ಕುಂದಾಪುರ: ಕಾರು ಢಿಕ್ಕಿ ಹೊಡೆದು ಸ್ಕೂಟರ್ ನಲ್ಲಿದ್ದ ನಾಲ್ವರಿಗೆ ಗಾಯ
Team Udayavani, Dec 6, 2022, 7:11 PM IST
ಕುಂದಾಪುರ: ಕರ್ಕುಂಜೆ ಗ್ರಾಮದ ನೇರಳಕಟ್ಟೆ ಜಂಕ್ಷನ್ಬಳಿ ಬೈಕ್ನ್ನು ಓವರ್ಟೇಕ್ ಮಾಡುವ ಭರಾಟೆಯಲ್ಲಿ ಕಾರೊಂದು ವಿಕಲಚೇತನ ಸವಾರನ ವಾಹನಕ್ಕೆ ಢಿಕ್ಕಿಯಾಗಿದೆ.
ಪ್ರಭಾಕರ್ ಆಚಾರ್ (42) ಚೂರಿಕೋಡ್ಲಿ ಅವರು ಮೂರು ಚಕ್ರದ ಸ್ಕೂಟರ್ನಲ್ಲಿ ಪತ್ನಿ ಸುಲೋಚನಾ, ಪುತ್ರ ಪ್ರಜ್ವಲ್(14), ಪೂಜಾ (10) ಅವರನ್ನು ಕುಳ್ಳಿರಿಸಿಕೊಂಡು ಆಜ್ರಿ ಕಡೆಯಿಂದ ನೇರಳಕಟ್ಟೆ ಕಡೆಗೆ ಹೋಗುತ್ತಿದ್ದಾಗ ಅಪಘಾತವಾಗಿದೆ.
ಎಲ್ಲರೂ ಗಾಯಗೊಂಡಿದ್ದು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು, ಗಂಭೀರ ಗಾಯಗೊಂಡ ಪ್ರಭಾಕರ್ ಆಚಾರ್, ಪ್ರಜ್ವಲ್ ಹಾಗೂ ಪೂಜಾ ಅವರು ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅಲ್ಲಿಂದ ಮಂಗಳೂರು ವೆನ್ಲಾಕ್ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಗೋವಾ ಕಡಲ ತೀರದಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆ ನಿಲ್ಲಿಸಿ: ಮೈಕಲ್ ಲೋಬೊ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉದ್ದೇಶ ಪೂರ್ವಕವಾಗಿಯೇ ರಾಹುಲ್ ಗಾಂಧಿ ಅವರನ್ನು ಅನರ್ಹ ಮಾಡಲಾಗಿದೆ: ಎಚ್.ವಿಶ್ವನಾಥ್
ಸೋಲಾರ್ ಪ್ಲಾಂಟ್ ಹೆಸರಲ್ಲಿ ವಂಚನೆ: ಸೆರೆ
ರೂಪೇಶ್ ಶೆಟ್ಟಿ ನಿರ್ದೇಶನದ ‘ಸರ್ಕಸ್’ ಚಿತ್ರದ ಹಾಡು ಬಿಡುಗಡೆ; ಜೂ. 23 ರಂದು ಸಿನಿಮಾ ತೆರೆಗೆ
ಕೆಟ್ಟ ಭವಿಷ್ಯ ಹೇಳಿದ್ದಕ್ಕೆ ಹಲ್ಲೆ: ಕೊಲೆ !
ಭಾರತದ ಅಭಿವೃದ್ಧಿಯಲ್ಲಿ ಸಾಮಾಜಿಕ- ಧಾರ್ಮಿಕ ಸಂಸ್ಥೆಗಳ ಪಾತ್ರ ಮಹತ್ವದ್ದು: ನರೇಂದ್ರ ಮೋದಿ