ಕುಂದಾಪುರ ಪುರಸಭೆ : ತೆರಿಗೆ ವಸೂಲಾತಿಯಲ್ಲಿ  ಮುಂದೆ


Team Udayavani, Apr 7, 2018, 7:00 AM IST

8.jpg

ಕುಂದಾಪುರ: ತೆರಿಗೆ ಸಂಗ್ರಹದಲ್ಲಿ ಕಳೆದ ಆರ್ಥಿಕ ವರ್ಷದಲ್ಲಿ ಕುಂದಾಪುರ ಪುರಸಭೆಯು ಉತ್ತಮ ಸಾಧನೆಗೈದಿದ್ದು, ಒಟ್ಟು  ವಾರ್ಷಿಕ 1.79 ಕೋ. ರೂ. ಗುರಿ ನಿಗದಿಯಾಗಿದ್ದು, ಅದರಲ್ಲಿ  1.70 ಕೋ. ರೂ.  ಸಂಗ್ರಹ ಮಾಡುವ ಮೂಲಕ ಒಟ್ಟು ಶೇ. 94ರಷ್ಟು ಸಾಧನೆ ಮಾಡಿದೆ.  

2017-18ನೇ ಸಾಲಿನ ಆರ್ಥಿಕ ವರ್ಷದಲ್ಲಿ  ನೀರು, ವ್ಯಾಪಾರ, ಕಟ್ಟಡ, ಘನತ್ಯಾಜ್ಯ ಎಲ್ಲ ವಿಭಾಗದಲ್ಲೂ  ಶೇ. 90 ಕ್ಕಿಂತಲೂ ಅಧಿಕ ತೆರಿಗೆ ಸಂಗ್ರಹವಾಗಿದೆ. 23 ವಾರ್ಡ್‌ಗಳಿರುವ ಕುಂದಾಪುರ ಪುರಸಭೆಯ ವಾರ್ಷಿಕ ಬಜೆಟ್‌ ಕಳೆದ ಬಾರಿ 5 ಕೋ.ರೂ. ಇದ್ದರೆ, ಈ ಬಾರಿ 5.50 ಕೋ.ರೂ.ಗೆ ಏರಿಸಲಾಗಿದೆ. 2016ರಲ್ಲಿ ವಾರ್ಷಿಕ ಬಜೆಟ್‌ 4.75 ಕೋ.ರೂ. ಇತ್ತು. ಎಲ್ಲ  ರೀತಿಯ ತೆರಿಗೆ  ಸೇರಿ ಒಟ್ಟು 179.28 ಕೋ. ರೂ. ಗುರಿ ನಿಗದಿಪಡಿಸಿದ್ದು, ಅದರಲ್ಲಿ 169.15 ಕೋ.ರೂ. ಸಂಗ್ರಹವಾಗಿದೆ. 10 ಲ.ರೂ. ತೆರಿಗೆ ಸಂಗ್ರಹ ಬಾಕಿಯಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಸಂಗ್ರಹ ಪ್ರಮಾಣದಲ್ಲಿ ಶೇ. 5ರಷ್ಟು ಕಡಿಮೆಯಿದೆ. ಕಳೆದ ಆರ್ಥಿಕ ವರ್ಷದಲ್ಲಿ ಶೇ. 99ರಷ್ಟು ಸಾಧನೆ ಮಾಡಿತ್ತು. 

ನೀರು ಶುಲ್ಕ: ಶೇ. 92 ರಷ್ಟು ಸಂಗ್ರಹ
ಪುರಸಭೆ ವ್ಯಾಪ್ತಿಯ ಒಟ್ಟು  2,950 ನೀರಿನ ಸಂಪರ್ಕಗಳಿದ್ದು 1.25 ಕೋ.ರೂ. ಶುಲ್ಕ ಸಂಗ್ರಹ ಗುರಿಯಿದ್ದು, ಅದ ರಲ್ಲಿ ಈ ಬಾರಿ 1.15 ಕೋ. ರೂ. ವಸೂಲಾತಿಯಾಗಿದ್ದು, ಶೇ. 92ರಷ್ಟು ಸಾಧನೆ  ಮಾಡಿದಂತಾಗಿದೆ. ಇದರಲ್ಲಿ  2,754 ಗೃಹಬಳಕೆ, 155 ವಾಣಿಜ್ಯ, 33 ವಾಣಿಜ್ಯವಲ್ಲದ ಸಂಪರ್ಕಗಳು  ಹಾಗೂ 6 ಪ್ರತ್ಯೇಕ ಗ್ರಾ.ಪಂ. ಗಳ ಸಂಪರ್ಕಗಳು ಸೇರಿವೆ. ಪುರಸಭೆ ವ್ಯಾಪ್ತಿಯಲ್ಲಿ  12,500 ಕಟ್ಟಡಗಳ‌ಲ್ಲಿ 8,500 ಮನೆಗಳು ಸೇರಿವೆ. ಕಟ್ಟಡ ಬಾಡಿಗೆ, ವಾಣಿಜ್ಯ ಸಂಕೀರ್ಣ ಇತರ ಎಲ್ಲ ಸೇರಿ ಒಟ್ಟು  22 ಲಕ್ಷ ರೂ. ಗುರಿಯಿದ್ದು, ಅದರಲ್ಲಿ 21.06 ಲ.ರೂ. ಸಂಗ್ರಹವಾಗುವ ಮೂಲಕ ಶೇ. 96ರಷ್ಟು ಸಾಧನೆ ಮಾಡಿದಂತಾಗಿದೆ. 

40 ಲಕ್ಷ ರೂ. ಸಂಗ್ರಹ
ಪುರಸಭೆ ವ್ಯಾಪ್ತಿಯಲ್ಲಿ  ಘನತ್ಯಾಜ್ಯ ನಿರ್ವಹಣೆಗೆ ಎಲ್ಲ ಮನೆಗಳಿಂದ ಸಂಗ್ರಹಿಸುವ ಶುಲ್ಕದಲ್ಲಿ ಒಟ್ಟು ಈ ಬಾರಿ ವಾರ್ಷಿಕ 40 ಲ.ರೂ. ಸಂಗ್ರಹವಾಗಿದೆ. ಇದು ಜಿಲ್ಲೆಯಲ್ಲಿಯೇ ಉತ್ತಮ ಸಾಧನೆ. ಕುಂದಾಪುರ ಪುರಸಭೆ ಘನತ್ಯಾಜ್ಯ ನಿರ್ವಹಣೆಯಲ್ಲಿಯೂ ಉಡುಪಿ ಜಿಲ್ಲೆಗೆ ಮಾದರಿಯಾಗಿದ್ದು, ಇಲ್ಲಿ ಉತ್ಪತ್ತಿಯಾಗುತ್ತಿರುವ ತ್ಯಾಜ್ಯಗಳನ್ನು  ಜೈವಿಕ ಗೊಬ್ಬರವಾಗಿ ಪರಿವರ್ತಿಸಿ ಮಾರಾಟ ಮಾಡುವ ಮೂಲಕ ಆದಾಯವನ್ನು ತರುತ್ತಿದೆ. 

ಇನ್ನು ಇ- ಪಾವತಿ ಮಾಡಿ
ಎ. 1ರಿಂದ ಪುರಸಭೆಗೆ ಯಾವುದೇ ಪಾವತಿಯನ್ನು (ತೆರಿಗೆ ಹಾಗೂ ಇನ್ನಿತರ) ನೇರವಾಗಿ ಸಂಬಂಧಪಟ್ಟ ಬ್ಯಾಂಕ್‌ನ ಮೂಲಕವೇ ಪಾವತಿಸಬೇಕು ಎಂದು ಈಗಾಗಲೇ ಪೌರಾಡಳಿತ ನಿರ್ದೇಶನಾಲಯ ಆದೇಶ ಹೊರಡಿಸಿದೆ. ಇನ್ನು ಮುಂದೆ ಮನೆ ತೆರಿಗೆ, ನೀರಿನ ಶುಲ್ಕ, ನೀರು ಸರಬರಾಜು ಶುಲ್ಕ, ವ್ಯಾಪಾರ ಪರವಾನಿಗೆ, ಕಟ್ಟಡ ಬಾಡಿಗೆ, ಜಾಹೀರಾತು ತೆರಿಗೆ, ಕಟ್ಟಡ ಪರವಾನಿಗೆ ಶುಲ್ಕ ಘನತ್ಯಾಜ್ಯ ನಿರ್ವಹಣ ಶುಲ್ಕ ಹೀಗೆ ಎಲ್ಲವನ್ನು ಆನ್‌ಲೈನ್‌ ಮೂಲಕವೇ ಪಾವತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮೊದಲೆರಡು ದಿನ ಈ-ಪಾವತಿಯಲ್ಲಿ ಸ್ವಲ್ಪ ಮಟ್ಟಿಗಿನ ಗೊಂದಲಗಳಾಗಿದ್ದು, ಈಗ ಆ ತಾಂತ್ರಿಕ ತೊಂದರೆ ನಿವಾರಣೆಯಾಗಿದೆ. ಎಲ್ಲರೂ ಇ-ಪಾವತಿಯನ್ನು ಉಪಯೋಗಿಸಿ.   
ಕೆ. ಗೋಪಾಲಕೃಷ್ಣ ಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ

ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.