ವಿದ್ಯಾರ್ಥಿ ಪರಿಷತ್ ಕುಂದಾಪುರ ಘಟಕ: ತಾ| ಅಭ್ಯಾಸ ವರ್ಗ ಉದ್ಘಾಟನೆ
Team Udayavani, Aug 7, 2017, 7:35 AM IST
ಕುಂದಾಪುರ: ಅಖೀಲ ಭಾರತ ವಿದ್ಯಾರ್ಥಿ ಪರಿಷತ್ ಕುಂದಾಪುರ ಘಟಕದ ಆಶ್ರಯದಲ್ಲಿ ತಾಲೂಕು ಅಭ್ಯಾಸ ವರ್ಗ ಕಾರ್ಯಕ್ರಮ ಕುಂದಾಪುರದ ಶ್ರೀ ಕುಂದೇಶ್ವರ ದೇವಸ್ಥಾನದ ಕಲಾ ಭವನದಲ್ಲಿ ರವಿವಾರ ಜರಗಿತು.
ಕುಂದಾಪುರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ನಾಸಿರ್ ಹುಸೇನ್ ಅವರು ತಾಲೂಕು ಅಭ್ಯಾಸ ವರ್ಗವನ್ನು ಉದ್ಘಾಟಿಸಿ ಮಾತನಾಡಿ, ಸಂಘಟನೆಯಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಎಲ್ಲ ಧರ್ಮ, ಜಾತಿಯನ್ನು ಪ್ರೀತಿಸುವ ಮನೋಭಾವವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ಪರಸ್ಪರ ವಿಶ್ವಾಸದ ಮೂಲಕ ದೇಶದ ಉನ್ನತಿಗಾಗಿ ಹೋರಾಟ ನಡೆಸಿದ್ದಲ್ಲಿ ಜೀವನದಲ್ಲಿ ಗೆಲುವು ಕಾಣಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಉಪನ್ಯಾಸಕ ರಾಜ್ಶಂಕರ್ ಅವರು ಸಂಘಟನೆಯ ಉದ್ದೇಶ ಹಾಗೂ ಸಂಘಟನೆಯಲ್ಲಿ ತೋರಿಸಬೇಕಾದ ಶಿಸ್ತು ಈ ಕುರಿತು ಸವಿಸ್ತಾರವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಬಿ.ಬಿ. ಹೆಗ್ಡೆ ಕಾಲೇಜು ಎಬಿವಿಪಿ ಪ್ರಮುಖ ಪವನ್, ಭಂಡಾರ್ಕಾರ್ಸ್ ಕಾಲೇಜಿನ ಎಬಿವಿಪಿ ಪ್ರಮುಖ ವೈಭವ್ ಭಟ್, ರಾಘವೇಂದ್ರ, ಬಾರಕೂರು ಕಾಲೇಜಿನ ಎಬಿವಿಪಿ ಪ್ರಮುಖ ಸತೀಶ್ ಉಪಸ್ಥಿತರಿದ್ದರು.ಸಂದೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪ್ರಖ್ಯಾತ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ