ಕುಂದಾಪುರ ಫ್ಲೈಓವರ್‌: ಅ. 20ರಂದು ಪ್ರತಿಭಟನೆ


Team Udayavani, Oct 18, 2019, 5:01 AM IST

1710KDLM13PH

ಕುಂದಾಪುರ: ಶಾಸ್ತ್ರಿ ಸರ್ಕಲ್‌ ಫ್ಲೈಓವರ್‌ ಹಾಗೂ ಬಸ್ರೂರು ಮೂರುಕೈ ಅಂಡರ್‌ ಪಾಸ್‌ ಕಾಮಗಾರಿ ಪೂರ್ಣ ಗೊಳಿಸಲು ಕೊನೆಗೂ ಪ್ರತಿ ಭಟನೆಗೆ ದಿನ ನಿಗದಿಯಾಗಿದೆ. ಅ. 20ರಂದು ಕೆಲವಾರು ಸಂಘಟನೆಗಳು ಒಟ್ಟುಗೂಡಿ ಪ್ರತಿಭಟನೆಗೆ ಮುಂದಾಗಲಿವೆ. ಕೇಮಾರು ಸಾಂದೀಪನಿ ಸಾಧನಾ ಶ್ರಮದ ಶ್ರೀ ಈಶವಿಠಲದಾಸ ಸ್ವಾಮೀಜಿ ಅವರು ಭಾಗವಹಿಸಲಿದ್ದಾರೆ.

ಆದೇಶ
ಇಲ್ಲಿನ ಈ ಹಿಂದಿನ ಉಪವಿಭಾಗ ದಂಡಾಧಿಕಾರಿ, ಸಹಾಯಕ ಕಮಿಷನರ್‌ ಟಿ. ಭೂಬಾಲನ್‌ ಅವರು ನವಯುಗ ಉಡುಪಿ ಟೋಲ್‌ವೇ ಪ್ರೈ.ಲಿ.ಗೆ ಅವರು ಉಡುಪಿಯ ಕರಾವಳಿ ಬೈಪಾಸ್‌ನಲ್ಲಿ ಅಂಡರ್‌ ಪಾಸ್‌ ನ. 1ರೊಳಗೆ, ಶಾಸ್ತ್ರಿ ಸರ್ಕಲ್‌ನ ಫ್ಲೈಓವರ್‌, ಬಸ್ರೂರು ಮೂರುಕೈ ಅಂಡರ್‌ಪಾಸ್‌ ಕಾಮಗಾರಿ ಎ.1ರ ಒಳಗೆ ಮುಗಿಸಬೇಕೆಂದು ಕಳೆದ ವರ್ಷ ಅ.10ರಂದು ಆದೇಶ ನೀಡಿದ್ದರು. ಆದರೆ ನೀಡಿದ ಆದೇಶ ಕಾರ್ಯಗತವಾಗಿಲ್ಲ. ಸೆಕ್ಷನ್‌ 133ರ ಅಡಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಅವರು ಪ್ರಕರಣದ ವಿಚಾರಣೆ ನಡೆಸಿದ್ದು ಅಂತಿಮ ಆದೇಶ ಜಾರಿ ಮಾಡಿದ್ದರು. ಆದರೆ ಕಾಮಗಾರಿ ನಡೆಯದೇ ಹಣಕಾಸಿನ ಅಡಚಣೆಯಿಂದ ಕಾಮಗಾರಿ ಸ್ಥಗಿತವಾಗಿದ್ದು ನಿಗದಿತ ಅವಧಿಯೊಳಗೆ ಕಾಮಗಾರಿ ಮುಗಿಸ ದಿದ್ದರೆ ನ್ಯಾಯಾಲಯದ ಆದೇಶ ಉಲ್ಲಂಘನೆ ತೂಗುಗತ್ತಿ ನೇತಾಡಿದರೂ ಪ್ರಯೋಜನವಾಗಿಲ್ಲ. ವೇತನ ಕೊಡದೇ ಕೆಲಸಕ್ಕೆ ಬರಲಾರೆವು ಎಂದು ಕಾರ್ಮಿಕರು ಹೊರಟು ಹೋಗಿಯಾಗಿದೆ.

ಕೆಲಸ ನಡೆಯದಿರಲು ಮರಳು ಅಭಾವ, ಮರಳು ಹಾಗೂ ಕಲ್ಲಿಗೆ ಅನು ಮತಿ ದೊರೆಯಲು ವಿಳಂಬ ಸೇರಿದಂತೆ ಕಾರಣಗಳಿದ್ದವು ಎಂದು ಉತ್ತರಿಸಿದ್ದರು. ಜಿಲ್ಲಾಡಳಿತ ಬೆಂಬಲ ನೀಡುತ್ತಿಲ್ಲ ಎಂದು ನವ ಯುಗ ಸಂಸ್ಥೆ ಡಿಸಿ ವಿರುದ್ಧವೂ ದೂರು ನೀಡಿತ್ತು. ಸಾರ್ವಜನಿಕರ ದೂರಿಗೆ ಖುದ್ದು ಸ್ಪಂದಿಸುತ್ತಿದ್ದ ಹಿಂದಿನ ಡಿಸಿಯವರು ಸಂಸ್ಥೆಯವರನ್ನು ಕರೆದು ಕಾಮಗಾರಿ ಬೇಗ ಮುಗಿಸುವಂತೆ ಅನೇಕ ಬಾರಿ ಸೂಚನೆ ಕೊಟ್ಟಿದ್ದರು. ರಾ. ಹೆ. ಸಮಿತಿಯವರು ನವಯುಗ ಸಂಸ್ಥೆಯ ವಿರುದ್ಧ ಆರೋಪ ಮಾಡಿದ್ದು, ಬ್ರಹ್ಮಾವರ, ಸಾಸ್ತಾನ, ಸಾಲಿಗ್ರಾಮ, ತೆಕ್ಕಟ್ಟೆ, ಕಲ್ಯಾಣಪುರ, ಕಟಪಾಡಿ ಮೊದಲಾದೆಡೆ ಸರ್ವಿಸ್‌ ರಸ್ತೆ ನೀಡಿಲ್ಲ.

ಅರೆಬರೆ ಚರಂಡಿ ಕಾಮಗಾರಿ ಮಾಡಲಾಗಿದೆ. ಶೇ.60 ಕಾಮಗಾರಿ ಆದ ಬಳಿಕವಷ್ಟೇ ಟೋಲ್‌ ಸಂಗ್ರಹ ಆರಂಭಿಸಬೇಕಿತ್ತು. 150 ಕಿ.ಮೀ. ಗಳಲ್ಲಿ ಮೂರು ಕಡೆ ಟೋಲ್‌ ಸಂಗ್ರಹ ಕಾನೂನು ಪ್ರಕಾರ ಸರಿಯಲ್ಲ ಎಂದು ಆರೋಪಿಸಲಾಗಿತ್ತು.

ಪ್ರತಿಭಟನೆಗೆ ಸಜ್ಜು
ಇಷ್ಟು ಸಮಯದಿಂದ ಕಾಮಗಾರಿ ಅರೆಬರೆ ಸ್ಥಿತಿಯಲ್ಲಿದ್ದು ಜನಪ್ರತಿನಿಧಿಗಳು ಹಾಗೂ ಅರ್ಧ ಕಾಮಗಾರಿಯ ಫ್ಲೈಓವರ್‌ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟ್ರೋಲ್‌ಗೆ ಒಳಗಾಗಿತ್ತು. ಐತಿಹಾಸಿಕ ಸ್ಮಾರಕ ಎಂಬಂತೆ ಈಗ ಇದನ್ನು ವಿಡಂಬನೆಗೆ ಬಳಸಿಕೊಳ್ಳಲಾಗುತ್ತಿದೆ. ಇದೀಗ ಒಂದಷ್ಟು ಸಂಘಟನೆಗಳು ಒಟ್ಟಾಗಿ ಪ್ರತಿಭಟನೆಗೆ ಮುಂದಾಗಿವೆ. ಅ.20ರಂದು ಬೆಳಗ್ಗೆಯಿಂದ ಅಪರಾಹ್ನವರೆಗೆ ಪ್ರತಿಭಟನೆ ನಡೆಯಲಿದೆ. ಈ ಮಧ್ಯೆ ಈಗಿನ ಜಿಲ್ಲಾಧಿಕಾರಿಗಳು ಕೂಡಾ ಗುತ್ತಿಗೆದಾರ ಸಂಸ್ಥೆ ಜತೆ ಮಾತುಕತೆ ನಡೆಸಿದ್ದು ಅ.20ರಿಂದ ಕಾಮಗಾರಿ ಆರಂಭಿಸುವುದಾಗಿ ಸಂಸ್ಥೆಯವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.