ಕುಂದೇಶ್ವರ- ಪೀಂದ್ರಬೆಟ್ಟು ಸಂಪರ್ಕ ರಸ್ತೆಗೆ 25 ಲಕ್ಷ ರೂ.ಅನುದಾನ
ಪ್ರಕ್ರಿಯೆ ಹಂತದಲ್ಲಿರುವ ಟೆಂಡರ್
Team Udayavani, Oct 14, 2019, 5:34 AM IST
ಅಜೆಕಾರು: ಹಿರ್ಗಾನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂದೇಶ್ವರ-ಪೀಂದ್ರಬೆಟ್ಟು ಸಂಪರ್ಕ ರಸ್ತೆಗೆ 25 ಲಕ್ಷ ರೂ ಅನುದಾನವನ್ನು ಶಾಸಕ ಸುನಿಲ್ ಕುಮಾರ್ ಒದಗಿಸಿದ್ದಾರೆ.
ಕುಂದೇಶ್ವರ-ಪೀಂದ್ರಬೆಟ್ಟು ಸಂಪರ್ಕ ರಸ್ತೆಗೆ ಸುಮಾರು 20 ವರ್ಷಗಳ ಹಿಂದೆ ಸ್ಥಳೀಯರು ಖಾಸಗಿ ಜಾಗವನ್ನು ಬಿಟ್ಟುಕೊಟ್ಟಿದ್ದರಾದರೂ ಕೇವಲ ಕಚ್ಚಾರಸ್ತೆಯಿರುವ ಕಾರಣ ಸಂಚಾರ ದುಸ್ತರವಾಗಿರುವ ಬಗ್ಗೆ ಉದಯವಾಣಿ ಪತ್ರಿಕೆಯು ಸೆ. 20ರಂದು ವರದಿ ಪ್ರಕಟಿಸಿತ್ತು. ವರದಿ ಗಮನಿಸಿದ ಅಧಿಕಾರಿಗಳು ಅಕ್ಟೋಬರ್ ಮೊದಲ ವಾರದಲ್ಲಿ ರಸ್ತೆಯ ಸರ್ವೇ ಕಾರ್ಯ ಪೂರ್ಣಗೊಳಿಸಿ ಅಂದಾಜು ಪಟ್ಟಿಯನ್ನು ಸಲ್ಲಿಸಿದ್ದು, ಇದೀಗ ಅನುದಾನ ಒದಗಿಸಲಾಗಿದೆ.
50-54 ಯೋಜನೆಯಡಿ ರಸ್ತೆಗೆ ಅನುದಾನ ಒದಗಿಸಲಾಗಿದ್ದು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕಾಮಗಾರಿ ಪ್ರಾರಂಭಗೊಳ್ಳಲಿದೆ. ಈ ರಸ್ತೆ ಅಭಿವೃದ್ಧಿಯಿಂದ ಸ್ಥಳೀಯ ಸುಮಾರು 50ರಷ್ಟು ಮನೆಗಳಿಗೆ ಅನುಕೂಲವಾಗಲಿದೆ. ಮೂರೂರು ಪೇಟೆಯ ಮುಖ್ಯ ರಸ್ತೆಯಿಂದ ಕುಂದೇಶ್ವರದವರೆಗೆ ಸುಮಾರು 2 ಕಿ.ಮೀ. ಭಾಗ ಈ ಹಿಂದೆಯೇ ಡಾಮರೀಕರಣಗೊಂಡಿದ್ದು ಈಗ 25 ಲಕ್ಷ ರೂ ಅನುದಾನದಲ್ಲಿ ಕುಂದೇಶ್ವರದಿಂದ ಪೀಂದ್ರಬೆಟ್ಟುವರೆಗೆ 2 ಕಿ.ಮೀ. ಮಣ್ಣಿನ ರಸ್ತೆಯನ್ನು ಡಾಮರಿಕರಣಗೊಳಿಸಲಾಗುತ್ತದೆ.
ಕಾಮಗಾರಿ ಟೆಂಡರ್ ಹಂತದಲ್ಲಿ
ರಸ್ತೆ ಅಭಿವೃದ್ಧಿ ಬಗ್ಗೆ ಈಗಾಗಲೇ ಸರ್ವೇ ಕಾರ್ಯ ಪೂರ್ಣಗೊಳಿಸಿ ಅಂದಾಜು ಪಟ್ಟಿ ಸಲ್ಲಿಸಲಾಗಿದ್ದು, ಕಾಮಗಾರಿ ಟೆಂಡರ್ ಹಂತದಲ್ಲಿದೆ.
-ಮಧು,ಪಂಚಾಯತ್ರಾಜ್ ಎಂಜಿನಿಯರ್, ಕಾರ್ಕಳ
ತ್ವರಿತ ಕಾಮಗಾರಿ ನಡೆಯಲಿ
ಪೀಂದ್ರಬೆಟ್ಟು-ಕುಂದೇಶ್ವರ ರಸ್ತೆ ಅಭಿವೃದ್ಧಿಪಡಿಸುವಂತೆ ಪಂಚಾಯತ್ನಿಂದ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸ್ಥಳೀಯ ಸಮಸ್ಯೆ ಬಗ್ಗೆ ಪತ್ರಿಕೆಯು ವರದಿ ಮಾಡಿರುವುದರಿಂದ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ತ್ವರಿತವಾಗಿ ಕಾಮಗಾರಿ ನಡೆಯಬೇಕಿದೆ.
-ಸಂತೋಷ್ ಕುಮಾರ್ ಶೆಟ್ಟಿ,
ಅಧ್ಯಕ್ಷರು ಹಿರ್ಗಾನ ಗ್ರಾ.ಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು