ಪ್ರಗತಿಪರ ಕೃಷಿಕ ರಾಘವೇಂದ್ರ ನಾಯಕ್ ಕಲ್ಲೊಟ್ಟು ನಿಧನ
Team Udayavani, Mar 24, 2022, 9:17 PM IST
ಶಿರ್ವ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ,ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪಡೆದ ಪ್ರಗತಿಪರ ಕೃಷಿಕ,ಶಿರ್ವ ಕಲ್ಲೊಟ್ಟು ನಿವಾಸಿ ರಾಘವೇಂದ್ರ ನಾಯಕ್ (54) ಅವರು ಮಾ. 24ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ತಾಯಿ,ಪತ್ನಿ,ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಪ್ರಗತಿಪರ ಕೃಷಿಕರಾಗಿ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಅವರು ಕೃಷಿ ಅನುವುಗಾರರಾಗಿ ಕಾಪು ತಾಲೂಕಿನಾದ್ಯಂತ ಕೃಷಿಕರಿಗೆ ಕೃಷಿ ಮಾಹಿತಿ/ತರಬೇತಿ ನೀಡುತ್ತಿದ್ದರು.ಕೃಷಿ ಕ್ಷೇತ್ರದ ಸಾಧನೆಗಾಗಿ ಅವರು 2016ರಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದು, 2017ರಲ್ಲಿ ಕೃಷಿ ಇಲಾಖೆಯ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಯನ್ನೂ ಪಡೆದಿದ್ದರು. ಕೃಷಿಯಲ್ಲಿನ ಅವರ ಸಾಧನೆಗಾಗಿ ಅನೇಕ ಸಂಘ ಸಂಸ್ಥೆಗಳು ಅವರನ್ನು ಗೌರವಿಸಿವೆ. ಉಡುಪಿ ಜಿಲ್ಲಾ ಕೃಷಿಕ ಸಂಘ ಅವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ