ಕುಂದಾಪುರ-ಬೈಂದೂರು: ಮಳೆಯಬ್ಬರ ಇಳಿಮುಖ
Team Udayavani, Aug 11, 2019, 6:09 AM IST
ಕುಂದಾಪುರ: ಬೈಂದೂರು ಹಾಗೂ ಕುಂದಾಪುರ ತಾಲೂಕಿನೆಲ್ಲೆಡೆ ಶನಿವಾರ ಮಳೆ ಪ್ರಮಾಣ ಸ್ವಲ್ಪ ಮಟ್ಟಿಗೆ ಇಳಿಮುಖಗೊಂಡಿದ್ದು, ಕೆಲವೆಡೆಗಳಲ್ಲಿ ಗಾಳಿಯಿಂದಾಗಿ ಮನೆಗಳಿಗೆ ಹಾನಿಯಾಗಿದೆ.
ಶುಕ್ರವಾರ ರಾತ್ರಿ ಮಳೆ ತುಸು ಹೆಚ್ಚಿದ್ದರೆ, ಶನಿವಾರ ಸಂಜೆಯವರೆಗೆ ಬಿಟ್ಟು – ಬಿಟ್ಟು ಮಳೆಯಾಗುತ್ತಿತ್ತು. ಕೋಣಿ ಗ್ರಾಮದ ನಾಗಪ್ಪ ಪೂಜಾರಿ ಅವರ ವಾಸ್ತವ್ಯದ ಮನೆಗೆ ಗಾಳಿ – ಮಳೆಯಿಂದಾಗಿ ಹಾನಿಯಾಗಿದ್ದು, ಸುಮಾರು 40 ಸಾವಿರ ರೂ. ನಷ್ಟ ಸಂಭವಿಸಿದೆ. ಹಂಗಳೂರು ಗ್ರಾಮದ ಕೃಷ್ಣ ದೇವಾಡಿಗ ಅವರ ಮನೆಯ ಶೌಚಾಲಯದ ಗೋಡೆ ಕುಸಿದು ಬಿದ್ದು, ಸುಮಾರು 20 ಸಾವಿರ ರೂ. ನಷ್ಟ ಉಂಟಾಗಿದೆ. ಹೊಂಬಾಡಿ – ಮಂಡಾಡಿ ಗ್ರಾಮದ ಸುಮನಾ ನಾಯ್ಕ ಅವರ ಅಡಿಕೆ ತೋಟಕ್ಕೆ ನೀರು ನುಗ್ಗಿ, ಸುಮಾರು 25 ಸಾವಿರ ರೂ. ನಷ್ಟ ಸಂಭವಿಸಿದೆ.
ಕೋಡಿಗೆ ತಹಶೀಲ್ದಾರ್ ಭೇಟಿ
ಕುಂದಾಪುರ ತಹಶೀಲ್ದಾರ್ ತಿಪ್ಪೇಸ್ವಾಮಿ ಹಾಗೂ ಇತರೆ ಅಧಿಕಾರಿಗಳು ಶನಿವಾರ ಕೋಡಿ, ಗಂಗೊಳ್ಳಿಯ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಾರಾಹಿ: ಮಾಹಿತಿ ನೀಡಲಾಗುವುದು
ಕುಂದಾಪುರ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಿದ್ದರೂ, ಮಲೆನಾಡು ಭಾಗಗಳಲ್ಲಿ ಮಳೆಯಬ್ಬರ ಹೆಚ್ಚಾಗಿರುವುದರಿಂದ ವಾರಾಹಿ ಯೋಜನೆಯ ಎತ್ತಣಕಟ್ಟೆ ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಆದರೆ ಜಲಾಶಯ ಭರ್ತಿಯಾಗಲು ಇನ್ನೂ ಸುಮಾರು 11 ಮೀ. ನೀರಿನ ಅಗತ್ಯವಿದ್ದು, ನೀರು ಹೊರಬಿಡುವುದಾದರೆ ಅದಕ್ಕೂ ಮೊದಲು ಇದರ ಆಸುಪಾಸಿನ ಜನರಿಗೆ ಮಾಹಿತಿ ನೀಡಲಾಗುವುದು. ಈ ಬಗ್ಗೆ ಯಾವುದೇ ರೀತಿಯ ಭಯ ಪಟ್ಟುಕೊಳ್ಳುವ ಅಗತ್ಯವಿಲ್ಲ ಎಂದು ಕುಂದಾಪುರದ ತಹಶೀಲ್ದಾರ್ ತಿಪ್ಪೇಸ್ವಾಮಿ ‘ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು