ಕುಂದಾಪುರ: 18,250 ಹೆಕ್ಟೇರ್‌ ಬಿತ್ತನೆ ಗುರಿ​​​​​​​


Team Udayavani, Jun 3, 2018, 6:00 AM IST

0206kdpp3.jpg

ಕುಂದಾಪುರ: ಮುಂಗಾರು ನಿಧಾನಕ್ಕೆ ಆರಂಭವಾಗುತ್ತಿದ್ದಂತೆ ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಈ ಹಂಗಾಮಿನಲ್ಲಿ 3 ಹೋಬಳಿಯಿಂದ ಒಟ್ಟು 18,250 ಹೆಕ್ಟೇರ್‌ ಭತ್ತದ ಬಿತ್ತನೆ ಗುರಿಯನ್ನು ಹೊಂದಲಾಗಿದೆ.

ಈಗಾಗಲೇ ಒಂದೆರಡು ಮಳೆಯಾಗಿದ್ದರಿಂದ ಕುಂದಾಪುರ ಭಾಗದಲ್ಲಿ ರೈತರು ಗದ್ದೆಗಳನ್ನು ಉಳುಮೆ ಮಾಡಿ, ಹದ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೀಜಗಳನ್ನು ಬಿತ್ತಲಾಗಿದ್ದು, ಇನ್ನೊಂದು ವಾರದಲ್ಲಿ ಕೃಷಿ ಕಾರ್ಯ ಮತ್ತಷ್ಟು ಚುರುಕು ಪಡೆದುಕೊಳ್ಳಲಿದೆ. ಕಳೆದ ಬಾರಿ ಮುಂಗಾರಿನಲ್ಲಿ 17,850 ಹೆಕ್ಟೇರ್‌ ಬಿತ್ತನೆ ಕಾರ್ಯ ನಡೆದರೆ, ಈ ಬಾರಿ ಅದಕ್ಕಿಂತಲೂ ಹೆಚ್ಚಿನ ಭತ್ತದ ಬಿತ್ತನೆಯ ಗುರಿಯನ್ನು ಹೊಂದಲಾಗಿದೆ.

ಬದಲಿ ಭತ್ತದ ಬೀಜ ಬಳಕೆ
ಎಂ.ಒ. 4 ಭತ್ತದ ಬೀಜದ ಕೊರತೆ ನೀಗಿಸಲು ಕೇರಳದಿಂದ ಈ ಬಾರಿ ಕುಂದಾಪುರ ಕೃಷಿ ಕೇಂದ್ರಕ್ಕೆ ತಲಾ 160 ಕೆ.ಜಿ. ಯಷ್ಟು ಎಂ.ಒ. 21 ಬೀಜ ಹಾಗೂ ಎಂ.ಒ. 22 ಭತ್ತದ ಬೀಜವನ್ನು ತರಿಸಲಾಗಿದೆ. 

ಎಂ.ಒ. 4 ಭತ್ತದ ಬೀಜಗಳಿಗೆ ಪರ್ಯಾಯ ವ್ಯವಸ್ಥೆ
ಕರಾವಳಿ ಭಾಗದಲ್ಲಿ ಹೆಚ್ಚಿನ ರೈತರು ಹೆಚ್ಚು ಫಸಲು ತರುವ ಎಂ.ಒ. 4 ಭತ್ತದ ಬೀಜವನ್ನು ಬಳಸುತ್ತಿದ್ದು, ಆದರೆ ಈ ಬಾರಿ ಶಿವಮೊಗ್ಗದಲ್ಲಿ ಹವಾಮಾನ ವೈಪರೀತ್ಯ ಇನ್ನಿತರ ಕಾರಣದಿಂದ ಅಲ್ಲಿ ಉತ್ಪಾದನೆ ಕಡಿಮೆಯಾಗಿತ್ತು. ಆ ಕಾರಣದಿಂದ ಉಡುಪಿ ಜಿಲ್ಲೆಯ ಎಲ್ಲ ಕಡೆಗಳಲ್ಲಿ ಎಂ.ಒ. 4 ಬೀಜಗಳ ಕೊರತೆಯಿದೆ. ಆದರೆ ಅದಕ್ಕೆ ಪರ್ಯಾಯವಾಗಿ ಜ್ಯೋತಿ, ಉಮಾ, ಎಂ.ಒ.21, ಎಂ.ಒ. 22 ಭತ್ತದ ಬೀಜಗಳನ್ನು ತರಿಸಲಾಗಿದೆ.

ಬಿತ್ತನೆ ಗುರಿ  ಅಂಕಿ-ಅಂಶ
ವರ್ಷ    ಗುರಿ    ಆಗಿರುವ ಬಿತ್ತನೆ
2017    18,250    17,850
2016    18250    17,550
2015    18,250    17,250
(ಗುರಿ ಹಾಗೂ ಆಗಿರುವ ಬಿತ್ತನೆ ಹೆಕ್ಟೇರ್‌ಗಳಲ್ಲಿ )

ಬಿತ್ತನೆ ಬೀಜಗಳ ಕೊರತೆಯಿಲ್ಲ
ಕುಂದಾಪುರ ತಾಲೂಕು ವ್ಯಾಪ್ತಿಯ ವಂಡ್ಸೆ, ಬೈಂದೂರು ಹಾಗೂ ಕುಂದಾಪುರದ 3 ವಲಯಗಳಲ್ಲಿ ಎಲ್ಲಿಯೂ ಬಿತ್ತನೆ ಬೀಜದ ಕೊರತೆಯಿಲ್ಲ. ಈಗಾಗಲೇ ಎಲ್ಲ ರೈತರ ಸೇವಾ ಕೇಂದ್ರಗಳಿಗೆ ಬಿತ್ತನೆ ಬೀಜಗಳನ್ನು ಪೂರೈಕೆ ಮಾಡಲಾಗಿದೆ. ಎಂ.ಒ.4 ಬೀಜ 320 ಕ್ವಿಂಟಾಲ್‌ ನಷ್ಟು ಬಂದಿದೆ. ಅದನ್ನು ವಿತರಿಸಲಾಗಿದೆ. ಕೊರತೆಯಾಗುವುದಕ್ಕೆ ಬದಲಿಯಾಗಿ ಬೇರೆ ತಳಿಯ ಬೀಜಗಳನ್ನು ತರಿಸಲಾಗಿದೆ.
– ವಿಟಲ್‌ ರಾವ್‌, ಸಹಾಯಕ ಕೃಷಿ ನಿರ್ದೇಶಕರು, ಕುಂದಾಪುರ ತಾಲೂಕು

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.