ಕೋಟೇಶ್ವರ : ಕ್ಷುಲ್ಲಕ ಕಾರಣಕ್ಕೆ ಹಲ್ಲೆ
Team Udayavani, May 29, 2018, 9:40 AM IST
ಕುಂದಾಪುರ: ಕೋಟೇಶ್ವರ ಗ್ರಾಮದ ಬಾರೊಂದರ ಎದುರು ರವಿವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಸೋಡಾ ಬಾಟಲಿಯಿಂದ ಹಲ್ಲೆ ನಡೆದಿದೆ.
ಕೋಟೇಶ್ವರದ ಮಾರ್ಕೋಡಿನ ಬೆಟ್ಟಿನ ಮನೆ ನವೀನ್ ಗೊಲ್ಲ ಅವರು ಮೇ 27ರಂದು ರಾತ್ರಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಒಂದಕ್ಕೆ ಊಟ ಪಾರ್ಸೆಲ್ ತರಲು ಸ್ನೇಹಿತ ಪ್ರದೀಪ್ ಖಾರ್ವಿ ಜತೆ ತಮ್ಮ ಕಾರಿನಲ್ಲಿ ತೆರಳಿದ್ದರು.
ನವೀನ್ ಗೊಲ್ಲ ಅವರು ತಮ್ಮ ವಾಹನವನ್ನು ಪಾರ್ಕ್ ಮಾಡಿ ಪಾರ್ಸೆಲ್ ಪಡೆದು ವಾಪಸ್ ಬಂದಾಗ ಪಾರ್ಕ್ ಮಾಡಿದ ತಮ್ಮ ವಾಹನದ ಎದುರು ಕೋಟೇಶ್ವರದ ಅಂಕದಕಟ್ಟೆಯ ರಕ್ಷಿತ್ ಶೆಟ್ಟಿ ಮತ್ತು ಇತರರು ತಮ್ಮ ವೋಕ್ಸ್ವ್ಯಾಗನ್ ಕಾರನ್ನು ಅಡ್ಡ ಇಟ್ಟಿದ್ದರು. ಕಾರನ್ನು ತೆಗೆಯಿರಿ ಎಂದಾಗ ಅವರೆಲ್ಲ ಸೇರಿ ಅವಾಚ್ಯ ಶಬ್ದಗಳಿಂದ ಬೈದು ಸೋಡಾ ಬಾಟಲಿಯಿಂದ ಹಲ್ಲೆ ಮಾಡಿದ್ದು, ಅದನ್ನು ಪ್ರಶ್ನಿಸಿದ ಪ್ರದೀಪ್ ಖಾರ್ವಿಗೂ ಅವಾಚ್ಯವಾಗಿ ಬೈದು ಅದೇ ಬಾಟಲಿಯಿಂದ ಹಲ್ಲೆ ಮಾಡಿದ್ದಾರೆ. ನಮ್ಮ ವಿಷಯಕ್ಕೆ ಬಂದರೆ ನಿಮ್ಮನ್ನು ಕೊಲ್ಲದೇ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ