ಮತ್ತೆ ಕುಂಟುತ್ತಾ ಸಾಗಿದ ಫ್ಲೈಓವರ್‌ ಕಾಮಗಾರಿ : ಮತ್ತೂಮ್ಮೆ ಹೊಸ ಗಡುವು ನಿರೀಕ್ಷೆ!


Team Udayavani, Apr 13, 2021, 2:37 AM IST

ಮತ್ತೆ ಕುಂಟುತ್ತಾ ಸಾಗಿದ ಫ್ಲೈಓವರ್‌ ಕಾಮಗಾರಿ : ಮತ್ತೂಮ್ಮೆ ಹೊಸ ಗಡುವು ನಿರೀಕ್ಷೆ!

ಕುಂದಾಪುರ: ದಶಕದಿಂದ ಕುಂಟುತ್ತಾ ಸಾಗಿದ ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್‌ ಕಾಮಗಾರಿ ಈ ಬಾರಿ ಕೊಟ್ಟ ದಿನಾಂಕದಂದೂ ಮುಗಿಯುವುದು ಅನುಮಾನ ಎನಿಸಿದೆ. 10 ದಿನಗಳ ಅವಧಿಯಲ್ಲಿ ಮುಗಿಸಲಾಗುವುದು ಎಂಬ ಬೇಡಿಕೆ ಹಿನ್ನೆಲೆಯಲ್ಲಿ ಎ. 1ರಂದು ನಡೆಯಬೇಕಿದ್ದ ಭಜನೆ, ಪ್ರತಿಭಟನೆಯನ್ನು ಕೈ ಬಿಡಲಾಗಿತ್ತು. ಆಗ ನೀಡಿದ್ದ ಕಾರಣ ಜಲ್ಲಿ ಕೊರತೆ. ಈಗ 10 ದಿನಗಳು ಕಳೆದಿದ್ದು, ಪುರಸಭೆ ಸಾಮಾನ್ಯ ಸಭೆಯಲ್ಲಿ ಎ. 15-20ರ ವೇಳೆಗೆ ಮುಕ್ತಾಯವಾಗಲಿದೆ ಎಂದು ಹೊಸ ದಿನಾಂಕ ನೀಡಲಾಗಿತ್ತು. ಮುಂದಿನ ಹೊಸ ದಿನಾಂಕಕ್ಕಾಗಿ ಕಾಯಲಾಗುತ್ತಿದೆ!

ಸಾಮಗ್ರಿ ಕೊರತೆ
ಫ್ಲೈಓವರ್‌ ಕಾಮಗಾರಿ ಪರಿಪೂರ್ಣವಾಗದೇ ಇದ್ದರೂ ಅಂತಿಮ ಹಂತದಲ್ಲಿದೆ. ವಿನಾಯಕ ಥಿಯೇಟರ್‌ ಬಳಿ ಡಾಮರು ಕಾಮ ಗಾರಿ ಆಗಿರಲಿಲ್ಲ. ಈಗ ಒಂದು ಬದಿಗೆ ಡಾಮರು ಹಾಕಲಾಗಿದೆ. ಬೀದಿ ದೀಪ ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಒಂದು ಬದಿಯಷ್ಟೇ ಆಗಿದ್ದು ಇನ್ನೊಂದು ಬದಿ ಆರಂಭವೇ ಆಗಿಲ್ಲ. ಒಂದು ಮಾಹಿತಿ ಪ್ರಕಾರ ಸುಮಾರು 50 ಲಕ್ಷ ರೂ.ಗಳ ಸಾಮಗ್ರಿ ಬೇಕಿದ್ದು ಅದರ ಕೊರತೆ ಉಂಟಾಗಿದೆ. ಸಾಮಗ್ರಿ ಪೂರೈಸುವವರು ಸ್ಥಗಿತಗೊಳಿಸಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಕಾಮಗಾರಿ ವಿಳಂಬವಾಗಿದೆ ಎನ್ನಲಾಗುತ್ತಿದೆ. ಇದಕ್ಕೆ ಗುತ್ತಿಗೆದಾರ ಸಂಸ್ಥೆಯವರು ಸಮರ್ಪಕವಾಗಿ ಉತ್ತರಿಸುತ್ತಿಲ್ಲ.

ಸರ್ವೀಸ್‌ ರಸ್ತೆ ಅಗೆತ
ಫ್ಲೈಓವರ್‌ ಕಾಮಗಾರಿ ಪೂರ್ಣವಾಗದ ಹಿನ್ನೆಲೆಯಲ್ಲಿ ಸರ್ವೀಸ್‌ ರಸ್ತೆಯೇ ಹೆದ್ದಾರಿಯಾಗಿ ಬಳಸ ಲ್ಪಡುತ್ತಿದೆ. ಈ ಇಕ್ಕಟ್ಟಾದ ಸರ್ವಿಸ್‌ ರಸ್ತೆಯಲ್ಲಿ ಈಗ ಚರಂಡಿಗಾಗಿ ಅಗೆದು ಮತ್ತೂ ಕಿರಿ ದಾಗಿಸಲಾಗಿದೆ. ಅಷ್ಟಲ್ಲದೇ ಅರೆಬರೆ ಕಾಮಗಾರಿ ಮಾಡಿ
ಅಗೆದು ಬಿಟ್ಟ ಚರಂಡಿಯನ್ನು ತಿಂಗಳಾದರೂ ಮುಟ್ಟುತ್ತಿಲ್ಲ. ಶೆಲೋಮ್‌ ಹೊಟೇಲ್‌ನಿಂದ ಶ್ರೀದೇವಿ ನರ್ಸಿಂಗ್‌ ಹೋ ರಸ್ತೆಯ ತನಕ ಚರಂಡಿಗಾಗಿ 1 ತಿಂಗಳ ಹಿಂದೆ ಹೊಂಡ ತೆಗೆಯಲಾಗಿದೆ. ಇನ್ನೂ ಇದರಲ್ಲಿ ಕಾಂಕ್ರೀಟ್‌ ಹಾಕಿ ಚರಂಡಿ ಗೋಡೆ ಮಾಡದ ಕಾರಣ ರಾತ್ರಿ ವೇಳೆ ಜನರು ಹಾಗೂ ದ್ವಿಚಕ್ರ ವಾಹನಗಳಿಗೆ ಅಪಾಯ ಸಂಭವಿಸುತ್ತಿದೆ. ದಿವ್ಯ ದರ್ಶಿನಿ ಹೊಟೇಲ್‌ ಬಳಿ ಆಳ ಹೊಂಡ ಮಾಡಲಾಗಿದೆ.

ಕೇಬಲ್‌ ಲೈನ್‌ ಇದೆ, ಪುರಸಭೆಯ ನೀರಿನ ಪೈಪ್‌ಲೈನ್‌ ಇದೆ ಎಂಬ ನೆಪದಲ್ಲಿ ಕಾಮಗಾರಿ ಬಾಕಿ ಇಡ ಲಾಗಿದೆ. ಮತ್ತೂಂದಷ್ಟು ಕಡೆ ಕಾಮಗಾರಿ ಮಾಡಲಾಗಿದೆ. ನವಯುಗ ಸಂಸ್ಥೆಯವರು ಪುರಸಭೆಯಲ್ಲಿ ನಡೆದ ಸಭೆಯಲ್ಲಿ ಹೇಳಿಕೆ ನೀಡಿದ ಪ್ರಕಾರ, ಫ್ಲೈಓವರ್‌ ಕಾಮಗಾರಿ ಪೂರ್ಣವಾದ ಬಳಿವೇ ಸರ್ವೀಸ್‌ ರಸ್ತೆಯ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಎಲ್ಲ ಬೇಡಿಕೆಗಳನ್ನೂ ಈಡೇರಿಸಲಾಗುತ್ತದೆ ಎಂದು. ಆದರೆ ಇತ್ತ ಫ್ಲೈಓವರ್‌ ಕೆಲಸವೂ ಆಗಿಲ್ಲ, ಸರ್ವೀಸ್‌ ರಸ್ತೆ ಕೆಲಸಗಳೂ ಆಗಿಲ್ಲ ಎಂಬಂತಾಗಿದೆ. ಫ್ಲೈ ಓವರ್‌ ಕೆಲಸ ಮುಗಿಯುವಾಗ ಮಳೆ ಬರಲಾರಂಭಿಸಿದರೆ ಇತರ ಕೆಲಸಗಳಿಗೆ ಮಳೆಗಾಲ ಮುಗಿಯಲು ಕಾಯಬೇಕು. ಆಮೇಲೆ ಆದರೆ ಆಯಿತು, ಇಲ್ಲದಿದ್ದರೆ ಹೋಯಿತು ಎಂಬಂತಾಗಲಿದೆ.

ಆಮೆ ವೇಗ

ಮಾರ್ಚ್‌ ತಿಂಗಳಲ್ಲಿ ವೇಗವಾಗಿ ನಡೆಯುತ್ತಿದ್ದ ಕಾಮಗಾರಿ ಈಗ ಆಮೆ ಗತಿ ಯಲ್ಲಿ ನಡೆಯುತ್ತಿದೆ. ಹೀಗೇ ಮುಂದುವರಿದರೆ ಮಳೆಗಾಲದಲ್ಲಾದರೂ ಪೂರ್ಣವಾಗುವುದು ಅನುಮಾನ ಎಂಬಂತಾಗಿದೆ. ಈಗಲೇ ಜನ ಮಾರ್ಚ್‌ ಕೊನೆಗೆ ಮುಕ್ತಾಯ ಎಂಬ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳದೇ ಈ ವರ್ಷವೂ ಹಿಂದಿನ ವರ್ಷಗಳಂತೆ ಎಪ್ರಿಲ್‌ ಫ‌ೂಲ್‌ ಮಾಡಿದೆ ಎಂದು ಕ್ರೀಡಾಸ್ಫೂರ್ತಿಯಿಂದ ಸ್ವೀಕರಿಸಿದ್ದರು. ಅದನ್ನು ಗುತ್ತಿಗೆದಾರ ಸಂಸ್ಥೆಯೂ ನಿಜ ಮಾಡಿದೆ. ಈಗ ಯುಗಾದಿಗೂ ಸಿಹಿ ಬದಲು ಕಹಿಯನ್ನೇ ನೀಡುತ್ತಿದೆ.

ಅರೆಬರೆ ಕಾಮಗಾರಿ
ಚರಂಡಿಗಾಗಿ ರಸ್ತೆ ಅಗೆದಲ್ಲಿ ಮನೆಗಳಿಗೆ ಹೋಗಲು ಅನನುಕೂಲವಾಗುತ್ತಿದೆ. ವೃದ್ಧರು, ಮಕ್ಕಳು ಇರುವ ಮನೆಯ ಆವರಣಗೋಡೆ ಮುಂದೆ ಐದಾರು ಅಡಿ ಆಳದ ಗುಂಡಿ ತೆಗೆದಿಟ್ಟು ಸೂಕ್ತ ಓಡಾಟಕ್ಕೆ ಕಷ್ಟವಾಗುವಂತೆ ಮಾಡಿದ್ದಾರೆ. ಮಾ.16ರಂದು ಗುಂಡಿ ತೆಗೆದಿದ್ದು ಇನ್ನೂ ಅದರ ಕಾಮಗಾರಿ ಕುರಿತು ಗಮನ ಹರಿಸಿಲ್ಲ. ಕಾಮಗಾರಿ ಮಾಡಿದಲ್ಲೂ ಅರೆಬರೆಯಾಗಿದೆ. ಒಟ್ಟಿನಲ್ಲಿ ಕಾಮಗಾರಿ ಅವ್ಯವಸ್ಥೆಯಿಂದ ಕೂಡಿದೆ.
-ಧೀರಜ್‌ ರಾವ್‌, ಕುಂದಾಪುರ, ಸ್ಥಳೀಯರು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.