ಕುಂದಾಪುರ ಮಳೆಯಬ್ಬರ: ಹಲವು ಮನೆಗಳಿಗೆ ಹಾನಿ, ಅಪಾರ ನಷ್ಟ


Team Udayavani, Jul 8, 2018, 6:00 AM IST

0707kdpp3a.jpg

ಕುಂದಾಪುರ: ತಾಲೂಕಿನೆಲ್ಲೆಡೆ ಶನಿವಾರವೂ ವರುಣನ ಆರ್ಭಟ ಮುಂದುವರಿದಿದ್ದು, ಹಲವೆಡೆ ಮನೆಗಳು, ತೋಟಗಳಿಗೂ ಹಾನಿಯಾಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. 

ಖಾರ್ವಿಕೇರಿ: 3 ಮನೆ ಕುಸಿತ
ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕುಂದಾಪುರ ಪುರಸಭೆ ವ್ಯಾಪ್ತಿಯ ಖಾರ್ವಿಕೇರಿ ವಾರ್ಡಿನ ಪುರುಷೋತ್ತಮ್‌ ನಾಯ್ಕ ಅವರ ಮನೆ ಗೋಡೆ ಕುಸಿದು, ಭಾಗಶಃ ಹಾನಿಯಾಗಿದೆ. 

ಅಂದಾಜು ಸುಮಾರು 30 ಸಾವಿರ ರೂ. ನಷ್ಟ, ಹರೀಶ್‌ ಖಾರ್ವಿ ಅವರ ಮನೆ ಗೋಡೆ ಕುಸಿದು, ಸುಮಾರು 40 ಸಾವಿರ ರೂ. ನಷ್ಟ, ಪಾಂಡುರಂಗ ಖಾರ್ವಿ ಅವರ ಮನೆ ಕುಸಿದು, ಸುಮಾರು 40 ಸಾವಿರ ರೂ. ನಷ್ಟ ಉಂಟಾಗಿದೆ. 

ವಡೇರಹೋಬಳಿ ಗ್ರಾಮದ ಕೈಪಾಡಿಯಲ್ಲಿ ಬಚ್ಚಿ ಪೂಜಾರಿ¤ ಅವರ ಮನೆಗೆ ಹಾನಿಯಾಗಿದ್ದು, 50 ಸಾವಿರ ರೂ. ನಷ್ಟ, ಕಟ್‌ಬೆಲೂ¤ರು ಗ್ರಾಮದ ಇಂದಿರಾ ನಗರ ನಿವಾಸಿ ಗಿರಿಜಾ ಪೂಜಾರಿ¤ ಅವರ ಮನೆಯ ಶೆಡ್‌ ಕುಸಿದು, ಸುಮಾರು 25 ಸಾವಿರ ರೂ. ನಷ್ಟ ಸಂಭವಿಸಿದೆ.
 
ಮನೆಗೆ ಮರ ಬಿದ್ದು ಹಾನಿ
ಹಾರ್ದಳ್ಳಿ- ಮಂಡಳ್ಳಿ ಗ್ರಾಮದ ಸೀತಾ ಅವರ ಮನೆಗೆ ಮರ ಬಿದ್ದು, ಭಾಗಶಃ ಹಾನಿಯಾಗಿದೆ. ಸುಮಾರು 50 ಸಾವಿರ ರೂ. ನಷ್ಟ ಸಂಭವಿಸಿದೆ. 

ಆನಗಳ್ಳಿ : ತೋಟಗಳಿಗೆ ಹಾನಿ
ಆನಗಳ್ಳಿ ಗ್ರಾಮದ ಮುತ್ತ ಪೂಜಾರಿ ಅವರ ತೋಟಕ್ಕೆ ಹಾನಿಯಾಗಿದ್ದು, ಸುಮಾರು 20 ಸಾವಿರ ರೂ. ನಷ್ಟ ಸಂಭವಿಸಿದೆ. ಅದೇ ಗ್ರಾಮದ ಸೀತಾರಾಮ್‌ ನಾಯ್ಕ ಅವರ ತೋಟಕ್ಕೂ ಮಳೆಯಿಂದಾಗಿ ಹಾನಿಯಾಗಿದ್ದು, ಸುಮಾರು 15 ಸಾವಿರ ರೂ. ನಷ್ಟ ಉಂಟಾಗಿದೆ. ನೋಯಲ್‌ ಅವರ ತೋಟಕ್ಕೆ ಹಾನಿ ಉಂಟಾಗಿದ್ದು, ಸುಮಾರು 20 ಸಾವಿರ ರೂ. ನಷ್ಟ ಸಂಭವಿಸಿದೆ. 

ಕಡಲಬ್ಬರ ಜೋರು
ಕೋಟೇಶ್ವರದ ಕಿನಾರಾ, ಕೋಡಿ, ಗಂಗೊಳ್ಳಿ, ಮರವಂತೆ, ಸೋಮೇಶ್ವರ ಭಾಗದಲ್ಲಿ ಕಡಲಬ್ಬರ ಜೋರಾಗಿದ್ದು, ಭಾರೀ ಗಾತ್ರದ ಅಲೆಗಳು ಬಂದು ದಡಕ್ಕೆ ಅಪ್ಪಳಿಸುತ್ತಿದೆ. 

ಇನ್ನು ಕುಂದಾಪುರ, ಬೈಂದೂರು ಭಾಗದ ಸೌಪರ್ಣಿಕಾ, ಕುಬಾj, ವಾರಾಹಿ, ಚಕ್ರ, ಕಾಶಿ ನದಿಗಳು ತುಂಬಿ ಹರಿಯುತ್ತಿದ್ದು, ಕೆಲವು ಕಡೆಗಳಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಭಾರೀ ಮಳೆಗೆ ಮಾರಣಕಟ್ಟೆ  
ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಜಲಾವೃತ
ಕೊಲ್ಲೂರು
: ಕಳೆದ 3 ದಿನ ಗಳಿಂದ ಅವ್ಯಾಹತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕುಂದಾಪುರ ಹಾಗೂ ಉಡುಪಿ ತಾಲೂಕಿನ ಮಾರಣ ಕಟ್ಟೆಯ  ಶ್ರೀ ಬ್ರಹ್ಮ ಲಿಂಗೇಶ್ವರ ದೇವಸ್ಥಾನವು ಸಂಪೂರ್ಣ ಜಲಾವೃತಗೊಂಡಿದೆ.

ಮಾರಣಕಟ್ಟೆಯ ಬ್ರಹ್ಮಕುಂಡ ನದಿ ಉಕ್ಕಿ ಹರಿಯುತ್ತಿದ್ದು, ಅದರ ಉಪನದಿಯಾದ ಚಕ್ರಾ ನದಿಯು ಅಪಾಯ ಮಟ್ಟದಿಂದ ಮೇಲೆ ಹರಿದು ಬಂದಿರುವುದರಿಂದ  ಮಾರಣಕಟ್ಟೆಯ  ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ,  ದೇಗುಲದ ಭೋಜನ ಶಾಲೆ ಸಹಿತ  ಬಲಪಾರ್ಶ್ವ ಸಂಪೂರ್ಣ ಜಲಾಮಯವಾಗಿದೆ. ಇಲ್ಲಿಗೆ ಆಗಮಿಸಿದ ಭಕ್ತರು  ತೊಯ್ದ ಬಟ್ಟೆಯಲ್ಲಿ ದೇವರ ದರ್ಶನ ಮಾಡಬೇಕಾಯಿತು. ಚಿತ್ತೂರು, ಹೊಸೂರು, ವಂಡ್ಸೆ, ಇಡೂರು, ನೂಜಾಡಿ, ಕುಂದಬಾರಂದಾಡಿ, ಜಾಡಿ ಪರಿಸರದಲ್ಲಿನ ಅನೇಕ ಕೃಷಿಭೂಮಿ ಸಂಪೂರ್ಣ ಜಲಾವೃತಗೊಂಡಿದ್ದು  ಕೃಷಿ ಬೆಳೆ ನಾಶವಾಗಿದೆ. ವಂಡ್ಸೆ ಪರಿಸರದಲ್ಲಿ ಈ ಭಾಗದ ಚರಿತ್ರೆಯಲ್ಲೇ ಮೊದಲು ಎಂಬಂತೆ ಕಳೆದ 3 ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. 

ಕೊಲ್ಲೂರಿನಲ್ಲಿ ಭಾರೀ ಮಳೆ : ಕೊಲ್ಲೂರು ಪರಿಸರದಲ್ಲಿ ಎಡಬಿಡದೆ  ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ರೈತರು ಆತಂಕಕ್ಕೊಳಗಾಗಿದ್ದಾರೆ. ಹಾಲ್ಕಲ್‌, ಜಡ್ಕಲ್‌, ಮುದೂರಿನಲ್ಲಿ ಮಳೆಯಾಗಿದ್ದು ಯಾವುದೇ ಅನಾಹುತದ ಬಗ್ಗೆ ವರದಿಯಾಗಿಲ್ಲ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.