ಕುಂಭಾಸಿ: ಬೇಸಗೆಗೂ ಮೊದಲೇ ನೀರಿನ ಅಭಾವ

ಶಾಶ್ವತ ಪರಿಹಾರ ಕಲ್ಪಿಸಲು ಗ್ರಾಮಸ್ಥರ ಆಗ್ರಹ ; ಇದ್ದರೂ ಬಳಕೆಯಾಗದ ಶುದ್ಧ ನೀರಿನ ಘಟಕ

Team Udayavani, Feb 4, 2020, 5:42 AM IST

0302TKE1-2

ತೆಕ್ಕಟ್ಟೆ: ಕುಂಭಾಸಿ ಗ್ರಾ.ಪಂ. ವ್ಯಾಪ್ತಿಯ ಕೊರವಡಿ ಹೊಳೆಕಟ್ಟು ದಲಿತ ಕಾಲನಿಯಲ್ಲಿ ಹಾಗೂ ಕುಂಭಾಸಿ ವಿನಾಯಕ ನಗರದಲ್ಲಿ ಕುಡಿಯುವ ನೀರಿನ ಅಭಾವ ಈಗಾಗಲೇ ಶುರುವಾಗಿದ್ದು, ಸಮರ್ಪಕ ನೀರಿನ ವ್ಯವಸ್ಥೆಗಾಗಿ ಜನರು ಎದುರು ನೋಡುತ್ತಿದ್ದಾರೆ.

ದಾಹ ನೀಗಿಸದ ಬಾವಿ
ವಿನಾಯಕ ನಗರದ ಪ್ರತಿಯೊಂದು ಮನೆಗೆ ಪೈಪ್‌ಲೈನ್‌ ಸಂಪರ್ಕ ಕಲ್ಪಿಸಲಾಗಿದ್ದು ಹೊಳೆಕಟ್ಟು ಪರಿಸರ ಸಮೀಪದ ಸರಕಾರಿ ಬಾವಿಯಿಂದ ನೀರು ಪೂರೈಕೆ ಮಾಡಲಾಗುತ್ತಿದೆ. ನಿತ್ಯ ಬಳಕೆಗೆ ಬೇಕಾಗುವಷ್ಟು ನೀರು ಪೂರೈಕೆಯಾಗುತ್ತಿದ್ದರೂ ಇದು ಕುಡಿಯಲು ಯೋಗ್ಯವಿಲ್ಲ.

ಪ್ರತಿ ವರ್ಷ ಸಮಸ್ಯೆ
ಬೇಸಗೆ ಆರಂಭವಾದರೆ ಇಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುತ್ತದೆ. ಈ ಭಾಗದಲ್ಲಿ ಮೂರು ಸರಕಾರಿ ಬಾವಿಗಳಿದ್ದು, ಅದರಲ್ಲಿ ನೀರಿದ್ದರೂ ಉಪ್ಪು ನೀರಿನ ಬಳಕೆಯಿಂದಾಗಿ ಕುಡಿಯಲು ಯೋಗ್ಯವಿಲ್ಲ. ಹೊಳೆಕಟ್ಟಿನ ಉತ್ತರ ಭಾಗದಲ್ಲಿರುವ ಮನೆಗಳಿಗೆ ಪಣ್‌ಹತ್ವಾರ್‌ ಬೆಟ್ಟು ಸಮೀಪದಿಂದ ನೀರು ಪೂರೈಕೆಯಾಗುತ್ತಿದೆ. ಆದರೂ
ಕೂಡ ನೀರು ಕಲುಷಿತವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಗ್ರಾಮ ಪಂಚಾಯತ್‌ ಗಮನಕ್ಕೆ ತಂದಿದ್ದೇವೆ ಎಂದು ಸ್ಥಳೀಯರು ಹೇಳುತ್ತಾರೆ.

ನೀರಿನ ಅಭಾವ ಮಧ್ಯೆ ಅಪವ್ಯಯ
ವಿನಾಯಕ ನಗರ ಹಾಗೂ ಗಣೇಶ್‌ ನಗರ ಸೇರಿದಂತೆ ಈ ಭಾಗದಲ್ಲಿ 180ಕ್ಕೂ ಅಧಿಕ ಮನೆಗಳಿದೆ. ಹೆಚ್ಚಿನ ಮನೆಗಳಲ್ಲಿ ಸ್ವಂತ ಬಾವಿಯೂ ಇದೆ. ಆದರೂ ಇಲ್ಲಿನವರು ಗ್ರಾ.ಪಂ. ನಳ್ಳಿ ನೀರನ್ನು ಪಡೆದು ಅದನ್ನು ತೆಂಗಿನ ತೋಟ ಮತ್ತುಹೂವಿನ ಗಿಡಗಳಿಗೆ ಬಳಸುತ್ತಾರೆ. ಹೊಳೆಕಟ್ಟು ಪರಿಸರದಲ್ಲಿ ಕೊರವಡಿ ಶ್ರೀನಿಧಿ ಕಾಂಪ್ಲೆಕ್ಸ್‌ ಸಮೀಪದ ಸರಕಾರಿ ಬಾವಿಯಿಂದ ಸುಮಾರು 16 ಮನೆಗಳಿರುವ ದಲಿತ ಕಾಲನಿಗೆ
ಪೂರೈಕೆಯಾಗುವ ಪೈಪ್‌ಲೈನ್‌ನ ಮಧ್ಯೆ ಕೆಲವು ಮನೆಗಳವರು ಮನೆ ನೀರಿನ ಟ್ಯಾಂಕ್‌ಗೆ ನೀರು ಹಾಯಿಸಿ ಅನ್ಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಾರೆ ಎನ್ನುವ ಆರೋಪ ಸಾರ್ವಜನಿಕ ವಲಯದಲ್ಲಿದೆ.

ಕೊರವಡಿ ದಲಿತ ಕಾಲನಿ, ಕುಂಭಾಸಿ ವಿನಾಯಕ ನಗರದಲ್ಲಿ ಕುಡಿಯುವ ನೀರಿನ ಅಭಾವವಿದೆ. ಇಲ್ಲಿಗೆ ಹೊಳೆಕಟ್ಟು ಪರಿಸರದ ಸರಕಾರಿ ಬಾವಿಯಿಂದ ನೀರು ಪೂರೈಕೆಯಾಗುತ್ತಿದೆ. ಆದರೂ ನಿತ್ಯ ಬಳಕೆಗೆ ಬೇಕಾಗುವಷ್ಟು ನೀರು ಪೂರೈಕೆಯಾಗಿದ್ದರೂ ಇದು ಕುಡಿಯಲು ಮಾತ್ರ ಯೋಗ್ಯವಾಗಿಲ್ಲ.

ಶುದ್ಧ ನೀರಿನ ಘಟಕ: ಬಳಕೆ ಕಡಿಮೆ
ಬಳಕೆಯಾಗುವ ಶುದ್ಧ ಕುಡಿಯುವ ನೀರಿನ ಘಟಕ ಶುದ್ಧ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸುವ ನಿಟ್ಟಿನಿಂದ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ, ಜಿಲ್ಲಾ ಪಂಚಾಯತ್‌ ಉಡುಪಿ, ತಾಲೂಕು ಪಂಚಾಯತ್‌ ಕುಂದಾಪುರ ಹಾಗೂ ಗ್ರಾ.ಪಂ. ಕುಂಭಾಸಿ ಇವುಗಳ ಸಹಯೋಗದೊಂದಿಗೆ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿಯಲ್ಲಿ 2 ಸಾವಿರ ಲೀ. ಸಾಮರ್ಥ್ಯ ಹೊಂದಿದ ಅತ್ಯಾಧುನಿಕ ತಂತ್ರಜ್ಞಾನದ ಶುದ್ಧ ಕುಡಿಯುವ ನೀರಿನ ಘಟಕವನ್ನು ತೆರೆಯಲಾಗಿದೆ. ನಮೂದಿಸಿದ ಜಾಗದಲ್ಲಿ ಹೊಸ ಒಂದು ರೂಪಾಯಿ ನಾಣ್ಯವನ್ನು ಬಳಸಿ ಸುಮಾರು 10 ಲೀ.ಗಳ‌ಷ್ಟು ಶುದ್ಧ ನೀರನ್ನು ಪಡೆಯಲು ಗ್ರಾ.ಪಂ. ಅವಕಾಶ ಕಲ್ಪಿಸಿದೆ. ಆದರೆ ಈ ಘಟಕ ನಿರೀಕ್ಷಿತ ಪ್ರಮಾಣದಲ್ಲಿ ಬಳಕೆಯಾಗುತ್ತಿಲ್ಲ. ಇಲ್ಲಿಂದ ನೀರನ್ನು ಕೊಂಡೊಯ್ಯುವವರ ಸಂಖ್ಯೆ ತೀರ ಕಡಿಮೆಯಿದೆ.

ಅನುದಾನ ದೊರೆತಿದೆ
ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಬಗ್ಗೆ ಶಾಸಕರ ಗಮನಕ್ಕೆ ತರುತ್ತೇನೆ. ಗೋಪಾಡಿ ಭಾಗದ ನೀರಿನ ಸಮಸ್ಯೆಗೆ ಜಿ.ಪಂ. ಅನುದಾನ ಸಿಕ್ಕಿದೆ. ಈಗಾಗಲೇ ಹೊಳೆಕಟ್ಟಿನಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ಬಾವಿ ನಿರ್ಮಾಣ, 300 ಮನೆಗಳಿಗೆ ಪೈಪ್‌ಲೈನ್‌ ವ್ಯವಸ್ಥೆ ಯೋಜನೆ ಟೆಂಡರ್‌ ಹಂತದಲ್ಲಿದೆ.
-ಶ್ರೀಲತಾ ಸುರೇಶ್‌ ಶೆಟ್ಟಿ ,ಸದಸ್ಯರು,ಜಿಲ್ಲಾ ಪಂಚಾಯತ್‌

ನಿರೀಕ್ಷೆಗೂ ಮೀರಿ ನೀರು ಬಳಕೆ
ನಮ್ಮ ಗ್ರಾಮಕ್ಕೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಾರ್ಯರೂಪಕ್ಕೆ ತರುವ ಬಗ್ಗೆ ಶಾಸಕರಿಗೆ ಈಗಾಗಲೇ ಮನವಿ ಮಾಡಲಾಗಿದೆ. ವಿನಾಯಕ ನಗರಕ್ಕೆ ಮೀಟರ್‌ ಅಳವಡಿಸಿ ಉತ್ತಮ ನೀರು ಪೂರೈಸಲಾಗುತ್ತಿದೆ. ಆದರೆ ನಿರೀಕ್ಷೆಗೂ ಮೀರಿ ನೀರು ಬಳಕೆಯಾಗುತ್ತಿದೆ ಆದರೆ ಗ್ರಾ.ಪಂ.ಗೆ ಮಾತ್ರ ಸಮರ್ಪಕವಾಗಿ ಮೀಟರ್‌ ರೀಡಿಂಗ್‌ ಬಿಲ್‌ ಪಾವತಿಯಾಗುತ್ತಿಲ್ಲ..
-ಮಹಾಬಲೇಶ್ವರ ಆಚಾರ್‌, ಉಪಾಧ್ಯಕ್ಷರು, ಗ್ರಾ.ಪಂ.ಕುಂಭಾಸಿ

ಶುದ್ಧ ಕುಡಿಯುವ ನೀರಿನ ಸಮಸ್ಯೆ
ಹಲವು ದಶಕಗಳಿಂದಲೂ ಕೂಡ ಕುಂಭಾಸಿ ವಿನಾಯಕ ನಗರದಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದೆ. ಪಂಚಾಯತ್‌ ನೀರು ಸರಬರಾಜಾಗುತ್ತಿದ್ದರೂ ಗಡಸು ನೀರಾಗಿದೆ. ಶಾಶ್ವತ ಪರಿಹಾರಕ್ಕಾಗಿ ಜನಪ್ರತಿನಿಧಿಗಳು ಗಮನಹರಿಸಬೇಕು. .
– ಮುತ್ತು,ಸ್ಥಳೀಯರು

– ಲೋಕೇಶ್‌ ಆಚಾರ್‌ ತೆಕ್ಕಟ್ಟೆ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.