ಕುಂದಾಪುರ: ವಿವಿಧೆಡೆ ಅಂಚೆ ಆಧಾರ್‌ ನೋಂದಣಿ


Team Udayavani, Oct 7, 2020, 11:30 AM IST

ಕುಂದಾಪುರ: ವಿವಿಧೆಡೆ ಅಂಚೆ ಆಧಾರ್‌ ನೋಂದಣಿ

ಕುಂದಾಪುರ, ಅ. 6: ತಾಲೂಕಿನ ವಿವಿಧ ಅಂಚೆ ಕಚೇರಿಗಳಲ್ಲಿ ಅಂಚೆ ಇಲಾಖೆ ವತಿಯಿಂದ ಆಧಾರ್‌ ತಿದ್ದುಪಡಿ, ನೋಂದಣಿ ಪ್ರಕ್ರಿಯೆ ಮಂಗಳವಾರ ನಡೆಯಿತು.

ಎರಡು ಕಡೆ ಸರ್ವರ್‌ ಸಮಸ್ಯೆ ಉಂಟಾದುದು ಬಿಟ್ಟರೆ ಇತರೆಡೆ ಸಾರ್ವಜನಿಕರಿಗೆ ಅಗತ್ಯ ಸೇವೆ ನೀಡುವಲ್ಲಿ ಅಂಚೆ ಇಲಾಖೆಯ ಶ್ರಮ ಫ‌ಲ ಕೊಟ್ಟಿದೆ. ಮಂಗಳವಾರ ತಾಲೂಕಿನಲ್ಲಿ ವಿದ್ಯುತ್‌ ವ್ಯತ್ಯಯದ ದಿನವಾಗಿದ್ದು ಅಂಚೆ ಇಲಾಖೆ ಆಧಾರ್‌ ಅಭಿಯಾನವನ್ನು ಸವಾಲಾಗಿ ಸ್ವೀಕರಿಸಿ ಜನರಿಗೆ ಸೇವೆ ನೀಡಿದೆ. ಉಡುಪಿಯಿಂದ ಬೈಂದೂರಿನ ಶಿರೂರುವರೆಗೆ ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕ ನವೀನ್‌ಚಂದ್ರ ಅವರು ಸ್ವತಃ ಭೇಟಿ ನೀಡಿ ಪರಿಶೀಲಿಸಿ, ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ಕಂಪ್ಯೂಟರ್‌ ಕೈ ಕೊಟ್ಟಲ್ಲಿಗೆ ಬದಲಿ ವ್ಯವಸ್ಥೆ ಯನ್ನೂ ಮಾಡಿಸಿದ್ದರು.

ಸಾರ್ವಜನಿಕರಿಗೆ ಆಧಾರ್‌ ಸೇವೆಯ ಅಗತ್ಯವನ್ನು ಅರಿತು ಉಡುಪಿ ಅಂಚೆ ವಿಭಾಗವು ಎರಡು ಜಿಲ್ಲೆಗಳಲ್ಲಿ ವಿವಿಧ ಅಂಚೆ ಕಚೇರಿಗಳಲ್ಲಿ ಆಧಾರ್‌ ಅಭಿಯಾನ ಆಯೋಜಿಸಿತ್ತು. ಕುಂದಾಪುರ ತಾಲೂಕಿನ  ಅಂಚೆ ಕಚೇರಿಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಆಧಾರ್‌ ಅಭಿಯಾನ ಆರಂಭಗೊಳ್ಳಲಿದೆ, ಗರಿಷ್ಠ 150 ಆಧಾರ್‌ ನೋಂದಣಿ ಹಾಗೂ ತಿದ್ದುಪಡಿ ಸೇವೆ ಲಭ್ಯವಿದೆ ಎಂದು ತಿಳಿಸಲಾಗಿತ್ತು. ಕೋವಿಡ್‌-19 ಮುನ್ನೆಚ್ಚರಿಕೆ ಕ್ರಮವಾಗಿ ಆಸಕ್ತರು ಮುಂಗಡ ಟೋಕನ್‌ ಪಡೆದುಕೊಂಡು ನಿಗದಿತ ಸಮಯಕ್ಕೆ ಅಂಚೆ ಕಚೇರಿಗೆ ಭೇಟಿ ನೀಡಿ ಆಧಾರ್‌ ಸಂಬಂಧಿತ ಸೇವೆಯನ್ನು ಪಡೆದುಕೊಳ್ಳಲು ಇಲಾಖೆ ಏರ್ಪಾಡು ಮಾಡಿತ್ತು. ಅದರಂತೆ ನೋಂದಣಿ ಮಾಡಿದವರಿಗೆ ಅಂಚೆ ಇಲಾಖೆ ಸಿಬಂದಿ ಮನೆ ಮನೆಗೆ ತೆರಳಿ ಸಮಯ ನಿಗದಿ ಮಾಡಿ ಟೋಕನ್‌ ನೀಡಿದ್ದರು.

ಕುಂದಾಪುರ ಪ್ರಧಾನ ಅಂಚೆ ಕಚೇರಿ ಹಾಗೂ ಬೈಂದೂರಿನಲ್ಲಿ ಕಂಪ್ಯೂಟರ್‌ ನೆಟ್‌ವರ್ಕ್‌ ಸಮಸ್ಯೆ ಉಂಟಾಗಿ ಪ್ರಕ್ರಿಯೆ ಸಮರ್ಪಕವಾಗಿ ನಡೆಯಲಿಲ್ಲ. ಹಾಗಿದ್ದರೂ ಕುಂದಾಪುರದಲ್ಲಿ ತತ್‌ಕ್ಷಣ ಬದಲಿ ವ್ಯವಸ್ಥೆ ಮಾಡಿ ಸಂಜೆ ವೇಳೆಗೆ 75ರಷ್ಟು ಮಂದಿಗೆ ಸೌಕರ್ಯ ಮಾಡಿಕೊಡಲಾಯಿತು. ಬೈಂದೂರಿನಲ್ಲಿ ಸಾಧ್ಯವಾಗಲಿಲ್ಲ. ಬಸ್ರೂರು ಮೊದಲಾದೆಡೆ ಸಂಜೆ 6 ಗಂಟೆ ಅನಂತರವೂ ಜನ ಆಗಮಿಸುತ್ತಲೇ ಇದ್ದರು.ಕುಂದಾಪುರ ಪ್ರಧಾನ ಅಂಚೆ ಕಚೇರಿ 75, ತಲ್ಲೂರು ಅಂಚೆ ಕಚೇರಿ 92, ಬಸ್ರೂರು 100, ತ್ರಾಸಿ 85, ವಂಡ್ಸೆ 84, ಕೋಟೇಶ್ವರ 150, ಶಂಕರನಾರಾಯಣ 55, ಶಿರೂರು 16, ಗಂಗೊಳ್ಳಿ 68 ಆಧಾರ್‌ ಪ್ರಕ್ರಿಯೆಗಳು ನಡೆದಿವೆ.

ಮಾರ್ಗಸೂಚಿ ಪಾಲನೆ :  ಕೋವಿಡ್ ಹಿನ್ನೆಲೆಯಲ್ಲಿ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಿ ಹೆಚ್ಚು ಜನಸಂದಣಿ ಆಗದಂತೆ ಮೊದಲೇ ನಮ್ಮ ಸಿಬಂದಿ ಮೂಲಕ ಟೋಕನ್‌ ವಿತರಿಸಿ ಸಮಯ ನಿಗದಿ ಮಾಡಿಯೇ ಪ್ರಕ್ರಿಯೆ ನಡೆಸಲಾಯಿತು. ಗಣಪತಿ ಮರ್ಡಿ ಸಹಾಯಕ ಅಂಚೆ ಅಧೀಕ್ಷಕರು, ಕುಂದಾಪುರ

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.