ವಾರದ ಸಂತೆ: ಖರೀದಿಗೆ ಮುಗಿ ಬಿದ್ದ ಜನ
Team Udayavani, Mar 29, 2020, 5:41 AM IST
ಕುಂದಾಪುರ: ಕೋವಿಡ್ 19 ಹಿನ್ನೆಲೆಯಲ್ಲಿ ದೇಶಾದ್ಯಂತ ಕರ್ಫ್ಯೂ ಜಾರಿಯಲ್ಲಿರುವುದರಿಂದ ಶನಿವಾರ ನಡೆಯುತ್ತಿದ್ದ ಕುಂದಾಪುರದ ವಾರದ ಸಂತೆಯನ್ನು ರದ್ದುಪಡಿಸಲಾಗಿದೆ. ಆದರೂ ಶನಿವಾರ ವ್ಯಾಪಾರಿಗಳು 2-3 ವಾಹನಗಳಲ್ಲಿ ಹಣ್ಣು – ತರಕಾರಿಗಳನ್ನು ತುಂಬಿಕೊಂಡು ಬಂದಿದ್ದು, ಇದನ್ನು ತಿಳಿದ ಜನ ಸಂತೆ ಮಾರುಕಟ್ಟೆಯ ಹೊರಗಡೆ ಬೆಳ್ಳಂಬೆಳಗ್ಗೆ ಖರೀದಿಗೆ ಮುಗಿ ಬಿದ್ದ ಪ್ರಸಂಗ ನಡೆಯಿತು. ಸುದ್ದಿ ತಿಳಿದ ಪೊಲೀಸರು ಗುಂಪು – ಗುಂಪಾಗಿ ಖರೀದಿಸುತ್ತಿದ್ದ ಜನರನ್ನು ಚದುರಿಸಿದರು. ಬಳಿಕ ಎಪಿಎಂಸಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಅಧಿಕಾರಿಗಳು ಭೇಟಿ ನೀಡಿ, ಸರಕಾರದ ಆದೇಶದಂತೆ ಗ್ರಾಹಕರಿಗೆ ಖರೀದಿಗೆ ಅವಕಾಶವಿಲ್ಲ, ತರಕಾರಿ, ಹಣ್ಣು ವ್ಯಾಪಾರಸ್ಥರಿಗೆ ಮಾತ್ರ ಖರೀದಿಸಲು ಅವಕಾಶ ನೀಡಲಾಗಿದೆ ಎಂದು ಮನವರಿಕೆ ಮಾಡಿದ್ದಾರೆ. ಇಲ್ಲಿಯೂ ಕೂಡ ಖರೀದಿಗೆ ಸಾಮಾಜಿಕ ಅಂತರಕ್ಕಾಗಿ ಅಲ್ಲಲ್ಲಿ ವೃತ್ತಗಳನ್ನು ಹಾಕಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ