ಕುಂದಾಪುರ: ಕೆರೆಗಳ ಒತ್ತುವರಿಗೆ ಬೀಳಲಿದೆ ತೆರೆ

ರಾಜ್ಯಾದ್ಯಂತ ನಡೆಯಲಿದೆ ಕೆರೆಗಳ ಸರ್ವೆ

Team Udayavani, Mar 9, 2020, 6:05 AM IST

ಕುಂದಾಪುರ: ಕೆರೆಗಳ ಒತ್ತುವರಿಗೆ ಬೀಳಲಿದೆ ತೆರೆ

ಕುಂದಾಪುರ: ರಾಜ್ಯ ಉಚ್ಚ ನ್ಯಾಯಾಲಯದ ಆದೇಶ ಮೇರೆಗೆ ಕೆರೆಗಳ ಅಳತೆಗೆ ಚಾಲನೆ ದೊರೆತಿದೆ. ಗ್ರಾಮಗಳಲ್ಲಿ, ಪುರಸಭೆ ವ್ಯಾಪ್ತಿಯಲ್ಲಿ ಇರುವ ಕೆರೆಗಳ ಪಟ್ಟಿಯನ್ನು ಕಂದಾಯ ಇಲಾಖೆ ಸಿದ್ಧಪಡಿಸಬೇಕು. ಸಣ್ಣ ನೀರಾವರಿ ಇಲಾಖೆ ಇದರ ಸರ್ವೆ ನಡೆಸಬೇಕು. ಸರ್ವೆ ಅನಂತರ ಒತ್ತುವರಿ ತೆರವು, ನಿರ್ವಹಣೆ ನಡೆಯಲಿದೆ. ಈ ಮೂಲಕ ಸರಕಾರ ಜಲಸಮೃದ್ಧಿಗೆ ಒಂದು ಹೆಜ್ಜೆ ಮುಂದೆ ಇಡಲಿದೆ.

ಆದೇಶ
ಕೆರೆ ಸಂರಕ್ಷಣೆ ಕುರಿತು “ಸಿಟಿಜನ್‌ ಆ್ಯಕ್ಷನ್‌ ಫೋರಂ’ ಸೇರಿ ಮೂವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ, ರಾಜ್ಯದ ಎಲ್ಲ ಕೆರೆಗಳ ಸರ್ವೆ ನಡೆಸಲು ಒಂದು ತಿಂಗಳಲ್ಲಿ ಜಿಲ್ಲಾ ಮಟ್ಟದ ಕೆರೆ ಸಂರಕ್ಷಣಾ ಸಮಿತಿ ರಚಿಸಬೇಕು’ ಎಂದು ರಾಜ್ಯ ಸರಕಾರಕ್ಕೆ ಆದೇಶಿಸಿದೆ.

ತೀರ್ಪಿನ ವಿವರ
ರಾಜ್ಯ ಮಟ್ಟದಲ್ಲಿ ಉನ್ನತ ಸಮಿತಿ ಹಾಗೂ ಜಿಲ್ಲಾ ಮಟ್ಟದಲ್ಲಿ ಕೆರೆ ಸಂರಕ್ಷಣಾ ಸಮಿತಿ ರಚಿಸಬೇಕು. ಈ ಸಮಿತಿಗಳು ಕೆರೆಗಳ ಸರ್ವೆ ನಡೆಸಿ, ಗಡಿ ಗುರುತಿಸಬೇಕು, ಬೇಲಿ ಅಳವಡಿಸಬೇಕು. ಸಮಿತಿ ರಚನೆ ಮಾಡಿದ ಬಗ್ಗೆ ಸಾರ್ವಜನಿಕರಿಗೆ ವ್ಯಾಪಕ ಪ್ರಚಾರ ನೀಡಬೇಕು. ಕೋರ್ಟ್‌ಗೆ ಅನುಪಾಲನಾ ವರದಿ ಸಲ್ಲಿಸಬೇಕು ಎಂದ ಪೀಠ; ಕೆರೆಗಳ ನಿರ್ವಹಣೆ ಜವಾಬ್ದಾರಿಯನ್ನು ಖಾಸಗಿ ಮತ್ತು ಕಾರ್ಪೊರೇಟ್‌ ಸಂಸ್ಥೆಗಳಿಗೆ ವಹಿಸಿ ಆ ಕುರಿತಂತೆ ಒಪ್ಪಂದ ಮಾಡಿಕೊಂಡಿರುವ ಸರಕಾರದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಕೆರೆಗಳ ಅಭಿವೃದ್ಧಿ ಹಾಗೂ ಪುನರುಜ್ಜೀವನಕ್ಕೆ ಕಾರ್ಪೊರೇಟ್‌ ಸಂಸ್ಥೆಗಳು ಸರಕಾರಕ್ಕೆ ಹಣ ನೀಡುವುದಕ್ಕೆ ಈ ಆದೇಶ ಅಡ್ಡಿ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಹಳೆ ಆದೇಶ
ಹಿಂದೊಮ್ಮೆ ಈ ಕುರಿತು ಆದೇಶ ಬಂದಿತ್ತು. ಆದರೆ ಅನುಷ್ಠಾನವಾಗಿರಲಿಲ್ಲ. 2008ರಲ್ಲೇ ರಾಜ್ಯದ ಎಲ್ಲ ಕೆರೆಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿತ್ತು. ಅದಾದ ಬಳಿಕ ಕೆರೆ ಪ್ರದೇಶದ 30 ಮೀಟರ್‌ ಒಳಗಿರುವ ಕಟ್ಟಡಗಳನ್ನು ತೆರವುಗೊಳಿಸಬೇಕು ಎಂದು 2012ರ ಎ. 11ರಂದು ಆದೇಶಿಸಿತ್ತು. ಈ ದಿಸೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಆದರೆ, ಈ ಸಮಿತಿ ಈ ತನಕ ಕೇವಲ ಐದು ಸಭೆ ನಡೆಸಿದೆ. ಕೆರೆ ಅಭಿವೃದ್ಧಿ ಪ್ರಾಧಿಕಾರ ರದ್ದು ಮಾಡಿದ್ದರೂ ಸಹ ರಾಜ್ಯ ಮಟ್ಟದ ಸಮಿತಿ ಹಾಗೂ ಜಿಲ್ಲಾ ಸಮಿತಿಗಳು ಏಕೆ ಸಭೆ ಸೇರಿ ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು, ಪುನರುಜ್ಜೀವನಕ್ಕೆ ಯೋಜನೆಗಳನ್ನು ರೂಪಿಸಿಲ್ಲ ಎನ್ನುವುದು ಒಗಟಾಗಿದೆ.

ಒತ್ತುವರಿ
ಬಯಲು ಪ್ರದೇಶಗಳಲ್ಲಿ ಕೆರೆಗಳ ಸಂಪ್ರದಾಯ ಹಳೆಯದು. ಪಶ್ಚಿಮಘಟ್ಟದ ತಪ್ಪಲಿನಲ್ಲಿ ಕೃಷಿಗೆ ನೀರು, ಮನೆಗೆ ನೀರು, ದನಕರುಗಳು, ಪ್ರಾಣಿಗಳು, ಪಕ್ಷಿಗಳಿಗೆ ಕುಡಿಯಲು ಮತ್ತು ಮೇವಿಗೆ ವರ್ಷಪೂರ್ತಿ ನೀರು ಒದಗಿಸಲು ಈ ಕೆರೆಗಳು ಜಲಾಶ್ರಯ ತಾಣಗಳಾಗಿದ್ದವು. ಜತೆಗೆ ಜನವಸತಿಗೆ, ಜಮೀನು ಹಾಗೂ ಗೋಮಾಳಕ್ಕೆ ಅವಶ್ಯವಾಗಿದ್ದವು. ತಾಲೂಕಿನ ಶೇ. 45 ಕೆರೆಗಳೀಗ ಒತ್ತುವರಿಗೆ ಒಳಗಾಗಿವೆ. ಅಭಿವೃದ್ಧಿ ಚಟುವಟಿಕೆಗಳಿಗಾಗಿ ಕೆಲವೆಡೆ ಕೆರೆಗಳನ್ನು ಭೂ ಪರಿವರ್ತನೆಗೊಳಿಸಲಾಗಿದೆ. ಇನ್ನು ಹಲವು ಕೆರೆಗಳು ಅಭಿವೃದ್ಧಿ ಚಟುವಟಿಕೆಗಳಿಗಾಗಿ ಮಾಯವೇ ಆಗಿವೆ!.

ರಕ್ಷಣೆ ಹೊಣೆ
ಕೆರೆಗಳ ರಕ್ಷಣೆಯ ಜವಾಬ್ದಾರಿಯನ್ನು ಸ್ಥಳೀಯಾಡಳಿತ ಸಂಸ್ಥೆಗಳಿಗೆ ವಹಿಸಲಾಗಿದೆ. ಇಲ್ಲಿನ ಪುರಸಭೆ ವ್ಯಾಪ್ತಿಯಲ್ಲಿ 25 ಕೆರೆಗಳಿದ್ದು ಅವುಗಳ ಸರ್ವೆ ನಡೆದ ಬಳಿಕ ಅವುಗಳ ಒತ್ತುವರಿ ತೆರವಿಗೆ ಕ್ರಮ ನಡೆಯಲಿದೆ. ಅದಾದ ಬಳಿಕ ಅವುಗಳಿಗೆ ಅಗತ್ಯವಿದ್ದಲ್ಲಿ ತಡೆಗೋಡೆ ರಚನೆ, ಹೂಳೆತ್ತುವಿಕೆ, ಇನ್ನು ಮುಂದೆ ಒತ್ತುವರಿಯಾಗದಂತೆ ರಕ್ಷಣೆಯ ಜವಾಬ್ದಾರಿ ಸ್ಥಳೀಯಾಡಳಿತದ ಪಾಲಿಗೆ ಲಭಿಸಿದೆ.

ಇತಿಹಾಸ ಸೇರಿದ ಕೆರೆಗಳು
ಕೆರೆಗಳು ಪ್ರಕೃತಿಯ ರಮ್ಯ ವಾತಾವರಣಕ್ಕೆ , ಹಸಿರು ಸಿರಿಗೆ, ಜೈವಿಕ ತಾಣಕ್ಕೆ, ಜೀವವೈವಿಧ್ಯಕ್ಕೆ ದೊಡ್ಡ ಕೊಡುಗೆಗಳಾಗಿವೆ. ಇದರಿಂದಲೇ ಸುತ್ತಲಿನ ಪರಿಸರ ಅದೆಷ್ಟೋ ಕಡೆ ಹಸಿರಾಗಿದೆ. ಹಿಂದೆ ನಾಡು ಬರಗಾಲದಿಂದ ತತ್ತರಿಸಿದ ಪರಿಣಾಮವೇ ಅಲ್ಲಲ್ಲಿ ಜಲಸೆಲೆ ಕೆರೆಗಳ ನಿರ್ಮಾಣ. ಹಳ್ಳಿ ಹಳ್ಳಿಗಳಲ್ಲಿ ಅಂದಿದ್ದ ಕೆರೆಗಳಲ್ಲಿ ಇಂದು ಬಹಳಷ್ಟು ಕೆರೆಗಳು ಕಣ್ಮರೆಯಾಗಿ ಕಾಲಗರ್ಭದಲ್ಲಿ ಹೂತು ಹೋಗಿದ್ದರೆ, ಕೆಲವು ಕೆರೆಗಳ ಹೆಸರು ಆಯಾಯ ಜಾಗಕ್ಕೆ ಇಂದಿಗೂ ಇರುವುದನ್ನು ಉದಾಹರಣೆಯಾಗಿ ಕಾಣಬಹುದು.

ಸಮಿತಿ ರಚಿಸಲಾಗಿದೆ
ಕುಂದಾಪುರ ತಾಲೂಕಿನಲ್ಲಿ 740 ಕೆರೆಗಳಿದ್ದು ಕೆರೆಗಳ ಸರ್ವೆಗೆ ಸಂಬಂಧಿಸಿದಂತೆ ಸಮಿತಿ ರಚಿಸಲಾಗಿದೆ. ಕೆರೆಗಳ ಅಂಕಿಅಂಶಗಳ ಮಾಹಿತಿ ಕಂದಾಯ ಇಲಾಖೆ ಬಳಿ ಇದ್ದು ಸರ್ವೆ ಇತ್ಯಾದಿಗಳನ್ನು ಸಣ್ಣ ನೀರಾವರಿ ಇಲಾಖೆ ನಡೆಸುತ್ತದೆ. ರಕ್ಷಣೆ ಹಾಗೂ ನಿರ್ವಹಣೆಯ ಜವಾಬ್ದಾರಿ ಸ್ಥಳೀಯಾಡಳಿತಕ್ಕೆ ಸೇರುತ್ತದೆ.
-ತಿಪ್ಪೇಸ್ವಾಮಿ
ತಹಶೀಲ್ದಾರ್‌, ಕುಂದಾಪುರ

ಸ್ಥಳೀಯಾಡಳಿತಕ್ಕೆ ಮಾಹಿತಿ
ಪುರಸಭೆ ವ್ಯಾಪ್ತಿಯಲ್ಲಿ 25 ಕೆರೆಗಳಿದ್ದು ಅವುಗಳ ಸರ್ವೆ ನಡೆದ ಬಳಿಕ ನಿರ್ವಹಣೆ ಕಾರ್ಯ ನಡೆಯಲಿದೆ. ಈ ಬಗ್ಗೆ ಕಂದಾಯ ಇಲಾಖೆಯಿಂದ ಮಾಹಿತಿ ಬಂದಿದೆ.
-ಗೋಪಾಲಕೃಷ್ಣ ಶೆಟ್ಟಿ
ಮುಖ್ಯಾಧಿಕಾರಿ, ಪುರಸಭೆ, ಕುಂದಾಪುರ

-ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.