ಪ್ಲಾಸ್ಟಿಕ್‌ ಮುಕ್ತ “ಕೊಡಿ ಹಬ್ಬ’ ಆಚರಣೆಗೆ ಒತ್ತು

ಪ್ಲಾಸ್ಟಿಕ್‌ ಚೀಲ ತಂದ್ರೆ ದೇವಸ್ಥಾನ ಪ್ರವೇಶವಿಲ್ಲ!

Team Udayavani, Dec 9, 2019, 5:22 AM IST

0812KLRE1

ಕೋಟೇಶ್ವರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಕೊಡಿ ಹಬ್ಬವನ್ನು ಈ ಬಾರಿ ಪ್ಲಾಸ್ಟಿಕ್‌ ಮುಕ್ತವಾಗಿಸಲು ಸಾರ್ವಜನಿಕರು ಹಾಗೂ ಭಕ್ತರ ಸಹಕಾರ ಬೇಕಿದೆ ಎಂದು ಕೋಟೇಶ್ವರ ಮಹಾತೋಭಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ ಹೇಳಿದ್ದಾರೆ.

ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನ, ಕೋಟೇಶ್ವರ ಗ್ರಾ.ಪಂ., ಬೀಜಾಡಿ ಗ್ರಾ.ಪಂ., ಗೋಪಾಡಿ ಗ್ರಾ.ಪಂ., ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್ ಸಂಸ್ಥೆಯಿಂದ ದೇವಸ್ಥಾನದಲ್ಲಿ ರವಿವಾರ ನಡೆದ ಜಂಟಿ ಪತ್ರಿಕಾಗೋಷ್ಠಿ ಯಲ್ಲಿ ಅವರು ಮಾತನಾಡಿದರು.

ಈಗಾಗಲೇ ಸರಕಾರ ಒಮ್ಮೆ ಬಳಸುವ ಪ್ಲಾಸ್ಟಿಕ್‌ನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಅಲ್ಲದೆ ಪ್ಲಾಸ್ಟಿಕ್‌ ಬಳಕೆಯನ್ನು ಕಡಿಮೆ ಮಾಡಿ ಪರಿಸರವನ್ನು ಉಳಿಸಲು ಪಣತೊಟ್ಟಿದೆ. ಪ್ಲಾಸ್ಟಿಕ್‌ನಿಂದಾಗುವ ಅನಾಹುತಗಳ ಬಗ್ಗೆ ಈಗಾಗಲೇ ನಾಗರಿಕರಿಗೆ ಮನವರಿಕೆ ಆಗಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಡಳಿತದ ಸ್ಪಷ್ಟ ಆದೇಶದಂತೆ ಕೊಡಿ ಹಬ್ಬದಲ್ಲಿ ಪ್ಲಾಸ್ಟಿಕ್‌ ಬಳಸದೆ ಹಬ್ಬವನ್ನು ಆಚರಿಸಿ ಮಾದರಿಯಾಗಬೇಕಿದೆ. ಅಂಗಡಿಗಳ ಮಾಲಕರು ಕೂಡ ಗ್ರಾಹಕರಿಗೆ ಪ್ಲಾಸ್ಟಿಕ್‌ ನೀಡಬಾರದು, ಪರಿಸರ ಹಾನಿ ಮಾಡುವ ವಸ್ತುಗಳನ್ನು ಬಳಸದಂತೆ ಗ್ರಾ.ಪಂ. ಹಾಗೂ ಆಡಳಿತ ಮಂಡಳಿ ಎಚ್ಚರಿಕೆ ನೀಡಬೇಕು ಎಂದು ಗೋಪಾಡಿ ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ ಜಿ. ಪುತ್ರನ್‌ ಹೇಳಿದರು.

ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್ ರೂವಾರಿ ಭರತ್‌ ಬಂಗೇರ, ಜನರಲ್ಲಿ ಪ್ಲಾಸ್ಟಿಕ್‌ ವಸ್ತುಗಳಿಂದಾಗುವ ಅನಾಹುತದ ಬಗ್ಗೆ ಎಚ್ಚರಿಕೆ ನೀಡಲು ಹಬ್ಬದಲ್ಲಿ ಒಂದು ಸ್ಟಾಲ್‌ ನಿರ್ಮಿಸಿ ಅಲ್ಲಿ ಜಾಗೃತಿ ಕಾರ್ಯಕ್ರಮ, ವಿಡಿಯೋ ಮೂಲಕ ತಾಜ್ಯ ಸಮಸ್ಯೆ ಕುರಿತು ಅರಿವು ಮೂಡಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಜಾತ್ರೆಯಲ್ಲಿ ಸಹಸ್ರಾರು ಜನರು ನೆರೆಯುವ ಕಾರಣ ಈ ಅಭಿಯಾನ ಯಶಸ್ವಿಯಾಗಲಿದ್ದು ಜನರು ಕೂಡ ಸ್ಪಂದಿಸುವ ಭರವಸೆ ಇದೆ ಎಂದರು.

ಕೋಟೇಶ್ವರ ಗ್ರಾ.ಪಂ. ಅಧ್ಯಕ್ಷೆ ಶಾಂತಾ ಗೋಪಾಲಕೃಷ್ಣ, ಬೀಜಾಡಿ ಗ್ರಾ.ಪಂ.ನ ಸದಸ್ಯ ವಾದಿರಾಜ ಹೆಬ್ಟಾರ್‌, ಸಮಾಜ ಸೇವಕ ಗಣೇಶ್‌ ಪುತ್ರನ್‌, ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್ ಸದಸ್ಯರಾದ ಅರುಣ್‌ ಕುಂದಾಪುರ, ಶಶಿಧರ ಎಚ್‌. ಎಸ್‌., ಸುಹಿತ್‌ ಬಂಗೇರ, ಸತ್ಯನಾರಾಯಣ ಮಂಜ, ರೋಹನ್‌ ಬಿ., ನಾಗಭೂಷಣ್‌ ಕಾಮತ್‌, ಸಂತೋಷ್‌ ಕಾಮತ್‌, ಪವಿತ್ರಾ ಕಾಮತ್‌, ಪ್ರತೀಕ್ಷಾ ಕಾಮತ್‌ ಅಕ್ಷಯ್‌ ಮೊದಲಾದವರು ಉಪಸ್ಥಿತರಿದ್ದರು.

ಕೊಡಿಹಬ್ಬದ ವಿಶೇಷ ಕಟ್ಟೆವೋಲಗ
ಕೋಟೇಶ್ವರ: ಇಲ್ಲಿನ ಶ್ರೀ ಕೋಟಿಲಿಂಗೇಶ್ವರ ದೇಗುಲದ ಕೊಡಿ ಹಬ್ಬದ ಸಲುವಾಗಿ ಡಿ. 9ರಿಂದ ಡಿ. 11ರ ತನಕ ಕಟ್ಟೆವೋಲಗ ನಡೆಯಲಿದೆ.

ತೆಂಕಿನಕಟ್ಟೆ, ಬಡಗಿನಕಟ್ಟೆ ಹಾಗೂ ಮೂಡಿನ ಕಟ್ಟೆವೋಲಗದ ಸಲುವಾಗಿ ಆಯ್ದ ಕಟ್ಟೆಗಳಲ್ಲಿ ವಿಶೇಷ ಪೂಜೆ ನಡೆಯಲಿದೆ. ಗೋಪಾಡಿ, ಕಟೆRàರೆ, ಕುಂದಾಪುರ ತನಕ ಉತ್ಸವ ಮೂರ್ತಿ ಸಾಗಲಿದೆ.

ದೇಗುಲದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತಾಂಡವ ನೃತ್ಯ ಹಾಗೂ ಚಂಡೆ ವಾದನ, ಡಿ. 8ರಂದು ನಡೆಯುವ ವೃಷಭ ವಾಹನ ಉತ್ಸವಕ್ಕೆ ಗ್ರಾಮಸ್ಥರು ಆಗಮಿಸುತ್ತಾರೆ.

ದೇಗುಲದ ಜಾತ್ರೆಯ ಸಲುವಾಗಿ ರಥಕ್ಕೆ ವಿಶೇಷ ಪುಷ್ಪಾಲಂಕಾರ ನಡೆಯಲಿದೆ. ಕೊಡಿ ಹಬ್ಬದ ಸಲುವಾಗಿ ಸಭಾಭವನದಲ್ಲಿ ಐದು ದಿನ ಕಾಲ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ದೇಗುಲ ಸಹಿತ ಇಡೀ ಪೇಟೆಯನ್ನು ದೀಪಾಲಂಕಾರ ದಿಂದ ವಿಶೇಷವಾಗಿ ಶೃಂಗಾರಿಸಲಾಗಿದೆ.

ಪ್ಲಾಸ್ಟಿಕ್‌ ಬಳಸಿದಲ್ಲಿ
ಸೂಕ್ತ ದಂಡ
ದೇಗುಲವನ್ನು ಕಟ್ಟುನಿಟ್ಟಾಗಿ ಪ್ಲಾಸ್ಟಿಕ್‌ ಮುಕ್ತಗೊಳಿಸಬೇಕೆಂದು ಸುತ್ತೋಲೆಯೂ ಇದೆ. ಪೂಜಾ ಸಾಮಗ್ರಿಗಳನ್ನು ಪ್ಲಾಸ್ಟಿಕ್‌ ಚೀಲದಲ್ಲಿ ತಂದರೆ ಅವರಿಗೆ ದೇವಸ್ಥಾನ ಪ್ರವೇಶ ನಿಷೇಧಿಸಲಾಗಿದೆ. ಭಕ್ತರಿಗೆ ಸ್ವಯಂಸೇವಕರು ಈ ಬಗ್ಗೆ ಮಾಹಿತಿ ಮತ್ತು ಅರಿವು ಮೂಡಿಸಲಿದ್ದಾರೆ. ಅಲ್ಲದೆ ಜಾತ್ರೆಯಲ್ಲಿ ವ್ಯಾಪಾರ ಮಾಡುವ ವ್ಯಾಪಾರಸ್ಥರು ಪ್ಲಾಸ್ಟಿಕ್‌ ಉಪಯೋಗಿಸದಂತೆ ನಿರ್ಬಂಧಿಸಲಾಗಿದೆ. ಅಂಗಡಿ ಮುಂಗಟ್ಟುಗಳನ್ನು ತೆರೆದು ವ್ಯಾಪಾರ ಮಾಡುವವರು ಪ್ಲಾಸ್ಟಿಕ್‌ ಬಳಸಿದಲ್ಲಿ ಸೂಕ್ತ ದಂಡ ಹಾಗೂ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವುದಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಗೋಪಾಲಕೃಷ್ಣ ಶೆಟ್ಟಿ ಅವರು ಹೇಳಿದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.