ಕೆಎಸ್‌ಆರ್‌ಟಿಸಿ, ಖಾಸಗಿ ಬಸ್‌ಗಳಿಗೆ ಲಕ್ಷಾಂತರ ರೂ. ನಷ್ಟ

ಕೊರೊನಾ ಭೀತಿ ಹಿನ್ನೆಲೆ ಸಂಚಾರ ಸ್ಥಗಿತ

Team Udayavani, Mar 17, 2020, 5:53 AM IST

ಕೆಎಸ್‌ಆರ್‌ಟಿಸಿ, ಖಾಸಗಿ ಬಸ್‌ಗಳಿಗೆ ಲಕ್ಷಾಂತರ ರೂ. ನಷ್ಟ

ಉಡುಪಿ: ಕೊರೊನಾ ವೈರಸ್‌ ಭೀತಿಯಿಂದ ಉಡುಪಿ ಜಿಲ್ಲೆಯಿಂದ ದೂರದ ಊರಿಗೆ ಖಾಸಗಿ ಹಾಗೂ ಸರಕಾರಿ ಬಸ್‌ನಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ತೀವ್ರವಾಗಿ ಕುಸಿತ ಕಂಡಿದ್ದು, ಸಾರಿಗೆ ವ್ಯವಸ್ಥೆಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬೆಂಗಳೂರು, ಮೈಸೂರು, ಬಿಜಾಪುರ, ಹಾಸನ, ಹೈದರಾಬಾದ್‌, ಮುಂಬಯಿ ಸೇರಿದಂತೆ ದೂರ-ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಶೇ.40ರಷ್ಟು ಕುಸಿತವಾಗಿದೆ. ಇನ್ನು ಎಪ್ರಿಲ್‌-ಮೇ ತಿಂಗಳಿಗೆ ಸಂಬಂಧಿಸಿದಂತೆ ಆನ್‌ಲೈನ್‌ ಬುಕ್ಕಿಂಗ್‌ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಸೀಟುಗಳು ಖಾಲಿಯಿದ್ದರೂ ಜನರು ಟಿಕೆಟ್‌ ಬುಕ್‌ ಮಾಡಲು ಮುಂದೆ ಬರುತ್ತಿಲ್ಲ. ಕೆಎಸ್‌ಆರ್‌ಟಿಸಿಗೆ ನಿತ್ಯ 3 ಲ.ರೂ.ನಂತೆ ಮೂರು ದಿನದಲ್ಲಿ ಉಡುಪಿ ಡಿಪೋಗೆ 9 ಲ.ರೂ. ನಷ್ಟವಾಗಿದೆ ಎಂದು ಉಡುಪಿ ಡಿಪೋ ಸಿಬಂದಿ ಮಾಹಿತಿ ನೀಡಿದ್ದಾರೆ.

ಪ್ರಯಾಣಿಕರೇ ಇಲ್ಲ!
ಮಾರ್ಚ್‌ ತಿಂಗಳಿನಲ್ಲಿ ಪರೀಕ್ಷೆ ಸಮಯವಾಗಿರುವುದರಿಂದ ಬಸ್‌ ಟಿಕೆಟ್‌ ಬುಕ್‌ ಅಷ್ಟಾಗಿ ಇರುವುದಿಲ್ಲ. ಆದರೆ ಎಪ್ರಿಲ್‌- ಮೇ ತಿಂಗಳ ಬಸ್‌ಗಳ ಮಾರ್ಚ್‌ ಅಂತ್ಯದೊಳಗೆ ಬುಕ್‌ ಆಗಿರುತ್ತಿದ್ದವು. ಉಡುಪಿಯಿಂದ ಬೆಂಗಳೂರಿಗೆ, ಬೆಂಗಳೂರಿನಿಂದ -ಉಡುಪಿಗೆ ಬರುವ ಪ್ರಯಾಣಿಕರ ಸಂಖ್ಯೆ ಕೊರೊನಾ ಭೀತಿಯಿಂದ ಸಂಪೂರ್ಣ ಕುಸಿದಿದೆ ಎಂದು ಬಸ್‌ ಟಿಕೆಟ್‌ ಏಜೆನ್ಸಿ ಮಾಲಕ ವಿನಾಯಕ ತಿಳಿಸಿದರು.

ಸಿಟಿ ಬಸ್‌ ಖಾಲಿ
ಕೊರೊನಾ ಭೀತಿಯಿಂದಾಗಿ ಸಿಟಿ ಬಸ್‌ನಲ್ಲಿ ಶೇ. 40ರಷ್ಟು ಪ್ರಯಾಣಿಕರ ಕೊರತೆ ಉಂಟಾಗಿದೆ. ನಗರದ ವಿವಿಧ ಭಾಗಗಳಿಗೆ 80 ಬಸ್‌ಗಳು ಸಂಚರಿಸುತ್ತವೆ. ಇದೀಗ ನಿತ್ಯ ಒಂದು ಬಸ್‌ಗೆ 3,000ನಂತೆ 2.80 ಲ.ರೂ. ನಷ್ಟವಾಗುತ್ತಿದೆ. ಪರಿಸ್ಥಿತಿ ಹೀಗೇ ಮುಂದುವರಿದರೆ ಕಷ್ಟ. ಹಾಗಂತ ಸಿಟಿ ಬಸ್‌ ಮಾರ್ಗವನ್ನು ನಿಲ್ಲಿಸಲು ಸಾಧ್ಯವಿಲ್ಲ ಎಂದು ಸಿಟಿ ಬಸ್‌ ಮಾಲಕರ ಸಂಘದ ಅಧ್ಯಕ್ಷ ಸುರೇಶ್‌ ನಾಯಕ್‌ ತಿಳಿಸಿದರು.

ವಿಷ್ಣು ಸಹಸ್ರನಾಮ, ನಾರಾಯಣ ಮಂತ್ರ ಪಠನೆಯಿಂದ ವೈರಸ್‌ ನಿಗ್ರಹ
ಪಡುಬಿದ್ರಿ: ಆಯುರ್ವೇದದ ಆಷೇìಯ ಗ್ರಂಥ ಶುಶ್ರುತ ಸಂಹಿತೆಯಲ್ಲಿ ಶುಶ್ರುತನೇ ಸ್ವತಃ ಪ್ರಸ್ತುತ ಪಡಿಸಿರುವಂತೆ ವಿಷ್ಣು ಸಹಸ್ರನಾಮವು ಯಾವುದೇ ವೈರಸ್‌ಗಳ ನಿಗ್ರಹಕ್ಕೆ ಪರಿಣಾಮಕಾರಿಯಾಗಿದೆ ಎಂದು ಉಡುಪಿ ಜಿಲ್ಲಾ ಆಯುಷ್‌ ಸಂಘದ ಅಧRಕ್ಷ ಡಾ| ಎನ್‌. ಟಿ. ಅಂಚನ್‌ ಹೇಳಿದ್ದಾರೆ.

ಈಗಾಗಲೇ ಈ ಕುರಿತಾದ ಮಾಹಿತಿಯು ವೈರಲ್‌ ಆಗುತ್ತಿದೆ. ಸಹಸ್ರನಾಮ ಪಠಣ ತಿಳಿಯದಿದ್ದಲ್ಲಿ ನಾರಾಯಣ ಆಷ್ಟಾಕ್ಷರ ಮಂತ್ರ ಅಥವಾ ಓಂ ನಮೋ ಭಗವತೇ ವಾಸುದೇವಾಯ ಮಂತ್ರವನ್ನಾದರೂ ಒಂದಿಷ್ಟು ಶುದ್ಧ ಜಲಕ್ಕೆ ಒಂದೆರಡು ತುಳಸೀ ದಳಗಳನ್ನು ಹಾಕಿ ಕನಿಷ್ಠ 108 ಬಾರಿ ಪಠಿಸಬೇಕು. ಪಠನದ ಬಳಿಕ ಅದನ್ನು ಸೇವಿಸಿದಲ್ಲಿ ಅದು ಒಂದು ಉತ್ತಮ ಔಷಧವಾಗಿ ವೈರಸ್‌ಗಳನ್ನು ಕೊಲ್ಲುವುದಾಗಿಯೂ ಡಾ| ಅಂಚನ್‌ ತಿಳಿಸಿದ್ದಾರೆ.

ಆಯುರ್ವೇದದ ಪ್ರಕಾರ ಅಮೃತ ಬಳ್ಳಿ, ತ್ರಿಕಟು (ಇಪ್ಪಿಲಿ, ಶುಂಠಿ ಮತ್ತು ಮೆಣಸು), ಭದ್ರಮುಷ್ಟಿ, ಶ್ರೀ ಗಂಧ ಇವುಗಳ ಚೂರ್ಣವನ್ನು ತಯಾರಿಸಿ ಕಷಾಯದ ರೂಪದಲ್ಲಿ ನಿತ್ಯ ಸೇವನೆ ಮಾಡುತ್ತಾ ಬಂದಲ್ಲಿ ಸೂಕ್ಷ್ಮಾಣು (ವೈರಾಣು) ಜೀವಿಗಳ ವಿರುದ್ಧ ದೇಹದ ರಕ್ಷಣೆಯನ್ನು ಮಾಡಬಹುದಾಗಿದೆ ಮತ್ತು ಇದರಿಂದ ದೇಹದ ರೋಗ ಪ್ರತಿರೋಧ ಶಕ್ತಿಯನ್ನು ಹೆಚ್ಚಿಸಬಹುದೆಂದೂ ಗ್ರಂಥೋಕ್ತ ಆಧಾರ ಸಹಿತ ಡಾ| ಎನ್‌.ಟಿ.ಅಂಚನ್‌ ತಿಳಿಸಿರುತ್ತಾರೆ.

ನಂದಿಕೂರು ದೇವಸ್ಥಾನದಲ್ಲಿ ಸರಳ ರೀತಿಯಲ್ಲಿ ಜಾತ್ರೆ ಆಚರಣೆಗೆ ಕ್ರಮ ಪಡುಬಿದ್ರಿ:ಕೊರೊನಾ ಹಿನ್ನೆಲೆ ಹಾಗೂ ರಾಜ್ಯ ಸರಕಾರದ ಆದೇಶದ ಮೇರೆಗೆ ನಂದಿಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳಗೆ ಚ್ಯುತಿಯಾಗದಂತೆ ಮಾ. 18ರಂದು ನಡೆಯುವ ಜಾತ್ರಾ ಮಹೋತ್ಸವವನ್ನು ಅತ್ಯಂತ ಸರಳ ರೀತಿಯಲ್ಲಿ ಸಾಂಪ್ರದಾಯಿಕವಾಗಿ ಆಚರಿಸಲಾಗುವುದು.

ಈ ಬಾರಿ ಯಾವುದೇ ಅಂಗಡಿ ಮುಂಗಟ್ಟುಗಳನ್ನು ಹಾಕುವಂತಿಲ್ಲ. ಆಯೋಜಿತ ಸಾಂಸ್ಕೃತಿಕ ಕಾರ್ಯ ಕ್ರಮಗಳನ್ನು ಈಗಾಗಲೇ ರದ್ದುಗೊಳಿಸಲಾಗಿದೆ ಎಂದು ಶ್ರೀ ದೇವಸ್ಥಾನದ ಆಡಳಿತಾಧಿಕಾರಿ ಎನ್‌.ಉಮಾಶಂಕರ ರಾವ್‌ ತಮ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಆ್ಯಂಬುಲೆನ್ಸ್‌ ಸೇವೆ ಉಚಿತ
ಕೊರೊನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅಪರಿಚಿತರು ಬಿಸಿಲ ತಾಪದಿಂದ ರಕ್ತದ ಒತ್ತಡಗಳಿಂದ ಅಸ್ವಸ್ಥರಾಗಿ ಪ್ರಜ್ಞೆತಪ್ಪಿ ಬಿದ್ದರೂ ಆಸ್ಪತ್ರೆಗೆ ದಾಖಲು ಮುಂದೆ ಬರುತ್ತಿಲ್ಲ. ಈ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾರೇ ಅಸಹಾಯಕರಾಗಿ ಬಿದ್ದುಕೊಂಡವರನ್ನು ಕಂಡರೆ ತತ್‌ಕ್ಷಣ ಉಡುಪಿ ಜಿÇÉಾ ನಾಗರಿಕ ಸಮಿತಿಯ ಉಚಿತ ಸೇವೆಯ ಆ್ಯಂಬುಲೆನ್ಸ್‌ಗೆ ಕರೆ ಮಾಡಿ ತಿಳಿಸಬಹುದು ಎಂದು ಸಮಿತಿ ಸಂಚಾಲಕ ನಿತ್ಯಾನಂದ ಒಳಕಾಡು ತಿಳಿಸಿದರು.

ನಗರ-ಸ್ತಬ್ಧ
ಹೆಚ್ಚಾಗಿ ಸಾರ್ವಜನಿಕರು ಸೇರುವ ವಾಣಿಜ್ಯ ಮಳಿಗೆ ಗಳ‌ು ಸೋಮವಾರ ಸಹ ಬಂದ್‌ ಆಗಿದ್ದವು. ಕಲ್ಪನಾ, ಡಯಾನಾ, ಅಲಂಕಾರ್‌, ಆಶಿರ್ವಾದ್‌ ಸೇರಿದಂತೆ 4 ಚಿತ್ರಮಂದಿರ ಸೇರಿದಂತೆ 2 ಮಲ್ಟಿಫ್ಲೆಕ್ಸ್‌ಗಳು ಬಂದ್‌ ಆಗಿವೆ. ಮಕ್ಕಳ ಆರೊಗ್ಯದ ದೃಷ್ಟಿಯಿಂದ ಐಸ್‌ ಕ್ರೀಮ್‌ ಮನೆ-ಮನೆಗೆ ಸೈಕಲ್‌ ಮೂಲಕ ತೆರಳಿ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಟಾಪ್ ನ್ಯೂಸ್

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.