ಕುಂದಾಪುರ: ರಂಗೇರುತ್ತಿದೆ ಪುರಸಭೆ ಚುನಾವಣಾ ಕಣ


Team Udayavani, Aug 20, 2018, 6:00 AM IST

kundapur-town-municipal-council-8585.jpg

ಕುಂದಾಪುರ: ಪುರಸಭೆ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ಉಮೇದುವಾರಿಕೆ ಸಲ್ಲಿಕೆ ಶನಿವಾರಕ್ಕೆ ಅಂತ್ಯವಾಗಿದೆ. ಕುಂದಾಪುರ ಪುರಸಭೆಯ 23 ವಾರ್ಡ್‌ಗಳಿಗೆ ಒಟ್ಟು 81 ಅಭ್ಯರ್ಥಿಗಳು 113 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. 

ಕುಂದಾಪುರ ಪುರಸಭೆಯ 23 ವಾರ್ಡುಗಳಿಗೆ ಕಾಂಗ್ರೆಸ್‌ 30, ಬಿಜೆಪಿ 51, ಜೆಡಿಎಸ್‌ 5, ಸಿಪಿಐಎಂ 7, ಬಿಎಸ್‌ಪಿ 4, ಪಕ್ಷೇತರರಿಂದ 16 ನಾಮಪತ್ರಗಳು ಸಲ್ಲಿಕೆಯಾಗಿವೆ. ಈ ಪೈಕಿ ಬಿಜೆಪಿ ಹಾಗೂ ಕಾಂಗ್ರೆಸ್‌ ಎಲ್ಲ 23 ವಾರ್ಡ್‌ಗಳಲ್ಲಿ ಅಧಿಕೃತ ಅಭ್ಯರ್ಥಿಗಳಲ್ಲದೆ ಡಮ್ಮಿ ಅಭ್ಯರ್ಥಿಗಳನ್ನು ನಿಲ್ಲಿಸಿದ್ದಾರೆ. ಅವರು ನಾಮಪತ್ರ ಹಿಂತೆಗೆಯುವ ಸಾಧ್ಯತೆಯಿದೆ. ಉಳಿದಂತೆ ಬಿಎಸ್‌ಪಿಯ ಇಬ್ಬರು ಅಭ್ಯರ್ಥಿಗಳು ತಲಾ ಎರಡರಂತೆ 4 ನಾಮಪತ್ರ ಸಲ್ಲಿಸಿದ್ದಾರೆ. 

“ಸೆಂಟ್ರಲ್‌’ನಲ್ಲಿ ಬಂಡಾಯ?
ಸೆಂಟ್ರಲ್‌ ವಾರ್ಡ್‌ ಕುತೂಹಲದ ಕಣವಾಗಿದ್ದು, ಬಿಜೆಪಿಯಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ಪುರಸಭಾಧ್ಯಕ್ಷ ಮೋಹನ್‌ದಾಸ್‌ ಶೆಣೈ, ಹಾಲಿ ಉಪಾಧ್ಯಕ್ಷ ರಾಜೇಶ್‌ ಕಾವೇರಿ ಇಬ್ಬರೂ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ಮೋಹನ್‌ದಾಸ್‌ ಶೆಣೈ ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿದ್ದು, ರಾಜೇಶ್‌ ಕಾವೇರಿ ಯವರು ಕೂಡ ಬಿಜೆಪಿ ಪರ ಹಾಗೂ ಮತ್ತೂಂದು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. 

ಆ.20ರಂದು ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂಪಡೆಯಲು ಆ.23 ಕೊನೆ ದಿನ, ಆ. 31ರಂದು ಮತದಾನ, ಸೆ. 3ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಕಣದಲ್ಲಿ  ಘಟಾನುಘಟಿಗಳು
ಹಾಲಿ ಅಧ್ಯಕ್ಷ – ಉಪಾಧ್ಯಕ್ಷ ಸಹಿತ ಮಾಜಿ ಅಧ್ಯಕ್ಷರ ಸಹಿತ ಘಟಾನುಘಟಿಗಳು ಚುನಾವಣಾ ಕಣದಲ್ಲಿದ್ದಾರೆ. ಹಾಲಿ ಅಧ್ಯಕ್ಷೆ ವಸಂತಿ ಮೋಹನ ಸಾರಂಗ ಅವರು ಬಿಜೆಪಿ ಅಭ್ಯರ್ಥಿಯಾಗಿ ಖಾರ್ವಿಕೇರಿ ವಾರ್ಡ್‌ನಿಂದ, ಉಪಾಧ್ಯಕ್ಷ ರಾಜೇಶ್‌ ಕಾವೇರಿ ಸೆಂಟ್ರಲ್‌ ವಾರ್ಡ್‌ನಿಂದ ಬಿಜೆಪಿ ಬಂಡಾಯ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿದ್ದಾರೆ. ಸೆಂಟ್ರಲ್‌ ವಾರ್ಡ್‌ನಿಂದ ಮಾಜಿ ಅಧ್ಯಕ್ಷ ಮೋಹನ್‌ದಾಸ್‌ ಶೆಣೈ ಬಿಜೆಪಿಯಿಂದ, ಇತ್ತೀಚೆಗಷ್ಟೇ ಕಮ್ಯೂನಿಸ್ಟ್‌ ತೊರೆದು ಬಿಜೆಪಿ ಸೇರಿದ ನಿಕಟಪೂರ್ವಾಧ್ಯಕ್ಷೆ ಗುಣರತ್ನಾ ಕೋಡಿ ಉತ್ತರ ವಾರ್ಡ್‌, ಮಾಜಿ ಉಪಾಧ್ಯಕ್ಷ ನಾಗರಾಜ್‌ ಕಾಮಧೇನು ಮೀನು ಮಾರ್ಕೆಟ್‌ ವಾರ್ಡ್‌ನಿಂದ ಸ್ಪರ್ಧಿಗಿಳಿದಿದ್ದಾರೆ. 

ಕಾಂಗ್ರೆಸ್‌ನಿಂದ ನಿಕಟ ಪೂರ್ವಾಧ್ಯಕ್ಷೆ ದೇವಕಿ ಸಣ್ಣಯ್ಯ ಸರಕಾರಿ ಆಸ್ಪತ್ರೆ ವಾರ್ಡ್‌ನಿಂದ, ಮಾಜಿ ಉಪಾಧ್ಯಕ್ಷ ಜಾಕೂಬ್‌ಡಿಸೋಜಾ ಚಿಕ್ಕನ್‌ಸಾಲು ಎಡಬದಿ ವಾರ್ಡ್‌ ಸ್ಪರ್ಧಿಗಿಳಿದಿದ್ದಾರೆ. ನಿಕಟಪೂರ್ವ ಸದಸ್ಯರು ಕಣದಲ್ಲಿದ್ದು, ಕಾಂಗ್ರೆಸ್‌ನಿಂದ ಚಂದ್ರಶೇಖರ ಖಾರ್ವಿ, ಶ್ರೀಧರ ಶೇರೆಗಾರ್‌, ರವಿಕಲಾ ಗಣೇಶ್‌ ಶೇರೆಗಾರ್‌, ಕೆ.ಜಿ.ನಿತ್ಯಾನಂದ, ಬಿಜೆಪಿಯಿಂದ ಪುಷ್ಪಾ ಶೇಟ್‌, ಜ್ಯೋತಿ ಗಣೇಶ್‌ ಮೊಗವೀರ ಮತ್ತೂಮ್ಮೆ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. 

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.