ಗುಣಮಟ್ಟದ ಶಿಕ್ಷಣಕ್ಕಾಗಿ ಕೆಪಿಎಸ್‌: ಲಾಲಾಜಿ ಮೆಂಡನ್‌


Team Udayavani, Jun 11, 2019, 6:00 AM IST

1006RA1E_1006MN__1

ಪಡುಬಿದ್ರಿ: ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಲು ಹಾಗೂ ಆಂಗ್ಲ ಭಾಷಾ ಶಿಕ್ಷಣವನ್ನು ಸರಕಾರಿ ಶಾಲೆಗಳಲ್ಲೂ ಆರಂಭಿಸುವ ಉದ್ದೇಶದೊಂದಿಗೆ 276 ಕರ್ನಾಟಕ ಪಬ್ಲಿಕ್‌ ಸ್ಕೂಲ್‌ಗ‌ಳನ್ನು ರಾಜ್ಯದಲ್ಲಿ ತೆರೆಯಲಾಗಿದೆ ಎಂದು ಕಾಪು ಶಾಸಕ ಲಾಲಾಜಿ ಮೆಂಡನ್‌ ಹೇಳಿದರು.

ಅವರು ಜೂ. 10ರಂದು ಪಡುಬಿದ್ರಿಯ ಕರ್ನಾಟಕ ಪಬ್ಲಿಕ್‌ ಸ್ಕೂಲನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಶಾಲೆಯ ವಾತಾವರಣವು ಯಾವುದೇ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಬಾರದೆಂಬ ದೃಷ್ಟಿಯಿಂದ ಪಡುಬಿದ್ರಿಯ ಈ ಶಾಲೆಗೆ ಈಗಾಗಲೇ ಸರಕಾರದಿಂದ 1 ಕೋಟಿ ರೂ.ಗಳ ಅನುದಾನವನ್ನು ಪಡೆಯುವುದಕ್ಕಾಗಿ ಪ್ರಸ್ತಾವನೆಯನ್ನು ಈಗಾಗಲೇ ಸಲ್ಲಿಸಲಾಗಿದೆ. ಈ ಶಾಲೆಯಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಲೂ ಪ್ರಯತ್ನಿಸಲಾಗುವುದು ಎಂದು ಶಾಸಕ ಲಾಲಾಜಿ ಮೆಂಡನ್‌
ತಿಳಿಸಿದರು.

ಸಭೆಯನ್ನು ಉದ್ದೇಶಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಮಾತನಾಡಿ, ತರಬೇತಿ ಹೊಂದಿದ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಮೂಲಕ ಎಲ್‌ಕೆಜಿ ಶಿಕ್ಷಕರನ್ನು ನೇಮಿಸಿಕೊಳ್ಳುವುದರೊಂದಿಗೆ ಉತ್ತಮ ಶಿಕ್ಷಣವನ್ನು ನೀಡಲು ಸರಕಾರಿ ಶಾಲೆಗಳೂ ಬದ್ಧವಾಗಿವೆ ಎಂಬುದಾಗಿ ಹೇಳಿದರು. ಅತಿಥಿಗಳಾಗಿದ್ದ ಪಡುಬಿದ್ರಿ ಗ್ರಾ. ಪಂ. ಅಧ್ಯಕ್ಷೆ ದಮಯಂತಿ ಅಮೀನ್‌, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ರವೀಂದ್ರನಾಥ ಜಿ. ಹೆಗ್ಡೆ ಮಾತನಾಡಿದರು.

ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು, ಜಿ. ಪಂ. ಸದಸ್ಯ ಶಶಿಕಾಂತ್‌ ಪಡುಬಿದ್ರಿ, ತಾ. ಪಂ. ಸದಸ್ಯೆ ನೀತಾ ಗುರುರಾಜ್‌, ಶಿಕ್ಷಣ ಸಂಯೋಜಕಿ ಉಮಾ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಸರೋಜಿನಿ ಉಪಸ್ಥಿತರಿದ್ದರು. ಕೆಪಿಎಸ್‌ ಮೇಲ್ವಿಚಾರಕಿ, ಕಾಲೇಜು ಪ್ರಭಾರ ಪ್ರಾಂಶುಪಾಲೆ ಯಶೋದಾ ಸ್ವಾಗತಿಸಿದರು. ಶಿಕ್ಷಕಿ ಫ್ಲೋರಿನ್‌ ಆಳ್ವ ಕಾರ್ಯಕ್ರಮ ನಿರ್ವಹಿಸಿದರು. ಪ್ರಾಧ್ಯಾಪಕ ಪ್ರಸನ್ನ ವಂದಿಸಿದರು.

ಬಡವಾದ ಕನ್ನಡ ಮಾಧ್ಯಮ ಶಾಲೆ
ಕೆಪಿಎಸ್‌ ಪ್ರವೇಶಾತಿಗಾಗಿ ವಿದ್ಯಾರ್ಥಿಗಳನ್ನು ಮನವೊಲಿಸಲಾಗಿದ್ದು ಸದ್ಯ ಕನ್ನಡ ಮಾಧ್ಯಮದ ಒಂದನೇ ತರಗತಿಗೆ ಪಡುಬಿದ್ರಿಯ ಕೆಪಿಎಸ್‌ನಲ್ಲಿ ವಿದ್ಯಾರ್ಥಿಗಳೇ ಇಲ್ಲ. ಸದ್ಯ ಇಲ್ಲಿನ ಕೆಪಿಎಸ್‌ನಲ್ಲಿ ಎಲ್‌ಕೆಜಿಗೆ 6, ಯುಕೆಜಿಗೆ 7ಹಾಗೂ ಆಂಗ್ಲ ಮಾಧ್ಯಮ ಶಿಕ್ಷಣದ 1ನೇ ತರಗತಿಗೆ 7 ವಿದ್ಯಾರ್ಥಿಗಳು ಇದ್ದಾರೆ. ಇನ್ನೂ ಮಕ್ಕಳು ಸೇರ್ಪಡೆಯಾಗಲಿರುವುದಾಗಿಯೂ ಶಿಕ್ಷಕಿಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.