ಕುಂದೇಶ್ವರ- ಪೀಂದ್ರಬೆಟ್ಟು ಸಂಪರ್ಕ ರಸ್ತೆ: ಹೊಂಡಗುಂಡಿ

ರಸ್ತೆ ನಿರ್ಮಾಣಗೊಂಡು 2 ದಶಕ ಕಳೆದರೂ ಡಾಮರು ಭಾಗ್ಯ ಕಂಡಿಲ್ಲ

Team Udayavani, Sep 21, 2019, 5:16 AM IST

1909AJKE01A

ವಿಶೇಷ ವರದಿ –ಅಜೆಕಾರು: ಹಿರ್ಗಾನ ಗ್ರಾ.ಪಂ. ವ್ಯಾಪ್ತಿಯ ಕುಂದೇಶ್ವರ-ಪೀಂದ್ರಬೆಟ್ಟು ಸಂಪರ್ಕ ರಸ್ತೆ ಡಾಮರು ಕಾಣದೆ ಹೊಂಡಗಳಿಂದ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಸುಮಾರು 20 ವರ್ಷಗಳ ಹಿಂದೆ ಸ್ಥಳೀಯರು ಸಂಪರ್ಕ ರಸ್ತೆಗಾಗಿ ಖಾಸಗಿ ಜಾಗ ಬಿಟ್ಟುಕೊಟ್ಟಾಗ ಕೇವಲ ಕಚ್ಚಾರಸ್ತೆ ನಿರ್ಮಾಣ ಮಾಡಲಾಗಿದೆಯೇ ಹೊರತು ಡಾಮರು ಮಾತ್ರ ಆಗಿಲ್ಲ. ಮೂರೂರು ಪೇಟೆಯ ಮುಖ್ಯ ರಸ್ತೆಯಿಂದ ಕುಂದೇಶ್ವರದವರೆಗೆ ಸುಮಾರು 2 ಕಿ.ಮೀ. ಭಾಗ ಡಾಮರುಗೊಂಡಿದ್ದು ಅನಂತರ ಕುಂದೇಶ್ವರದಿಂದ ಪೀಂದ್ರಬೆಟ್ಟುವರೆಗಿನ ಎರಡು ಕಿ.ಮೀ. ಮಣ್ಣಿನ ರಸ್ತೆ ಹಾಗೆಯೇ ಉಳಿದಿದೆ.

50 ಮನೆಗಳಿಗೆ ಅನುಕೂಲ
ಈ ಪರಿಸರದಲ್ಲಿ ಸುಮಾರು 50ರಷ್ಟು ಮನೆಗಳವರು ಈ ರಸ್ತೆಯನ್ನೇ ಅವಲಂಬಿಸಿದ್ದಾರೆ. ಪಾದೆಮಾರು, ಪೀಂದ್ರಬೆಟ್ಟು ಪರಿಸರದವರು ದಿನನಿತ್ಯದ ವ್ಯವಹಾರಕ್ಕಾಗಿ ಮೂರೂರು ಪೇಟೆಯನ್ನೇ ಅವಲಂಬಿಸಿದ್ದು ಈ ದಾರಿಯನ್ನೇ ಬಳಸುತ್ತಿದ್ದಾರೆ. ಈ ರಸ್ತೆಯಲ್ಲಿ ಸಂಚರಿಸಲು ರಿಕ್ಷಾ ಚಾಲಕರೂ ಹಿಂದೇಟು ಹಾಕುತ್ತಾರೆ. ಅನಾರೋಗ್ಯ ಪೀಡಿತರು ಹಿರ್ಗಾನ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪರ್ಕಿಸಲು ಸಮಸ್ಯೆಯಾಗಿದೆ.

ತಾತ್ಕಾಲಿಕ ತೇಪೆ
ಹಿರ್ಗಾನ ಪಂಚಾಯತ್‌ ತನ್ನ ಸೀಮಿತ ಅನುದಾನದಲ್ಲಿ ಪ್ರತೀ ವರ್ಷ ಬೃಹತ್‌ ಹೊಂಡಗಳಿಗೆ ಕ್ರಷರ್‌ ಹುಡಿ ತುಂಬಿಸಿ ಸ್ವಲ್ಪ ಮಟ್ಟಿಗೆ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿತ್ತು. ಆದರೆ ಮಳೆ ಬಂದ ಸಂದರ್ಭ ಇದು ಮತ್ತೆ ಸಂಪೂರ್ಣ ಹಾಳಾಗಿ ಪಾದಚಾರಿಗಳಿಗೆ ಕೆಸರಿನ ಸಿಂಚನವಾಗುತ್ತದೆ.

ಕೂಡು ರಸ್ತೆ
ಈ ರಸ್ತೆ ಅಭಿವೃದ್ಧಿಗೊಳಿಸಿ ಚಿಕ್ಕಲ್‌ಬೆಟ್ಟುವಿಗೆ ಸಂಪರ್ಕ ಕಲ್ಪಿಸಲು ಕೂಡುರಸ್ತೆ ನಿರ್ಮಾಣ ಮಾಡಿದಲ್ಲಿ ಪೀಂದ್ರಬೆಟ್ಟು, ಚಿಕ್ಕಲ್‌ಬೆಟ್ಟು, ಯರ್ಲಪಾಡಿ, ಜಾರ್ಕಳ ಭಾಗದ ಸುಮಾರು 300ಕ್ಕೂ ಅಧಿಕ ಮನೆಗಳಿಗೆ ಅನುಕೂಲವಾಗಲಿದೆ. ರಸ್ತೆ ದುರಸ್ತಿಗೆ ಸಂಬಂಧಪಟ್ಟ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ನೀಡಿದರೂ ಇದುವರೆಗೂ ಯಾವುದೇ ಪ್ರಯೋಜನ ವಾಗಿಲ್ಲ ಎಂಬುದು ಗ್ರಾಮಸ್ಥರ ಆರೋಪ.

ತುರ್ತು ಕ್ರಮ ಕೈಗೊಳ್ಳಿ
ಇದು ಈ ಭಾಗದ ಏಕೈಕ ಸಂಪರ್ಕ ರಸ್ತೆಯಾಗಿದ್ದು ದಶಕಗಳಿಂದ ರಸ್ತೆ ಡಾಮರಿಗೆ ಮನವಿ ಮಾಡುತ್ತ ಬಂದಿದ್ದರೂ ಜನಪ್ರತಿನಿಧಿಗಳು, ಇಲಾಖಾಧಿಕಾರಿಗಳು ಸ್ಥಳೀಯರ ಸಮಸ್ಯೆಗೆ ಸ್ಪಂದಿಸಿಲ್ಲ. ಇನ್ನಾದರೂ ತುರ್ತು ಕ್ರಮ ಕೈಗೊಂಡು ರಸ್ತೆ ಅಭಿವೃದ್ಧಿಗೊಳ್ಳಲಿ.
-ಮಹಾವೀರ್‌ ಜೈನ್‌, ಸ್ಥಳೀಯರು

ಪ್ರಸ್ತಾವನೆ ಸಲ್ಲಿಕೆ
ಪೀಂದ್ರಬೆಟ್ಟು-ಕುಂದೇಶ್ವರ ರಸ್ತೆ ಅಭಿವೃದ್ಧಿಪಡಿಸುವಂತೆ ಪಂಚಾಯತ್‌ನಿಂದ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಅತ್ಯಂತ ಅಗತ್ಯದ ರಸ್ತೆ ಇದಾಗಿದ್ದು ಪಂಚಾಯತ್‌ನ ಸೀಮಿತ ಅನುದಾನದಲ್ಲಿ ಅಭಿವೃದ್ಧಿಪಡಿಸುವುದು ಅಸಾಧ್ಯ. ಈ ನಿಟ್ಟಿನಲ್ಲಿ ಜಿ.ಪಂ. ಸದಸ್ಯರು ಹಾಗೂ ಶಾಸಕರ ಗಮನಕ್ಕೆ ಮತ್ತೆ ತರಲಾಗುವುದು.
-ಸಂತೋಷ್‌ ಕುಮಾರ್‌ ಶೆಟ್ಟಿ,ಅಧ್ಯಕ್ಷರು, ಹಿರ್ಗಾನ ಗ್ರಾ.ಪಂ.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.