ಕುಂದಾಪುರದ ಉದ್ಯಮಿ ಕಟ್ಟೆ ಭೋಜಣ್ಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
Team Udayavani, May 26, 2022, 9:58 AM IST
ಕುಂದಾಪುರ: ಹಿರಿಯ ಉದ್ಯಮಿ, ಪ್ರಸಿದ್ಧ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ (80) ಬುಧವಾರ ಬೆಳಿಗ್ಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬವರ ಮನೆಯ ಸಿಟೌಟ್ ನಲ್ಲಿ ಗುಂಡು ಹಾರಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಕಟ್ಟೆ ಭೋಜಣ್ಣ ಅವರು ಬೆಂಗಳೂರಿನಲ್ಲಿ ಹಲವಾರು ಹೋಟೆಲ್, ಬಟ್ಟೆ ಅಂಗಡಿಗಳನ್ನು ನಡೆಸುತ್ತಿದ್ದರು. ಕುಂದಾಪುರದ ಚಿನ್ಮಯಿ ಆಸ್ಪತ್ರೆ ಉಡುಪಿ ಹಾಗೂ ಉ.ಕ ಜಿಲ್ಲೆಯಲ್ಲಿ ಹೆಸರುವಾಸಿಯಾಗಿದೆ.
ಭೂಮಿ ಹಾಗೂ ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಟೆಕ್ಸಾಸ್ ಶೂಟೌಟ್ ಮರುದಿನವೇ ರೈಫಲ್ ಹಿಡಿದು ಶಾಲೆಗೆ ಬಂದ ಮತ್ತೋರ್ವ ವಿದ್ಯಾರ್ಥಿ
ಶಿಸ್ತಿಗೆ ಹೆಸರಾಗಿದ್ದ ಕಟ್ಟೆ ಭೋಜಣ್ಣಗೆ ಪತ್ನಿ ಭಾಗೀರಥಿ, ಸುಧಿ, ಗುಂಡ ಎನ್ನುವ ಇಬ್ಬರು ಪುತ್ರರು ಹಾಗೂ ಸುಮಾ ಪುತ್ರನ್ (ಡಾ. ಉಮೇಶ್ ಪುತ್ರನ್ ಪತ್ನಿ) ರನ್ನು ಅಗಲಿದ್ದಾರೆ. ಕುಂದಾಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.