ಕುಂದಾಪುರ: ಕೊಲೆ ಪ್ರಕರಣ; ಆರೋಪಿಗಳಿಬ್ಬರಿಗೆ ಜಾಮೀನು
Team Udayavani, Dec 24, 2022, 12:58 AM IST
ಕುಂದಾಪುರ: ಹಂಗಳೂರು ಗ್ರಾಮದ ನೇರಂಬಳ್ಳಿಯ ವಿನಯ್ ಪೂಜಾರಿ ಅವರನ್ನು ಕಳೆದ ಮಾ. 28ರಂದು ಕತ್ತು ಹಿಸುಕಿ ಕೊಲೆ ಮಾಡಿ, ವಾರಾಹಿ ನದಿಗೆ ಎಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎರಡನೇ ಆರೋಪಿ ಪ್ರವೀಣ್ ಪೂಜಾರಿ ಹಾಗೂ ಮೂರನೇ ಆರೋಪಿ ಸತೀಶ್ ಪೂಜಾರಿಗೆ ಜಾಮೀನು ಮಂಜೂರು ಮಾಡಿ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
ಮಾ. 23ರಂದು ವಿನಯ್ ನಾಪತ್ತೆಯಾಗಿದ್ದ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎ. 4ರಂದು ಅಂಪಾರು ಗ್ರಾಮದ ಹಡಾಳಿ ಬಳಿಯ ವಾರಾಹಿಯಲ್ಲಿ ವಿನಯ್ ಮೃತದೇಹ ಪತ್ತೆಯಾಗಿದ್ದು, ಶಂಕರನಾರಾಯಣ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿತ್ತು. ಕೊಳೆತ ಸ್ಥಿತಿಯಲ್ಲಿ ಸಿಕ್ಕ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂದರೆ 6 ತಿಂಗಳ ಅನಂತರ ಕೊಲೆ ಪ್ರಕರಣವಾಗಿ ದಾಖಲಾಗಿತ್ತು. ಪ್ರಕರಣ ಸಂಬಂಧ ಆರೋಪಿಗಳಾದ ಅಕ್ಷಯ್, ಪ್ರವೀಣ್ ಪೂಜಾರಿ ಹಾಗೂ ಸತೀಶ್ ಪೂಜಾರಿಯನ್ನು ಬಂಧಿಸಲಾಗಿತ್ತು. ಆರೋಪಿಗಳ ಪರ ಕುಂದಾಪುರದ ಯುವ ನ್ಯಾಯವಾದಿ ಪಿ. ಜಯಚಂದ್ರ ಶೆಟ್ಟಿ ವಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್