ಕೊನೆಗೂ ಕೆಎಸ್ಸಾರ್ಟಿಸಿ ಸಿಟಿ ಬಸ್‌ ನಿಲ್ದಾಣ ಉದ್ಘಾಟನೆಗೆ ಸಜ್ಜು

2017ರಲ್ಲಿ ಆರಂಭಗೊಂಡ ಕಾಮಗಾರಿ, ಮುಂದಿನ ತಿಂಗಳು ಸಾರ್ವಜನಿಕ ಬಳಕೆಗೆ

Team Udayavani, Feb 17, 2020, 5:48 AM IST

UDU-CITY

ಉಡುಪಿ: ನಗರದ ಹೃದಯ ಭಾಗದಲ್ಲಿ ನಿರ್ಮಾಣಗೊಳ್ಳುತ್ತಿರುವ ಸುಸಜ್ಜಿತ ನೂತನ ಕೆಎಸ್‌ಆರ್‌ಟಿಸಿ ಸಿಟಿ ಬಸ್‌ ತಂಗುದಾಣ ಉದ್ಘಾಟನೆಗೆ ಸಜ್ಜುಗೊಂಡಿದೆ. ಮುಂದಿನ ತಿಂಗಳು ಉದ್ಘಾಟನೆ ಬಹುತೇಕ ಖಚಿತವಾಗಿದ್ದು ದಿನ ಗೊತ್ತುಪಡಿಸುವುದಷ್ಟೇ ಬಾಕಿ ಇದೆ. ಇದೀಗ ಬಸ್‌ನಿಲ್ದಾಣದ ವಾಣಿಜ್ಯ ಸಂಕೀರ್ಣದ ಅಂಗಡಿ ಕೊಠಡಿಗಳ ಹರಾಜಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೂಡ ಆರಂಭಗೊಂಡಿದೆ.

4 ಕೋಟಿ ರೂ. ವೆಚ್ಚ
ಬಹುನಿರೀಕ್ಷಿತ ನೂತನ ಸಿಟಿ ಬಸ್‌ ನಿಲ್ದಾಣ ವಿಶಾಲವಾಗಿದೆ. 41 ಸೆಂಟ್ಸ್‌ ಜಾಗದಲ್ಲಿ 4 ಕೋ.ರೂ ವೆಚ್ಚದಲ್ಲಿ ಬಸ್‌ ನಿಲ್ದಾಣ ನಿರ್ಮಾಣಗೊಂಡಿದೆ. ನಿಲ್ದಾಣವು 3 ಅಂತಸ್ತುಗಳನ್ನು ಹೊಂದಿದೆ. ನೆಲಅಂತಸ್ತಿನಲ್ಲಿ 6,814 ಚದರಡಿ ವಿಸ್ತೀರ್ಣ ಹೊಂದಿದೆ. ಎರಡನೆಯ ಅಂತಸ್ತು 5,807 ಚದರಡಿ ವಿಸ್ತೀರ್ಣವಿದೆ. ಮೊದಲ ಅಂತಸ್ತು 5,637 ಚದರಡಿ ವಿಸ್ತೀರ್ಣ ಹೊಂದಿದ್ದು ಕಟ್ಟಡದ ಒಟ್ಟು ವಿಸ್ತೀರ್ಣವು 18,258 ಚದರಡಿ ಇದೆ.

ಮೂರು ವರ್ಷ
2017ರ ಅಕ್ಟೋಬರ್‌ನಲ್ಲಿ ನಿಲ್ದಾಣದ ಕಾಮಗಾರಿಗೆ ಸಚಿವರಾಗಿದ್ದ ಪ್ರಮೋದ್‌ ಮಧ್ವರಾಜ್‌ ಚಾಲನೆ ನೀಡಿದ್ದರು. ಮೂರು ವರ್ಷದ ಬಳಿಕ ಇದೀಗ ಉದ್ಘಾಟನೆಗೆ ಸಿದ್ಧವಾಗಿದೆ. ಕ್ಯಾಂಟೀನ್‌ ಸಹಿತ ಇನ್ನಿತರ ವಸ್ತುಗಳ ಮಾರಾಟದ ಅಂಗಡಿಗಳು ಈ ಮಳಿಗೆಯಲ್ಲಿ ಒಳಗೊಂಡಿವೆ. ಮೂರು ಹಂತಗಳಲ್ಲಿ ಒಟ್ಟು 11,328 ಚದರಡಿ ವಿಸ್ತೀರ್ಣ ಜಾಗವನ್ನು ವಾಣಿಜ್ಯ ಉದ್ದೇಶಕ್ಕೆಂದು ಮೀಸಲಿರಿಸಲಾಗಿದೆ.

10 ಬಸ್‌ ಏಕಕಾಲದಲ್ಲಿ ನಿಲುಗಡೆ
ಕಟ್ಟಡದ ತಳಂತಸ್ತಿನಲ್ಲಿ ಏಕಕಾಲದಲ್ಲಿ 10 ಬಸ್ಸುಗಳು ನಿಲುಗಡೆಯಾಗಲು ವ್ಯವಸ್ಥೆ ಕಲ್ಪಿಸಲಾಗಿದೆ. 12 ಕಾರು ಹಾಗೂ 20 ದ್ವಿಚಕ್ರ ವಾಹನಗಳನ್ನು ನಿಲುಗಡೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರಿಗಾಗಿ ಇರುವ ತಂಗುದಾಣ ಸಹಿತ ಕಟ್ಟಡಕ್ಕೆ ಎಸಿ, ಟಿವಿ ಅಳವಡಿಸುವ ಬಗ್ಗೆ ಚಿಂತನೆ ಇದ್ದರೂ ಅದಿನ್ನೂ ಕಾರ್ಯಗತಕ್ಕೆ ಬಂದಿಲ್ಲ.

2018ಕ್ಕೆ ಮುಗಿಯಬೇಕಿದ್ದ ಕಾಮಗಾರಿ
2016ರಿಂದ ನಗರದಲ್ಲಿ ನರ್ಮ್ ಬಸ್‌ಗಳ ಓಡಾಟ ವಿದೆ. ಜನರಿಗೆ ಹತ್ತಿರವಾಗಿ ಸೇವೆ ನೀಡುತ್ತಿದೆ.

ನಗರದಲ್ಲಿ ಜೆ ನರ್ಮ್ ಸಿಟಿ ಬಸ್‌ಗಳಿಗೆ ನಿಲ್ಲುವುದಕ್ಕೆ ಸೂಕ್ತ ವ್ಯವಸ್ಥೆಗಳಿರಲಿಲ್ಲ. ಈಗ 30 ನರ್ಮ್ ಬಸ್ಸುಗಳು ನಿತ್ಯ ಓಡಾಟ ನಡೆಸುತ್ತಿವೆ. ಆದರೂ ಸಾಕಷ್ಟು ಊರುಗಳಿಗೆ ನರ್ಮ್ ಬಸ್‌ ಓಡಾಟವಿಲ್ಲ, ಎಷ್ಟೋ ಕಡೆಗಳಲ್ಲಿ ಖಾಸಗಿ ಬಸ್ಸುಗಳ ಸಂಚಾರವೂ ಇಲ್ಲ. ಸಿಟಿ ಬಸ್‌ ನಿಲ್ದಾಣವಿಲ್ಲದೆ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಮನಗಂಡು ನೂತನ ಬಸ್‌ ನಿಲ್ದಾಣ ನಿರ್ಮಿಸಲು ಇಲಾಖೆ ನಿರ್ಧರಿಸಿತ್ತು. 2018ಕ್ಕೆ ಕಾಮಗಾರಿ ಮುಗಿಯಬೇಕಿತ್ತು ಈಗ ಸಿದ್ಧವಾಗಿದೆ.

ಮಾರ್ಚ್‌ನಲ್ಲಿ ಉದ್ಘಾಟನೆ
ಸುಸಜ್ಜಿತ ಸಿಟಿ ಬಸ್‌ ನಿಲ್ದಾಣ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಕಟ್ಟಡದ ವ್ಯಾಪಾರ ಮಳಿಗೆಗೆ ಹರಾಜು ಪ್ರಕ್ರಿಯೆ ಟೆಂಡರು ಹಂತದಲ್ಲಿದೆ. ಮಾರ್ಚ್‌ ತಿಂಗಳಲ್ಲಿ ಉದ್ಘಾಟನೆ ನಡೆಸಲಾಗುತ್ತಿದೆ. ದಿನ ಅಂತಿಮವಾಗಿಲ್ಲ.
-ಉದಯ ಶೆಟ್ಟಿ,
ಡಿಪೋ ಮೆನೇಜರ್‌, ಉಡುಪಿ.

ಜನತೆಗೆ ಪ್ರಯೋಜನ
ಬಹುಕಾಲದ ಬೇಡಿಕೆಯೊಂದು ಈಡೇರುತ್ತಿರುವುದು ಖುಷಿ ತರುತ್ತಿದೆ. ಜಿಲ್ಲೆಯ ಜನತೆ ನಿಲ್ದಾಣದ ಪ್ರಯೋಜನ ಪಡೆಯುವಂತಾಗಲಿದೆ.
-ದಿನಕರ ಬಾಬು, ಅಧ್ಯಕ್ಷರು,
ಜಿ.ಪಂ ಉಡುಪಿ.

ಬಹುಕಾಲದ ಬೇಡಿಕೆ
ನಗರ ಅಭಿವೃದ್ಧಿ ಹೊಂದುತ್ತಿದೆ. ಪ್ರಯಾಣಿಕರ ಅನುಕೂಲತೆಗೆ ತಕ್ಕಂತೆ ನಗರದಲ್ಲಿ ಸೂಕ್ತ ಕೆಎಸ್‌ಆರ್‌ಟಿಸಿ ಸಿಟಿ ಬಸ್‌ನಿಲ್ದಾಣವಿಲ್ಲದೆ ಬಹಳಷ್ಟು ಸಮಸ್ಯೆಯಾಗಿರುತ್ತಿತ್ತು. ಹೊಸ ಬಸ್‌ ನಿಲ್ದಾಣ ಸಾರ್ವಜನಿಕರಿಗೆ ಬಳಕೆಗೆ ದೊರೆಯುವ ಮೂಲಕ ಉಡುಪಿ ನಗರದ ಜನತೆಯ ಬಹುಕಾಲದ ಬೇಡಿಕೆಯೊಂದು ಈಡೇರಿದಂತಾಗುತ್ತದೆ.

– ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.