ಕುಂದಾಪುರ: ಕಾಮಗಾರಿ ಬಹುತೇಕ ಸ್ಥಗಿತ?; ಜನರ ನಿರೀಕ್ಷೆ ಹುಸಿ 


Team Udayavani, Feb 24, 2019, 1:00 AM IST

kamagari.jpg

ಕುಂದಾಪುರ: ಬಹುನಿರೀಕ್ಷಿತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸ್ಥಗಿತಗೊಂಡ ಲಕ್ಷಣಗಳು ಗೋಚರವಾಗುತ್ತಿವೆ. 

ಎಲ್ಲೆಲ್ಲಿ ಬಾಕಿ
ಬಸೂÅರು ಮೂರುಕೈಯಲ್ಲಿ ಅಂಡರ್‌ಪಾಸ್‌ ಕಾಮಗಾರಿ, ಶಾಸಿŒ ಸರ್ಕಲ್‌ನಲ್ಲಿ ಫ್ಲೈಓವರ್‌ಗೆ ಸಂಪರ್ಕ ರಸ್ತೆ, ಬಸೂÅರು ಮೂರು ಕೈಯ ಅಂಡರ್‌ಪಾಸ್‌ಗೆ ಸಂಪರ್ಕ ರಸ್ತೆ, ಕೆಎಸ್‌ಆರ್‌ಟಿಸಿ ಕಡೆಯಿಂದ ಫ್ಲೈಓವರ್‌ಗೆ ಸಂಪರ್ಕ ರಸ್ತೆ ಬಹುತೇಕ ಸ್ಥಗಿತ ಗೊಂಡಿದೆ. ಕಾರಣ ಈಗಿಲ್ಲಿ ಕೆಲಸ ಮಾಡುತ್ತಿರುವವರು ಮೂರ್‍ನಾಲ್ಕು ಮಂದಿ! 

ಆದೇಶ
ಕುಂದಾಪುರ ಸಹಾಯಕ ಕಮಿಷನರ್‌ ಆಗಿದ್ದ ಟಿ. ಭೂಬಾಲನ್‌ ಅವರು ಶಾಸಿŒ ಸರ್ಕಲ್‌ನಲ್ಲಿ ಕಳೆದ 6 ವರ್ಷಗಳಿಂದ ಅಪೂರ್ಣಾವಸ್ಥೆಯಲ್ಲಿದ್ದ ಫ್ಲೈಓವರ್‌ನಿಂದಾಗಿ ಸಾರ್ವಜನಿಕರಿಗೆ ತೊಂದರೆ ಯಾಗುತ್ತಿದೆ ಎಂದು ಕೇಸು ದಾಖಲಿಸಿ ಮಾರ್ಚ್‌ ಅಂತ್ಯದೊಳಗೆ ಫ್ಲೈಓವರ್‌ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕ ವಾಹನಗಳ ಓಡಾಟಕ್ಕೆ ಬಿಟ್ಟುಕೊಡಬೇಕೆಂದು ಆದೇಶ ನೀಡಿದ್ದಾರೆ. ಇದೇ ಮಾದರಿಯ ಆದೇಶವನ್ನು ಅವರು ಉಡುಪಿ ಕರಾವಳಿ ಫ್ಲೈಓವರ್‌ಗೂ ನೀಡಿದ್ದರು. ಅಲ್ಲಿ ಕಾಮಗಾರಿ ಮುಗಿದಿದ್ದು ಇಲ್ಲಿ ಕೈಗೆತ್ತಿಕೊಳ್ಳಲಾಗಿತ್ತು. ಸಾರ್ವಜನಿಕರು ಇಲ್ಲಿ ಕಾಮಗಾರಿ ಶರವೇಗದಿಂದ ನಡೆಯಲಿದೆ ಎಂದು ಭಾವಿಸಿದ್ದರು. ಅದೇ ಮಾದರಿಯಲ್ಲಿ ಬಸೂÅರು ಮೂರುಕೈ ಅಂಡರ್‌ಪಾಸ್‌ ಕಾಮಗಾರಿ ವೇಗವಾಗಿ ನಡೆದಿತ್ತು. ಆದರೆ ಇದೀಗ ಸಾರ್ವಜನಿಕರ ನಿರೀಕ್ಷೆ ಬುಡಮೇಲಾಗಿದೆ. ಮಾರ್ಚ್‌ನಲ್ಲಿ ಕಾಮಗಾರಿ ಮುಕ್ತಾಯ ನಿಜಕ್ಕೂ ಆಗುತ್ತಾ ಎನ್ನುವುದೇ ಜನರನ್ನು ಕಾಡುತ್ತಿದೆ.  

ಟೋಲ್‌ ಬಲವಂತ
ಶೇ.80ರಷ್ಟು ಕಾಮಗಾರಿ ಆಗದೇ ಟೋಲ್‌ ವಸೂಲಿ ಮಾಡುವಂತಿಲ್ಲ ಎಂದಿದ್ದರೂ ಹೆಜಮಾಡಿ ಹಾಗೂ ಸಾಸ್ತಾನದಲ್ಲಿ ಟೋಲ್‌ ವಸೂಲಿ ಕಾರ್ಯ ನಿರಾತಂಕವಾಗಿ ನಡೆಯುತ್ತಿದೆ. ಕಾಮಗಾರಿ ಸರಿಯಾಗಿ ಮಾಡದಿದ್ದರೆ ಟೋಲ್‌ ವಸೂಲಿ ನಿಲ್ಲಿಸಲಾಗುವುದು ಎಂದು ಎಸಿಯವರು ಕೂಡಾ ಎಚ್ಚರಿಸಿದ್ದರು. ಇಲ್ಲೂ ಕುಂದಾಪುರಕ್ಕೆ ಅನ್ಯಾಯವೇ ಆಗಿದ್ದು ಕುಂದಾಪುರ ಪೇಟೆಯ ಅರ್ಧಭಾಗದ ಜನರಿಗೆ ಮಾಸಿಕ ಪಾಸ್‌ ಕೊಡುತ್ತಿದೆ. ಇನ್ನರ್ಧ ಭಾಗದ ಮಂದಿಯ ವಿಳಾಸ ನೋಡಿ ಇದು 20 ಕಿ.ಮೀ. ವ್ಯಾಪ್ತಿಯಲ್ಲಿ ಇಲ್ಲ ಎಂದು ನಿರಾಕರಿಸಲಾಗುತ್ತಿದೆ. 

ಸಮಸ್ಯೆಗಳು
ಉಡುಪಿ ನವಯುಗ ಕನ್‌ಸ್ಟ್ರಕ್ಷನ್‌ ಕಂಪೆನಿ ಸುರತ್ಕಲ್‌ನಿಂದ ಕುಂದಾಪುರವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿದೆ. ಆದರೆ ಆರಂಭದಿಂದ ಇಂದಿನವರೆಗೂ ಕಂಪೆನಿ ಸಮಸ್ಯೆಗಳ ಸುಳಿಯಲ್ಲೇ ನಲುಗುತ್ತಿದೆ. ಸಮರ್ಪಕ ಕಾಮಗಾರಿ ನಡೆಸಲು ಸಾಧ್ಯವಾಗದೇ ಜಿಲ್ಲಾಡಳಿತದಿಂದ ಸಹಕಾರ ದೊರೆಯುತ್ತಿಲ್ಲ ಎಂದು ದೂರು ನೀಡಿದೆ. ಪ್ರತಿನಿತ್ಯ ಎರಡು ಟೋಲ್‌ಗ‌ಳಲ್ಲಿ ಟೋಲ್‌ ಸುಂಕ ವಸೂಲಿ ಮಾಡುತ್ತಿದ್ದರೂ ಕಾಮಗಾರಿ ಪೂರ್ಣಗೊಳಿಸಲು ಇನ್ನೂ ಸಾಧ್ಯವಾಗಿಲ್ಲ. ಈ ಮಧ್ಯೆ ಕಾಮಗಾರಿ ಬಗ್ಗೆ ಯಾವುದೇ ವಿವರಗಳನ್ನು ಸಂಸ್ಥೆ ನೀಡುತ್ತಿಲ್ಲ. ಕಾಮಗಾರಿಯ ನೀಲಿನಕ್ಷೆ ಪ್ರದರ್ಶನವನ್ನೂ ಮಾಡಿಲ್ಲ.

ಕಪ್ಪುಪಟ್ಟಿಗೆ ಸೇರ್ಪಡೆಗೆ ಸೂಚ ನೆ
ನವಯುಗ ಸಂಸ್ಥೆಯವರು ಫ್ಲೈಓವರ್‌ ಅರೆಬರೆ ಮಾಡಿಟ್ಟಂತೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಪೂರ್ಣಪ್ರಮಾಣದಲ್ಲಿ ಸಮರ್ಪಕವಾಗಿ ಮಾಡಲೇ ಇಲ್ಲ. ಅವರ ಹಣಕಾಸಿನ ತೊಂದರೆಯೋ ಏನೋ ನಮಗಂತೂ ಅದರ ಮಾಹಿತಿ ಇಲ್ಲ. ಆದರೆ ಕಾಮಗಾರಿಯಲ್ಲಿ ನಿರ್ಲಕ್ಷ್ಯ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡಿದ್ದರಿಂದ, ಸಕಾಲದಲ್ಲಿ ಕಾಮಗಾರಿ ಪೂರೈಸಿ ಬಿಟ್ಟುಕೊಡದ್ದರಿಂದ  ನವಯುಗ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಲು ಸೂಚಿಸಲಾಗಿದೆ.
-ಶೋಭಾ ಕರಂದ್ಲಾಜೆ ಸಂಸದರು, ಉಡುಪಿ 

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.