ಶ್ರೀಕೃಷ್ಣ ಮಠದಲ್ಲಿ “ಕೃಷ್ಣ ಪ್ರಸಾದ ಸೂರೆ’ !


Team Udayavani, Jan 18, 2020, 12:24 AM IST

1701UDU14-1

ಉಡುಪಿ: ಪರ್ಯಾಯದ ಕೊನೆಯ ದಿನ ನಡೆಯುವ “ಸೂರೆ’ ಎಂಬ ಆಚರಣೆ ಎಲ್ಲರ ಗಮನ ಸೆಳೆಯುತ್ತದೆ. ಅಂತಹ ಆಚರಣೆ ಪಲಿಮಾರು ಪರ್ಯಾಯದ ಅಂತಿಮ ದಿನವಾದ ಶುಕ್ರವಾರ ನಡೆಯಿತು.

ಪ್ರಸಾದ ಸೂರೆ ಮಾಡಿದ ಭಕ್ತರು!
ಮಧ್ಯಾಹ್ನದ ಅನ್ನ ಸಂತರ್ಪಣೆ ಬಳಿಕ ಉಳಿದ ಆಹಾರ ಪದಾರ್ಥಗಳನ್ನು ಭಕ್ತರು “ಸೂರೆ’ (ತೆಗೆದುಕೊಂಡು ಹೋಗುವುದು) ಮಾಡಿದರು. ಪಾಕಶಾಲೆಗೆ ಒಮ್ಮೆಗೆ ನುಗ್ಗಿದ ಭಾರೀ ಸಂಖ್ಯೆಯ ಜನ ದೊಡ್ಡ ಪಾತ್ರೆಯಲ್ಲಿದ್ದ ಅನ್ನ, ಸಾರು, ಪಾಯಸ, ಪಲ್ಯಗಳನ್ನು ಹೊತ್ತೂಯ್ದರು. ಪಾತ್ರೆ, ಬಕೆಟ್‌ಗಳಲ್ಲಿ ಆಹಾರ ಪದಾರ್ಥ ತುಂಬಿಸಿಕೊಂಡರು. ಕೆಲವೇ ನಿಮಿಷಗಳಲ್ಲಿ ಎಲ್ಲ ಆಹಾರ ಪದಾರ್ಥ ಖಾಲಿ ಆಯಿತು.

ಪ್ರವಾಸಿಗರಿಗೆ ಆಶ್ಚರ್ಯ
ಬಡಗು ಮಾಳಿಗೆಯಲ್ಲಿ ನಿಂತಿದ್ದ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ ಅವರು ಇದನ್ನು ವೀಕ್ಷಿಸಿದರು. ಇನ್ನೂ ಈ ಆಚರಣೆಯ ಬಗ್ಗೆ ಅರಿವಿಲ್ಲದ ಪ್ರವಾಸಿಗರು ಆಶ್ಚರ್ಯಚಕಿತರಾಗಿ ನೋಡುತ್ತಿದ್ದರು. “ಸೂರೆ’ ಆಹಾರವನ್ನು ಕೃಷ್ಣ ಪ್ರಸಾದ ಎಂದೇ ಭಾವಿಸಲಾಗುತ್ತದೆ. ಪ್ರತಿ ಎರಡು ವರ್ಷಕ್ಕೊಮ್ಮೆ ಅಂದರೆ ಮಠವೊಂದರ ಪರ್ಯಾಯದ ಅಂತಿಮ ದಿನ ಮಾತ್ರ ಈ ಅವಕಾಶ ಸಿಗುತ್ತದೆ. ಈ ನಿಟ್ಟಿನಲ್ಲಿ ಮಠದ ಆಸುಪಾಸಿನವರು ಮಾತ್ರವಲ್ಲದೇ ದೂರದ ಕಡೆಗಳಿಂದ ಬಂದವರು ಸಹ ಸೂರೆಯಲ್ಲಿ ಭಾಗವಹಿಸಿದ ದೃಶ್ಯ ಕಂಡು ಬಂದಿತ್ತು.

ಕೃಷ್ಣ ಪ್ರಸಾದ
ಪಲಿಮಾರು ಪರ್ಯಾಯ ಅಂತಿಮ ದಿನದ ಅನ್ನಸಂತರ್ಪಣೆಯ ಅಂಗವಾಗಿ ಭಕ್ತರಿಗೆ ಮಧ್ಯಾಹ್ನ 12 ಗಂಟೆಯಿಂದ ಕೃಷ್ಣ ಪ್ರಸಾದಕ್ಕೆ ಅವಕಾಶ ಕಲ್ಪಿಸಲಾಯಿತು. ರಾಜಾಂಗಣ, ಅನ್ನ ಬ್ರಹ್ಮ, ಬಡಗುಮಾಳಿಗೆ ಸೇರಿದಂತೆ ವಿವಿಧ ಕಡೆಗಳಲ್ಲಿ ನೂರಾರು ಸ್ವಯಂಸೇವಕರು ಕೃಷ್ಣ ಪ್ರಸಾದ ವಿತರಿಸುತ್ತಿರುವ ದೃಶ್ಯಗಳು ಕಂಡು ಬಂದವು. ಮಧ್ಯಾಹ್ನ ಊಟಕ್ಕೆ ಗೋಧಿ ಬರ್ಫಿ, ಕಾಳು ಲಡ್ಡು, ಅಕ್ಕಿ ವಡೆ, ಗೋಧಿ ಪಾಯಸ, ಮಟ್ಟುಗುಳ್ಳ ಹುಳಿ, ಸಾಂಬಾರು, ಅಲಸಂಡೆ, ಸುವರ್ಣ ಗಡ್ಡೆ ಪಲ್ಯವನ್ನು ಭಕ್ತರಿಗೆ ಬಡಿಸಲಾಯಿತು. ಸುಮಾರು 20 ಸಾವಿರ ಭಕ್ತರು ಕೃಷ್ಣ ಪ್ರಸಾದ ಸ್ವೀಕರಿಸಿದರು.

ತಲೆತಲಾಂತರದ ನಂಬಿಕೆ
ತಲೆತಲಾಂತರದಿಂದ ನಮ್ಮ ಹಿರಿಯರು ಸೂರೆಯಲ್ಲಿ ಭಾಗವಹಿಸುತ್ತಿದ್ದರು. “ಸೂರೆ’ ಆಹಾರವನ್ನು ಕೃಷ್ಣ ಪ್ರಸಾದ ಎನ್ನುವ ನಂಬಿಕೆ. ಈ ನಿಟ್ಟಿನಲ್ಲಿ ಕಳೆದ 5 ಪರ್ಯಾಯದ ಸೂರೆ ಪ್ರಸಾದವನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದೇನೆ.
-ಆರತಿ ಭಾಸ್ಕರ್‌, ತೆಂಕಪೇಟೆ.

ಕೃಷ್ಣ ಪ್ರಸಾದಕ್ಕೆ 20,000 ಭಕ್ತರು
ಪಲಿಮಾರು ಪರ್ಯಾಯದ ಅಂತಿಮ ದಿನವಾದ ಇಂದು ಸುಮಾರು 20,000 ಭಕ್ತರು ಕೃಷ್ಣ ಪ್ರಸಾದ ಸ್ವೀಕರಿಸಿದ್ದಾರೆ.
-ಶ್ರೀಶ ಭಟ್‌, ಪಲಿಮಾರು ಮಠದ ಪಿಆರ್‌ಒ

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.