ಕುಂಜಾರುಗಿರಿ: ಕೈ ಕೊಟ್ಟ ಶುದ್ಧ ಕುಡಿಯುವ ನೀರಿನ ಘಟಕ


Team Udayavani, Apr 26, 2019, 6:25 AM IST

neerina-ghataka

ಕಟಪಾಡಿ ಕುರ್ಕಾಲು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕುಂಜಾರುಗಿರಿ ಎಂಬಲ್ಲಿ ಹೊಸದಾಗಿ ತೆರೆದ ಶುದ್ಧ ಕುಡಿಯುವ ನೀರಿನ ಘಟಕವು ಕೈ ಕೊಟ್ಟಿದ್ದು ಕಳಪೆ ಗುಣಮಟ್ಟದ ಯಂತ್ರಗಳ ಬಳಕೆ, ಕಳಪೆ ಕಾಮಗಾರಿಯ ಶಂಕೆಯನ್ನು ಗ್ರಾಮಸ್ಥರು ವ್ಯಕ್ತಪಡಿಸುತ್ತಿದ್ದಾರೆ.

ಹಾಳಾದ್ದನ್ನು ದುರಸ್ತಿ ಮಾಡಿಲ್ಲ
ರಾಜ್ಯ ಸರಕಾರದ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿಯಲ್ಲಿ ಕುರ್ಕಾಲು ಪಂಚಾಯತ್‌ ವ್ಯಾಪ್ತಿಯ ಕುಂಜಾರುಗಿರಿ ಯಲ್ಲಿ ಉಡುಪಿಯ ಕೆ. ಆರ್‌. ಐ. ಡಿ. ಎಲ್‌. ಇಲಾಖೆ ಈ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿದೆ. 2 ರೂ. ನಾಣ್ಯವನ್ನು ಬಳಸಿ 20 ಲೀಟರ್‌ ಶುದ್ಧ ಕುಡಿಯುವ ನೀರನ್ನು ಪಡೆಯುವ ಈ ಯೋಜನೆಯನ್ನು ಹೊಂದಿರುವ ಘಟಕವು ಹೆಚ್ಚು ದಿನ ಕಾರ್ಯಾಚರಿಸಿಲ್ಲ. ಕೈಕೊಟ್ಟ ಅನಂತರ ಈವರೆಗೂ ದುರಸ್ತಿ ಕಂಡಿಲ್ಲ. ಹಾಳಾದ ಬಿಡಿ ಭಾಗವನ್ನು ಬದಲಾಯಿಸಿ ಘಟಕವನ್ನು ಸುಸಜ್ಜಿತಗೊಳಿಸಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಕಡುಬೇಸಗೆಯಲ್ಲೂ ಮೀನಮೇಷ
ಈ ಕಡು ಬೇಸಗೆಯ ಸಂದರ್ಭವೂ ನೀರಿನ ಘಟಕದ ಯಂತ್ರ ಸರಿಪಡಿಸುವ ಕೆಲಸ ಕಾರ್ಯಕ್ಕೆ ಮೀನ ಮೇಷ ಎಣಿಸುತ್ತಿದ್ದಾರೆ. ಹಾಳಾದ ಬಿಡಿಭಾಗಕ್ಕೆ ಕಂಪೆನಿ ವಾರಂಟಿ ಅವಧಿಯೊಳಗೆ ಹೊಸದಾಗಿ ಬಿಡಿಭಾಗವನ್ನು ಅಳವಡಿ ಸುವುದಾದರೆ ಇಷ್ಟೊಂದು ಕಾಲಾವಕಾಶ ಬೇಕೆ ಎಂಬ ಪ್ರಶ್ನೆ ಬಳಕೆದಾರರದ್ದು, ಹಾಳಾದ ಬಿಡಿಭಾಗವನ್ನು ಅಲ್ಲಿಂದಲ್ಲಿಗೇ ದುರಸ್ತಿ ಮಾಡಿ ಅಳವಡಿಸುವ ಹುನ್ನಾರ ಗುತ್ತಿಗೆದಾರರಧ್ದೋ ಎಂಬ ಶಂಕೆ ಬಲವಾಗಿ ಮೂಡಿಬರುತ್ತಿದೆ ಎನ್ನುತ್ತಾರೆ ಸ್ಥಳೀಯ ಜನಪ್ರತಿನಿಧಿಗಳು.

ಕೂಡಲೇ ದುರಸ್ತಿ
ಘಟಕದಲ್ಲಿ ವೋಲ್ಟೆàಜ್‌ ಸಮಸ್ಯೆ ಇತ್ತು. ಆ ಕಾರಣದಿಂದ ಮೋಟಾರ್‌ನಲ್ಲಿ ತೊಂದರೆ ಕಾಣಿಸಿಕೊಂಡಿದೆ. ಕೂಡಲೇ ಸರಿಪಡಿಸಲಾಗುತ್ತದೆ.
-ಧೀರಜ್‌, ಏರಿಯಾ ಎಂಜಿನಿಯರ್‌

ಗಮನಕ್ಕೆ ತರಲಾಗಿದೆ
ಘಟಕ ಹಾಳಾದ ಕೂಡಲೇ ಸಂಬಂಧಪಟ್ಟ ಎಂಜಿನಿಯರ್‌ ಅವರ ಗಮನಕ್ಕೆ ತರಲಾಗಿದೆ. ಕೂಡಲೇ ಸರಿಪಡಿಸುವ ಭರವಸೆ ನೀಡಿದ್ದಾರೆ.
– ಚಂದ್ರಕಲಾ, ಪಿ.ಡಿ.ಒ. ಕುರ್ಕಾಲು ಗ್ರಾ.ಪಂ.

ಕೂಡಲೇ ದುರಸ್ತಿಗೊಳಿಸಿ
ಸ್ಥಳೀಯ ಗ್ರಾ.ಪಂ. ಸದಸ್ಯ ನಾಗೇಂದ್ರ ಅವರು ಹೇಳುವಂತೆ 2019ರ ಫೆ.4 ರಂದು ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆಯಾಗಿ ಕೇವಲ 15 ದಿನ ಕಾರ್ಯಾಚರಿಸಿದೆ. ಹಲವಾರು ಕುಟುಂಬಗಳಿಗೆ ಪ್ರಯೋಜನಕಾರಿಯಾದ ಈ ಶುದ್ಧ ಕುಡಿಯುವ ನೀರಿನ ಘಟಕ ಕೈ ಕೊಟ್ಟಿದೆ. ಕೂಡಲೇ ಸಂಬಂಧಿತ ಅಧಿಕಾರಿ ಎಚ್ಚೆತ್ತು ಈ ಯೋಜನೆಯು ಜನಪರವಾಗಿ ದೀರ್ಘ‌ಕಾಲ ಬಳಕೆಗೆ ಬರುವಂತೆ ಜವಾಬ್ದಾರಿಯುತವಾಗಿ ನಿರ್ವಹಣೆ ಮಾಡಲಿ. ಚುನಾವಣಾ ಕರ್ತವ್ಯಕ್ಕೆ ಬಂದವರಿಗೂ ಶುದ್ಧ ಕುಡಿಯುವ ನೀರು ಲಭಿಸಿಲ್ಲ. ದುರಸ್ತಿಗೆ ಇಷ್ಟೊಂದು ಸಮಯ ಬೇಕೇ? ಎಂದು ಅವರು ಪ್ರಶ್ನಿಸುತ್ತಾರೆ.

ಟಾಪ್ ನ್ಯೂಸ್

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.