ಸಂಜೆ 7 ಗಂಟೆಯಿಂದ ಆಳ್ವಾಸ್‌ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದವರನ್ನು ಮನರಂಜಿಸಿತು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.