ಕುಂದಾಪುರ: ಉತ್ತಮ ಮಳೆ


Team Udayavani, Oct 24, 2019, 5:21 AM IST

kundapura-male

ಕುಂದಾಪುರ: ನಗರದಲ್ಲಿ ಬುಧವಾರ ಮಳೆಯಾಗಿದೆ. ಬೆಳಗ್ಗೆಯೂ ಉತ್ತಮ ಮಳೆಯಾಗಿದ್ದು ಅನಂತರ ಬಿಡುವು ದೊರೆತಿತ್ತು.

ಮೋಡಕವಿದ ವಾತಾವರಣ ಮುಂದುವರಿದು ಮಧ್ಯಾಹ್ನ ಮತ್ತೆ ತಾಸುಗಟ್ಟಲೆ ಮಳೆಯಾಯಿತು. ನಗರದ ರಸ್ತೆಗಳ ಹೊಂಡಗಳು ತುಂಬಿದ್ದಷ್ಟೇ ಅಲ್ಲ ಇದರಲ್ಲಿ ವಾಹನಗಳ ಓಡಾಟದ ಮೂಲಕ ಪಾದಚಾರಿಗಳ ಬಟ್ಟೆ ಕೆಂಪಾಗುವಂತೆ ಮಾಡಿತು.

ದ್ವಿಚಕ್ರ ವಾಹನ ಸವಾರರು ಮಳೆಯ ಕಾರಣದಿಂದ ಒದ್ದೆಯಾಗುತ್ತ ಸಾಗುತ್ತಿದ್ದುದು ಕಂಡುಬಂತು.

ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧೆಡೆ ಬುಧವಾರ ಮಳೆಯಾಗಿದೆ. ದಿನವಿಡೀ ಮಳೆಯ ವಾತಾವರಣವಿತ್ತು.

ಸಿದ್ದಾಪುರ ಪರಿಸರದಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಸಿದ್ದಾಪುರ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಿದ್ದಾಪುರ ಪರಿಸರದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಪರಿಣಾಮ ಜನ ಜೀವನದ ಮೇಲೆ ದೊಡ್ಡ ಹೊಡೆತ ಬಿದ್ದಿದೆ. ಆಹಾರ ಧಾನ್ಯಗಳು ಮಳೆಯಿಂದ ಕೊಳೆಯುತ್ತಿದ್ದು, ಅಪಾರ ನಷ್ಟ ಉಂಟಾಗಿದೆ.
ಹಲಾವಾರು ದಿನಗಳಿಂದ ಸಿದ್ದಾಪುರ ಪರಿಸರದಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಸಿಡಿಲಿಗೆ ಉಳ್ಳೂರು-74ರಲ್ಲಿ ನಾಲ್ಕು ಮನೆಗಳು ಹಾಗೂ ಹಾಲಾಡಿಯಲ್ಲಿ ಎರಡು ಮನೆಗಳು ಜಖಂಗೊಂಡಿವೆ. ಅಂಪಾರು ಗ್ರಾಮದ ಶಾನ್ಕಟ್ಟು ಬಳಿ ಪಂಚಾಯತ್‌ ರಸ್ತೆ ಸಿಡಿಲಿಗೆ ಹಾನಿಗೊಂಡಿದೆ. ಅನೇಕ ಮನೆಗಳಲ್ಲಿ ವಿದ್ಯುತ್‌ ಉಪಕರಣಗಳು, ಬಟ್ಟೆ ಬರೆ ಹಾಗೂ ಆಹಾರ ಪದಾರ್ಥಗಳು ಸುಟ್ಟುಹೋಗಿವೆ.

ಸಿದ್ದಾಪುರ ಮಾತ್ರವಲ್ಲದೆ ಶಂಕರನಾರಾಯಣ, ಹಾಲಾಡಿ, ಬೆಳ್ವೆ, ಮಡಾಮಕ್ಕಿ, ಹೆಂಗವಳ್ಳಿ, ಅಮಾಸೆಬೈಲು, ಹೊಸಂಗಡಿ, ಹಳ್ಳಿಹೊಳೆ, ಆಜ್ರಿ, ಅಂಪಾರು ಮುಂತಾದ ಪ್ರದೇಶಗಳಲ್ಲಿ ಬುಧವಾರ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಅಲ್ಲಲ್ಲಿ ಸಣ್ಣಪುಟ್ಟ ಹಾನಿ ಸಂಭವಿಸಿದೆ. ಭಾರೀ ಮಳೆಯಿಂದಾಗಿ ಅಡಿಕೆಗೆ ಕೊಳೆ ರೋಗ ಬಂದು ಅಡಿಕೆ ಉದುರುತ್ತಿವೆ.

ಮರಗಳು ಹಾನಿಗೊಂಡಿವೆ. ಅಲ್ಲಲ್ಲಿ ಬೆಳೆದಿರುವ ಭತ್ತದ ಗದ್ದೆಯನ್ನು ಕಟಾವು ಮಾಡಲು ಮಳೆ ಅಡ್ಡಿಪಡಿಸುತ್ತಿದ್ದು, ಪೈರುಗಳು ಓಣಗಿ ಗದ್ದೆಯಲ್ಲಿ ಭಾಗಿಕೊಂಡಿವೆ.

ಸಿದ್ದಾಪುರ ಮಾರ್ಕೆಟ್‌ ಕೆಸರುಮಯ
ಕುಂದಾಪುರ ತಾಲೂಕಿನಲ್ಲಿ ಎರಡನೇ ಅತೀ ದೊಡ್ಡ ಸಂತೆಯಾಗಿರುವ ಸಿದ್ದಾಪುರ ಸಂತೆ ಮಾರ್ಕೆಟ್‌ ಮಳೆಯಿಂದಾಗಿ ಕೆಸರು ಮಯವಾಗಿದೆ. ಸಂತೆ ಒಂದರಿಂದಲೇ ಗ್ರಾಮ ಪಂಚಾಯತ್‌ಗೆ ವಾರ್ಷಿಕ 2.75 ಲಕ್ಷ ರೂ. ಆದಾಯ ಇದ್ದರೂ ನಿರ್ವಹಣೆ ಇಲ್ಲದೆ, ವ್ಯಾಪಾರಸ್ಥರು ಕೊಳಚೆ ಮೇಲೆಯೇ ವ್ಯಾಪಾರ ಮಾಡುವಂತಾಗಿದೆ.

ಉಪ್ಪುಂದ, ಮರವಂತೆ ಭಾರೀ ಮಳೆ
ಉಪ್ಪುಂದ: ಬೈಂದೂರು, ಉಪ್ಪುಂದ, ಮರವಂತೆ ಪ್ರದೇಶಗಳಲ್ಲಿ ಅ. 23ರಂದು ದಿನವಿಡೀ ಭಾರೀ ಮಳೆ ಸುರಿದಿದೆ.

ಬೈಂದೂರು, ನಾವುಂದ, ಮರವಂತೆ ಪ್ರದೇಶದಲ್ಲಿ ಮಂಗಳವಾರ ರಾತ್ರಿಯಿಂದ ಮಳೆಯಾಗಿದೆ. ಬುಧುವಾರ ಕೂಡಾ ಮಳೆ ಮುಂದುವರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ರಾ.ಹೆದ್ದಾರಿಯ ಬದಿಯಲ್ಲಿ ಮಳೆ ನೀರು ನಿಂತುಕೊಂಡಿದ್ದು ದೊಡ್ಡ ವಾಹನಗಳು ಸಾಗುವಾಗ ರಸ್ತೆ ಮೇಲಿನ ಮಳೆ ನೀರು ಪಾದಚಾರಿಗಳ ಹಾಗೂ ಬೈಕ್‌ ಸವಾರರಿಗೆ ಎರಚುತ್ತಿದೆ. ವಾಹನಗಳ ಸಂಚಾರದಲ್ಲಿ ಅಡಚಣೆ ಉಂಟಾಯಿತು.

ಉಪ್ಪುಂದ ಸರ್ವಿಸ್‌ ರಸ್ತೆ ಹಾಗೂ ಬಿಜೂರು ಪ್ರೌಢ ಶಾಲೆಗೆ ಹೋಗುವ ರಸ್ತೆಯಲ್ಲಿ ಮಳೆ ನೀರು ನಿಂತುಕೊಂಡು ಸಾರ್ವಜನಿಕರು, ವಾಹನ ಸವಾರರು ಸಮಸ್ಯೆ ಎದುರಿಸುವಂತಾಯಿತು.

ದಿನವಿಡೀ ಸುರಿಯುತ್ತಿರು ಮಳೆ ಯಿಂದಾಗಿ ಭತ್ತ ಬೆಳೆಯ ಕಟಾವಿನ ತಯಾರಿಯಲ್ಲಿದ್ದ ರೈತರಿಗೆ ತೀವ್ರ ತೊಂದರೆಯಾಗುತ್ತಿರುವುದು ಕಂಡು ಬಂದಿದೆ. ಇದರಿಂದಾಗಿ ಕೃಷಿ ಚಟುವಟಿಕೆ ಸ್ಥಗಿತಗೊಂಡಿದೆ.

ಯಡ್ತರೆ, ಬಿಜೂರು, ನಾಯ್ಕನಕಟ್ಟೆ, ಕಂಬದಕೋಣೆ, ನಾಗೂರು, ಉಪ್ರಳ್ಳಿ, ಕಿರಿಮಂಜೇಶ್ವರ, ಅರೆಹೊಳೆ, ನಾವುಂದ ಪರಿಸರದಲ್ಲಿ ಮಳೆಯಾಗಿದೆ.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.