ಕೋಟಿ-ಚೆನ್ನಯ ಥೀಮ್‌ ಪಾರ್ಕ್‌ ಸಿಬಂದಿಗಿಲ್ಲ ಸಂಬಳ

 11 ತಿಂಗಳಿಂದ ಸಿಗದ ವೇತನ; ಜೀವನ ನಿರ್ವಹಣೆ ಸಂಕಷ್ಟ

Team Udayavani, Mar 9, 2020, 5:02 AM IST

ಕೋಟಿ-ಚೆನ್ನಯ ಥೀಮ್‌ ಪಾರ್ಕ್‌ ಸಿಬಂದಿಗಿಲ್ಲ ಸಂಬಳ

ಕಾರ್ಕಳ: ಕಾರ್ಕಳದಲ್ಲಿನ ಕೋಟಿ ಚೆನ್ನಯ ಥೀಮ್‌ ಪಾರ್ಕ್‌ ಸಿಬಂದಿ ಕಳೆದ 11 ತಿಂಗಳಿನಿಂದ ವೇತನವಾಗದೇ ಸಂಕಷ್ಟದಲ್ಲಿದ್ದಾರೆ. ಇದರಿಂದ ಜೀವನ ನಿರ್ವಹಣೆಗಾಗಿ ಪರಿತಪಿಸು ವಂತಹ ದುಃಸ್ಥಿತಿ ಬಂದೊದಗಿದೆ.

ಕೇರ್‌ಟೇಕರ್‌ ಆಗಿರುವ ಸುರೇಂದ್ರ ಪೂಜಾರಿ ಹಾಗೂ ಸೆಕ್ಯುರಿಟಿ ಗಾರ್ಡ್‌ ಆಗಿರುವ ಶ್ಯಾಮ ಕಾಬೆಟ್ಟು ವೇತನವಿಲ್ಲದೇ ದುಡಿಯುತ್ತಿರುವ ಸಿಬಂದಿ. ಸುರೇಂದ್ರ ಪೂಜಾರಿಯವರು 2013ರಲ್ಲಿ ಹಾಗೂ ಶ್ಯಾಮ ಕಾಬೆಟ್ಟು ಅವರು 2017ರಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸೇರ್ಪಡೆಯಾದವರು. ಕಳೆದ ವರ್ಷದಿಂದ ಹೊರ ಗುತ್ತಿಗೆದಾರರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಣ ಸಂದಾಯವಾಗದ ಪರಿಣಾಮ ಗುತ್ತಿಗೆಯಿಂದ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ.

ವೇತನವೂ ಅತ್ಯಲ್ಪ
ಈ ಸಿಬಂದಿಗೆ ಹೊರಗುತ್ತಿಗೆದಾರರಿಂದ ಅತ್ಯಲ್ಪ ಪ್ರಮಾಣದಲ್ಲಿ ಸಂಬಳ ಪಾವತಿಯಾಗುತ್ತಿತ್ತು. ಸುರೇಂದ್ರ ಪೂಜಾರಿಯವರಿಗೆ 8 ಸಾವಿರ ರೂ. ನಿಗದಿಯಾಗಿದ್ದರೆ, ಶ್ಯಾಮ್‌ ಅವರಿಗೆ ದೊರೆಯುತ್ತಿದ್ದ ವೇತನ 7 ಸಾವಿರ ರೂ., ಬೆಳಗ್ಗೆ 9ರಿಂದ 5:30 ತನಕ ಕರ್ತವ್ಯ ನಿರ್ವಹಿಸುತ್ತಿರುವ ಇವರು ಪಾರ್ಕ್‌ನ ಸ್ವತ್ಛತೆ, ಗಿಡಗಳಿಗೆ ನೀರು ಸಿಂಪಡಿಸುವ ಕಾರ್ಯ ಹೀಗೆ ಪ್ರತಿಯೊಂದು ಕೆಲಸವನ್ನೂ ಮಾಡಿಕೊಂಡು ಬಂದಿರುತ್ತಾರೆ. ಆದರೆ ವೇತನವೂ ಅತ್ಯಲ್ಪ, 11 ತಿಂಗಳಿಂದ ಸಂಬಳವೂ ಇಲ್ಲದೆ ಇವರ ಕಷ್ಟ ಹೇಳತೀರದಾಗಿದೆ.

ವಿಶಾಲವಾದ ಥೀಮ್‌ ಪಾರ್ಕ್‌
ತುಳುನಾಡ ವೀರ ಪುರುಷರಾದ ಕೋಟಿ-ಚೆನ್ನಯರ ಹೆಸರಲ್ಲಿ ಕಾರ್ಕಳದಲ್ಲಿ ಕೋಟಿ ಚೆನ್ನಯ ಥೀಮ್‌ ಪಾರ್ಕ್‌ ನಿರ್ಮಾಣವಾಗಿದ್ದು, ಸುಮಾರು 10 ಎಕ್ರೆ ಪ್ರದೇಶದಲ್ಲಿ ವಿಸ್ತರಿಸಿದೆ. ನಗರದಿಂದ 3 ಕಿ.ಮೀ. ದೂರದ ತಾಲೂಕು ಕ್ರೀಡಾಂಗಣದ ಅನತಿ ದೂರದಲ್ಲಿರುವ ಈ ಪಾರ್ಕ್‌ನಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದ ಅಭಿವೃದ್ಧಿ ಕಾಮಗಾರಿ ನಡೆದಿದೆ.

ಎರಡನೇ ಹಂತವಾಗಿ 2 ಕೋಟಿ ರೂ. ವೆಚ್ಚದಲ್ಲಿ ತುಳುನಾಡ ವೈಭವ ಸಾರುವ ಕಲಾಕೃತಿಗಳ ನಿರ್ಮಾಣ, ತೆರೆದ ಸಭಾಂಗಣ, ಉಪಾಹಾರ ಮಂದಿರ, ವಸತಿ ಗೃಹ, ಗ್ರಂಥಾಲಯ ನಿರ್ಮಾಣವಾಗುತ್ತಿದೆ.

ಸಚಿವ ಸಿ.ಟಿ. ರವಿಗೂ ಮನವಿ
ಫೆ. 22ರಂದು ಕೊಂಕಣಿ ಸಾಹಿತ್ಯ ಸಮ್ಮೇಳನ ಉದ್ಘಾಟನೆ ಹಿನ್ನೆಲೆಯಲ್ಲಿ ಕಾರ್ಕಳಕ್ಕೆ ಆಗಮಿಸಿದ ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ ಅವರ ಗಮನಕ್ಕೆ ವೇತನ ಪಾವತಿಯಾಗದ ಕುರಿತು ಗಮನ ಸೆಳೆದಾಗ, ಸ್ಥಳೀಯಾಡಳಿತ ಮತ್ತು ಜಿಲ್ಲಾಡಳಿತವೇ ಪಾರ್ಕ್‌ಗಳ ನಿರ್ವಹಣೆ ಮಾಡುತ್ತಿದೆ. ಹೀಗಾಗಿ ಜಿಲ್ಲಾಡಳಿತದಿಂದ ವೇತನ ಪಾವತಿಯಾಗಬೇಕಾಗಿದೆ ಎಂದಿದ್ದರು.

ಶೌಚಾಲಯಕ್ಕೆ 10 ಲಕ್ಷ ರೂ.
ಪ್ರವಾಸೋದ್ಯಮ ಇಲಾಖೆ ವತಿಯಿಂದ ಬಿಡುಗಡೆಗೊಂಡಿರುವ 10.5 ಲಕ್ಷ ರೂ. ವೆಚ್ಚದಲ್ಲಿ ಥೀಮ್‌ ಪಾರ್ಕ್‌ನಲ್ಲಿ ಶೌಚಾಲಯವೊಂದು ನಿರ್ಮಾಣವಾಗುತ್ತಿದೆ. ಲೋಕೋಪಯೋಗಿ ಇಲಾಖೆ ಕಾಮಗಾರಿ ಕೈಗೆತ್ತಿಗೊಂಡಿದೆ. ಹಂಚಿನಲ್ಲಿ ನಿರ್ಮಾಣವಾಗುತ್ತಿರುವ ಈ ಶೌಚಾಲಯಕ್ಕೆ ಇಷ್ಟೊಂದು ಪ್ರಮಾಣದಲ್ಲಿ ಹಣ ವ್ಯಯವಾಗುವುದೇ ಎಂಬ ಪ್ರಶ್ನೆ ಸಾರ್ವಜನಿಕರದ್ದು.

ಕಾರ್ಕಳದಲ್ಲಿನ ಕೋಟಿ ಚೆನ್ನಯ ಥೀಮ್‌ ಪಾರ್ಕ್‌ ಸಿಬಂದಿ ಕೇರ್‌ ಟೇಕರ್‌ ಸುರೇಂದ್ರ ಪೂಜಾರಿ, ಸೆಕ್ಯುರಿಟಿ ಗಾರ್ಡ್‌ ಶ್ಯಾಮ ಕಾಬೆಟ್ಟು ಕಳೆದ 11 ತಿಂಗಳಿನಿಂದ ವೇತನವಾಗದೇ ಸಂಕಷ್ಟದಲ್ಲಿದ್ದಾರೆ.

ಸುತ್ತೋಲೆಗಿಲ್ಲ ಬೆಲೆ
2019ರ ಸೆ. 24ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಇ-ಮೇಲ್‌ ಮೂಲಕ ಇಲ್ಲಿನ ಸಿಬಂದಿ ವೇತನದ ಕುರಿತು ಮನವಿ ಮಾಡಿಕೊಂಡಾಗ ವೇತನ ಬಿಡುಗಡೆ ಮಾಡುವಂತೆ 2019ರ ನ. 10ರಂದು ಇಲಾಖೆ ನಿರ್ದೇಶಕರಿಂದ ಜಿಲ್ಲಾಧಿಕಾರಿಯವರಿಗೆ ಆದೇಶವಾಗಿರುತ್ತದೆ. ಆದರೆ, ತದನಂತರವೂ ವೇತನವಾಗದಿರುವುದು ಸಿಬಂದಿ ನೋವು ಇಮ್ಮಡಿಗೊಳಿಸಿದೆ.

ವೇತನ ಶೀಘ್ರ ಜಾರಿ
ಕಳೆದ ಬಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಿಡುಗಡೆ ಆಗಿರುವ ಮೊತ್ತ ಕಾರಣಾಂತರಗಳಿಂದ ಲ್ಯಾಪ್ಸ್‌ ಆಗಿದೆ. ಈ ಕುರಿತು ಇಲಾಖೆಯ ಜಂಟಿ ನಿರ್ದೇಶಕರೊಂದಿಗೆ ಚರ್ಚಿಸಿದ್ದೇನೆ. ಮುಂದಿನ ಒಂದು ವಾರದಲ್ಲಿ ಸಿಬಂದಿಗೆ ವೇತನ ಪಾವತಿಯಾಗಲಿದೆ.
-ಕುಮಾರಬಾಬು ಬೆಕ್ಕೇರಿ,ಸಹಾಯಕ ನಿರ್ದೇಶಕರು, ಕನ್ನಡ ಸಂಸ್ಕೃತಿ ಇಲಾಖೆ-ಉಡುಪಿ.

ವೇತನ ದೊರಕಿಸಿಕೊಡುತ್ತೇನೆ
ಕಳೆದ ಬಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ದೊರೆತ ಅನುದಾನ ವಾಪಸಾಗಿದೆ. ಕೆಲಸ ಮಾಡುತ್ತಿರುವ ಸಿಬಂದಿಗೆ ವೇತನ ದೊರಕಿಸಿಕೊಡುತ್ತೇನೆ.
-ಜಿ.ಜಗದೀಶ್‌,ಜಿಲ್ಲಾಧಿಕಾರಿ,ಉಡುಪಿ.

-ರಾಮಚಂದ್ರ ಬರೆಪ್ಪಾಡಿ

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.