ಕುಂದಾಪುರ: ಬಾವಿಗೆ ಬಿದ್ದು ತಾಯಿ, ಮಗಳು ಸಾವು
Team Udayavani, Jan 10, 2023, 11:34 PM IST
ಕುಂದಾಪುರ: ಅಸೋಡು ಗ್ರಾಮದಲ್ಲಿ ಮನೆಯ ಎದುರಿನ ಬಾವಿಗೆ ವೃದ್ಧೆಯೊಬ್ಬರು ಬಿದ್ದಿದ್ದು ಅವರನ್ನು ರಕ್ಷಿಸಲು ಹೋದ ಮಗಳು ಕೂಡ ಬಾವಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಗುಲಾಬಿ ಶೆಡ್ತಿ (85) ಅವರು ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದರು. ಅವರನ್ನು ರಕ್ಷಿಸಲು ಅವರ ಮಗಳು ದೇವಕಿ ಶೆಡ್ತಿ (58) ಪ್ರಯತ್ನಿಸಿದಾಗ ಅವರು ಕೂಡ ಆಯತಪ್ಪಿ ನೀರಿಗೆ ಬಿದ್ದು ತಾಯಿ ಮಗಳು ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಬಾವಿಯ ಬದಿಯಲ್ಲಿ ಕಾಲು ಜಾರಿದ ಗುರುತು ಕಂಡು ಬಂದಿದೆ. ದೇವಕಿ ಶೆಡ್ತಿ ಅವರು ಪತಿ ಕರುಣಾಕರ ಶೆಟ್ಟಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮೆಟ್ರೋ ಕಾಮಗಾರಿ ದುರಂತ: ಅಧಿಕಾರಿ, ಗುತ್ತಿಗೆದಾರರ ಮೇಲೆ ಕ್ರಮ; ಸಿಎಂ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…