Kundapur: ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಬಾಲಕ ಸಾವು
ರಜೆಯ ಸಂಭ್ರಮಕ್ಕೆ ಕುಟುಂಬ ಸದಸ್ಯರೊಂದಿಗೆ ತೆರಳಿದ್ದ ವೇಳೆ ನಡೆದ ಅವಘಡ!
Team Udayavani, Apr 12, 2024, 5:52 PM IST
ಕುಂದಾಪುರ: ಇಲ್ಲಿನ ಹೆಂಗವಳ್ಳಿಯ ರೆಸಾರ್ಟ್ ವೊಂದರಲ್ಲಿ ಕುಟುಂಬ ಸದಸ್ಯರೊಂದಿಗೆ ರಜೆಯ ಸಂಭ್ರಮ ಕಳೆಯಲೆಂದು ಹೋಗಿದ್ದ ಬಾಲಕ ಈಜು ಕೊಳದಲ್ಲಿ ಇಳಿದಾಗ ಮುಳುಗಿ ಪ್ರಾಣ ಕಳೆದುಕೊಂಡ ಘಟನೆ ಏಪ್ರಿಲ್ 11 ರಂದು ಮಧ್ಯಾಹ್ನ 2 ಗಂಟೆಗೆ ನಡೆದಿದೆ.
ಹೂಡೆಯ ಆರಿಝ್ ಉಮ್ಮರ್ ಸೌಕುರ್(10) ಮೃತ ಬಾಲಕ. ಹೂಡೆಯ ಇಬಾದುಲ್ಲ ಅವರು ಕುಟುಂಬ ಸಮೇತರಾಗಿ ರೆಸಾರ್ಟ್ ಗೆ ಹೋಗಿದ್ದು, ಆರಿಝ್ ಮಕ್ಕಳೊಂದಿಗೆ ಆಟ ಆಡುತ್ತ ನೀರಿನಲ್ಲಿ ಬಿದ್ದಿದ್ದಾನೆ. ಈಜು ಕೊಳ ಮತ್ತು ಸುತ್ತಮುತ್ತಲೂ ಹತ್ತಾರು ಜನರಿದ್ದರೂ ಎಲ್ಲರೂ ಸಂಭ್ರಮಿಸುತ್ತಿದ್ದ ಕಾರಣ ಆತನನ್ನು ರಕ್ಷಿಸುವುದು ಸಾಧ್ಯವಾಗಲಿಲ್ಲ. ಬೊಬ್ಬೆ ಕೇಳಿ ಕುಟುಂಬ ಸದಸ್ಯರು ಮತ್ತು ಸ್ಥಳದಲ್ಲಿದ್ದವರು ಮೇಲಕ್ಕೆತ್ತಿ ಪ್ರಥಮ ಚಿಕಿತ್ಸೆ ನೀಡಿ, ಹಾಲಾಡಿಯ ಆಸ್ಪತ್ರೆಗೆ ಬಂದು ಪರಿಶೀಲಿಸಿದಾಗ ವೈದ್ಯರು ಆರಿಝ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಬಾಲಕನ ಸಾವಿಗೆ ರೆಸಾರ್ಟ್ ನ ನಿರ್ಲಕ್ಷ್ಯ ಹಾಗೂ ಅಜಾಗರೂಕತೆ, ಲೈಫ್ ಜಾಕೆಟ್ ಮತ್ತು ಲೈಫ್ ಗಾರ್ಡ್ ಹಾಗೂ ಯಾವುದೇ ಸೂಕ್ತ ವ್ಯವಸ್ಥೆ ಇಲ್ಲದಿರುವುದೇ ಕಾರಣ ಎಂದು ಆರೋಪ ಕೇಳಿ ಬಂದಿದೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್ ಅಡಿಕೆ ತೋಟಕ್ಕೆ ಹಾನಿ
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ