ವಿದ್ಯುತ್‌ ತಂತಿ ಅಳವಡಿಕೆ ಸಂದರ್ಭ ನಿರ್ಲಕ್ಷ್ಯ: ಕಾರ್ಮಿಕ ಸಾವು; ಶಿಕ್ಷೆ ಪ್ರಕಟ


Team Udayavani, Dec 2, 2022, 11:30 PM IST

ವಿದ್ಯುತ್‌ ತಂತಿ ಅಳವಡಿಕೆ ಸಂದರ್ಭ ನಿರ್ಲಕ್ಷ್ಯ: ಕಾರ್ಮಿಕ ಸಾವು; ಶಿಕ್ಷೆ ಪ್ರಕಟ

ಕುಂದಾಪುರ: ವಿದ್ಯುತ್‌ ತಂತಿ ಅಳವಡಿಕೆ ಸಂದರ್ಭ ನಿರ್ಲಕ್ಷ್ಯ ಮಾಡಿ ಕಾರ್ಮಿಕರೊಬ್ಬರ ಸಾವಿಗೆ ಕಾರಣರಾದುದಕ್ಕೆ ಇಲ್ಲಿನ ನ್ಯಾಯಾಲಯ ಗುತ್ತಿಗೆದಾರರಿಗೆ ಶಿಕ್ಷೆ ವಿಧಿಸಿದೆ.

2010ರಲ್ಲಿ ಉಪ್ಪಿನಕುದ್ರು ಗ್ರಾಮದ ಕೆಳಹಿತ್ಲು ಎಂಬಲ್ಲಿ ತಲ್ಲೂರು ಮೆಸ್ಕಾಂಗೆ ಸಂಬಂಧಿಸಿದ ಹಳೆ ವಿದ್ಯುತ್‌ ತಂತಿ ಬದಲು ಹೊಸ ವಿದ್ಯುತ್‌ ತಂತಿ ಅಳವಡಿಕೆ ಕಾರ್ಯ ನಡೆಯುತ್ತಿತ್ತು.

ಸಿದ್ದಾಪುರದ ಕೊಳ್ಕೆಬೈಲು ನಿವಾಸಿ ನರಸಿಂಹ ಕುಲಾಲ್‌ ಅವರು ಗುತ್ತಿಗೆ ಪಡೆದಿದ್ದು ತಲ್ಲೂರಿನ ಮಾರ್ತಾಂಡಪ್ಪ ಹಾಗೂ ತಲ್ಲೂರಿನ ಜಾಫ‌ರ್‌ ಹುಸೇನ್‌ ಅವರು ವಿದ್ಯುತ್‌ ತಂತಿಗೆ ಭೂಸಂಪರ್ಕ ನೀಡದೆ ಸಂತೋಷ್‌ ಹಾಗೂ ಇತರ ನಾಲ್ವರನ್ನು ಕಂಬಕ್ಕೆ ಹತ್ತಿಸಿದ್ದರು.

ಕಾಮಗಾರಿ ವೇಳೆ ಜನರಿದ್ದುದನ್ನು ಗಮನಿಸದೇ ಜಾಫ‌ರ್‌ ಅವರು ವಿದ್ಯುತ್‌ ಸಂಪರ್ಕ ನೀಡಿದಾಗ ಕಂಬದಲ್ಲಿದ್ದ ನಾಲ್ವರು ಕೆಳಗೆ ಬಿದ್ದಿದ್ದರು. ಈ ಪೈಕಿ ಸಂತೋಷ್‌ ಮೃತಪಟ್ಟಿದ್ದರು. ಇತರರಿಗೆ ಗಾಯವಾಗಿತ್ತು.

ಈ ಬಗ್ಗೆ ಗುತ್ತಿಗೆದಾರ ನರಸಿಂಹ ಕುಲಾಲ್‌, ಮಾರ್ತಾಂಡಪ್ಪ, ಜಾಫ‌ರ್‌ ಹುಸೇನ್‌ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ವಿಚಾರಣೆ ನಡೆಸಿದ ನ್ಯಾಯಾಲಯ ಗುತ್ತಿಗೆದಾರ ನರಸಿಂಹ ಕುಲಾಲ್‌ಗೆ ಸೆಕ್ಷನ್‌ 337ರಲ್ಲಿ 6 ತಿಂಗಳ ಸಾದಾಶಿಕ್ಷೆ, 500 ರೂ. ದಂಡ, ದಂಡ ತೆರಲು ತಪ್ಪಿದರೆ 15 ದಿನಗಳ ಹೆಚ್ಚುವರಿ ಶಿಕ್ಷೆ, 304(ಎ) ಸೆಕ್ಷನ್‌ನ ಅಪರಾಧಕ್ಕಾಗಿ 1 ವರ್ಷ ಜೈಲು, 5 ಸಾವಿರ ರೂ. ದಂಡ, ದಂಡ ಪಾವತಿಗೆ ತಪ್ಪಿದರೆ 2 ತಿಂಗಳ ಜೈಲು, ಸೆಕ್ಷನ್‌ 357ರ ಅಡಿ ದಂಡದ ಹಣದಲ್ಲಿ 3 ಸಾವಿರ ರೂ. ಮೃತರ ಕುಟುಂಬಿಕರಿಗೆ, ಸೆಕ್ಷನ್‌ 357ರಲ್ಲಿ ಹೆಚ್ಚುವರಿ ಪರಿಹಾರವಾಗಿ 50 ಸಾವಿರ ರೂ.ಗಳನ್ನು ಪಾವತಿಸುವಂತೆ ಆದೇಶಿಸಲಾಗಿದೆ.

ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶೆ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ರೋಹಿಣಿ ಡಿ. ತೀರ್ಪು ನೀಡಿದ್ದು, ಸರಕಾರದ ಪರ ಸಹಾಯಕ ಸರಕಾರಿ ಅಭಿಯೋಜಕಿ ವರ್ಷಶ್ರೀ ವಾದಿಸಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.