ಕುಂಜೂರು ಶ್ರೀ ದುರ್ಗೆಯ ಅನುಗ್ರಹದಿಂದ ಪ್ರಾರಂಭಗೊಂಡ ಶಾಲೆ

ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಪಣಿಯೂರು

Team Udayavani, Dec 8, 2019, 5:27 AM IST

sd-20

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

1912 ಶಾಲೆ ಸ್ಥಾಪನೆ
107ನೇ ವರ್ಷಾಚರಣೆಯ ಸಂಭ್ರಮದಲ್ಲಿರುವ ಶಾಲೆ

ಕಾಪು: ಶತಮಾನ ಪೂರ್ವದಲ್ಲಿ ಗ್ರಾಮದ ಮಕ್ಕಳ ಶಿಕ್ಷಣದ ದಾಹವನ್ನು ತಣಿಸುವ ಉದ್ದೇಶದೊಂದಿಗೆ ಕುಂಜೂರು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಅನುಗ್ರಹದೊಂದಿಗೆ ಪಣಿಯೂರಿನಲ್ಲಿ ಮುಳಿಹುಲ್ಲಿನ ಛಾವಣಿಯಡಿ ಪ್ರಾರಂಭಗೊಂಡ ಪಣಿಯೂರು ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅಭಿವೃದ್ಧಿಯ ಪಥದತ್ತ ಸಾಗಿದೆ.

ಬೆಳಪು ಮತ್ತು ಎಲ್ಲೂರು ಗ್ರಾಮಗಳ ನಡುವಿನ ಪಣಿಯೂರಿನಲ್ಲಿ 1912ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಾಯಕ ಇನ್‌ಸ್ಪೆಕ್ಟರ್‌ ಆಫ್‌ ಸ್ಕೂಲ್ಸ್‌ ಇವರಿಂದ ಅಧಿಕೃತವಾಗಿ ಘೋಷಿಸಲ್ಪಟ್ಟ ಈ ಶಾಲೆಗೆ 1ರಿಂದ 4ನೇ ತರಗತಿಯವರೆಗಿನ ಖಾಯಂ ಮಂಜೂರಾತಿ ದೊರಕಿತ್ತು. 2007ರಲ್ಲಿ ಶತಮಾನೋತ್ಸವ ಆಚರಿಸಲಾಗಿತ್ತು. ಅಧಿಕೃತ ದಾಖಲೆಗಳ ಪ್ರಕಾರ ಶಾಲೆಗೆ 2012ರಲ್ಲಿ ನೂರು ವರ್ಷ ಪೂರ್ಣಗೊಂಡಿದ್ದು, ಪ್ರಸ್ತುತ 107ನೇ ವರ್ಷಾಚರಣೆಯ ಸಂಭ್ರಮದಲ್ಲಿದೆ.

ಮನೆಗಳಿಗೆ ತೆರಳಿ ಶಿಕ್ಷಣ
ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ದಿ| ವೈ. ಯೋಗೇಂದ್ರಯ್ಯ ಅವರ ಹಿರಿಯ ಸಹೋದರ ದಿ| ವೈ. ದಾಸಪ್ಪಯ್ಯ ಅವರು ಆಸುಪಾಸಿನ ಮನೆಗಳಿಗೆ ತೆರಳಿ ಆಸಕ್ತ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದರು. ಅವರ ಮುತುವರ್ಜಿಯಿಂದಾಗಿ ಶಾಲೆಗೆ ಪ್ರಾರಂಭಗೊಂಡಿತು. ದಾಸಪ್ಪಯ್ಯ ಅವರ ಅನಂತರ 1913ರಲ್ಲಿ ವೈ. ಯೋಗೇಂದ್ರಯ್ಯ ಶಾಲೆಯ ಜವಾಬ್ದಾರಿ ಹೊತ್ತರು. ಅವರ ಸಹೋದರ ತಿಮ್ಮಪ್ಪಯ್ಯ ಹಾಗೂ ಎಲ್ಲೂರುಗುತ್ತು, ಬಡಗರಗುತ್ತು ಮತ್ತು ಪಣಿಯೂರು ಗುತ್ತಿನವರ ಸಹಕಾರವೂ ಸ್ಮರಣೀಯವಾಗಿದೆ. 1960ರಲ್ಲಿ 1ರಿಂದ 5ನೇ ತರಗತಿವರೆಗೆ ಎಲ್ಲ ತರಗತಿಗಳಿಗೂ 2 ವಿಭಾಗಗಳನ್ನು ತೆರೆಯಲು ಅನುಮತಿ ದೊರಕಿದ್ದು, ಮಕ್ಕಳ ಸಂಖ್ಯೆ ಹೆಚ್ಚಾದಂತೆ ಪಣಿಯೂರಿನ ಮಹಾದಾನಿ ದಿ| ಎಲ್‌. ನರಸಿಂಗ ರಾವ್‌ ಅವರು 1967ರಲ್ಲಿ ಹಳೇ ಕಟ್ಟಡದ ಪೂರ್ವ ಭಾಗದಲ್ಲಿ ಕಟ್ಟಡವನ್ನು ನಿರ್ಮಿಸಿ ಕೊಟ್ಟಿದ್ದರು. ಊರಿನ ಮಹಾದಾನಿ ಡಾ| ವಿಷ್ಣುಮೂರ್ತಿ ಪೋತಿ ಅವರ ಸಹಕಾರವೂ ಶಾಲೆಯ ಬೆಳವಣಿಗೆಗೆ ಪೂರಕವಾಗಿ ದೊರಕಿತ್ತು.

ಪರ್ವ ಕಾಲ
1970-1990ರ ಕಾಲಘಟ್ಟದಲ್ಲಿ ಶಾಲೆ ಪರ್ವ ಕಾಲವನ್ನು ತಲುಪಿದ್ದು ಮಕ್ಕಳ ಸಂಖ್ಯೆ 750 ಮತ್ತು ಅದಕ್ಕೆ ಅನುಗುಣವಾಗಿ ಶಿಕ್ಷಕರ ಸಂಖ್ಯೆಯೂ 17ನ್ನು ತಲುಪಿತ್ತು. 1982ರಲ್ಲಿ ಪಣಿಯೂರು ಶಾಲೆಗೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಾಲೆ ಎಂಬ ಪ್ರಶಸ್ತಿಯೂ ಲಭಿಸಿತ್ತು.

ಹಳೆ ವಿದ್ಯಾರ್ಥಿಗಳು
ಮಾಜಿ ಅಡ್ವೊಕೇಟ್‌ ಜನರಲ್‌ ಬಿ.ವಿ. ಆಚಾರ್ಯ, ಮಾಜಿ ಮಂಡಲ ಪ್ರಧಾನ ವೈ. ಪ್ರಫುಲ್ಲ ಶೆಟ್ಟಿ, ಬೆಳಪು ಗ್ರಾ.ಪಂ. ಅಧ್ಯಕ್ಷ ಡಾ| ದೇವಿಪ್ರಸಾದ್‌ ಶೆಟ್ಟಿ, ಎಲ್ಲೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಯಶವಂತ್‌ ಶೆಟ್ಟಿ, ಮಾಜಿ ಜಿ.ಪಂ. ಸದಸ್ಯ ಅರುಣ್‌ ಶೆಟ್ಟಿ ಪಾದೂರು, ಸಿ.ಎ. ಸುಧೀರ್‌ ಆರ್‌.ಎಲ್‌. ಶೆಟ್ಟಿ ಮುಂಬಯಿ, ಉದ್ಯಮಿ ದಯಾನಂದ ಹೆಗ್ಡೆ ಮುಂಬಯಿ, ಖ್ಯಾತ ಭಾಗವತ ಸುರೇಂದ್ರ ಪಣಿಯೂರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರುಣಾಕರ ಶೆಟ್ಟಿ ಮೊದಲಾದವರು ಶಾಲೆಯ ಹೆಮ್ಮೆಯ ಹಳೆ ವಿದ್ಯಾರ್ಥಿಗಳು.

ಪ್ರಸ್ತುತ 70 ಮಂದಿ ವಿದ್ಯಾಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ. ಸರಕಾರದಿಂದ ವೇತನ ಪಡೆಯುವ ಓರ್ವ ಶಿಕ್ಷಕ ಮತ್ತು 4 ಮಂದಿ ಗೌರವ ಶಿಕ್ಷಕಿಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಕ್ರಿಯಾಶೀಲರಾಗಿದ್ದಾರೆ.

ಪಣಿಯೂರು ಶಾಲೆಯು ಆಡಳಿತ ಮಂಡಳಿ, ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿಗಳು ಮತ್ತು ದಾನಿಗಳ ನೆರವಿನೊಂದಿಗೆ ಉತ್ತಮ ರೀತಿಯಲ್ಲಿ ಮುನ್ನಡೆಯುತ್ತಿದೆ. ಶಿಕ್ಷಕರ ಕೊರತೆ ತುಂಬಿದ‌ಲ್ಲಿ ಶಾಲೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಸಾಧ್ಯವಿದೆ.
-ಶಂಕರ ಎಸ್‌., ಮುಖ್ಯ ಶಿಕ್ಷಕರು

ನನ್ನ ಜೀವನದ ಎಲ್ಲ ಸಾಧನೆಗಳಿಗೂ ಪ್ರಾಥಮಿಕ ಹಂತದ ಶಿಕ್ಷಣವನ್ನು ನೀಡಿದ ಶಾಲೆ ಮತ್ತು ಆಗಿನ ಅಧ್ಯಾಪಕರೇ ಮುಖ್ಯ ಕಾರಣರಾಗಿದ್ದಾರೆ. ಅಂದಿನ ಪಾಠ ಕ್ರಮವು ನಮ್ಮಲ್ಲಿ ಸಂಸ್ಕಾರ, ಸಂಸ್ಕೃತಿ ತುಂಬಿದೆ. ನಾಯತ್ವದ ಗುಣಗಳನ್ನೂ ಬೆಳೆಸಿಕೊಳ್ಳುವಲ್ಲಿ ಶಾಲೆಯ ಪಾತ್ರ ಮಹತ್ವದ್ದಾಗಿದೆ. ಪ್ರಾಥಮಿಕ ಶಾಲಾ ಅವಧಿಯಲ್ಲಿ ಶಾಲಾ ನಾಯಕನಾಗುವ ಅವಕಾಶವೂ ದೊರಕಿತ್ತು. ಅದುವೇ ನನಗೆ ಇಷ್ಟು ಎತ್ತರದವರೆಗೆ ಸಾಗಿ ಬರಲು ಸಹಕಾರ ನೀಡಿದೆ.
-ಡಾ| ದೇವಿಪ್ರಸಾದ್‌ ಶೆಟ್ಟಿ, ಅಧ್ಯಕ್ಷರು, ಬೆಳಪು ಗ್ರಾಮ ಪಂಚಾಯತ್‌, (ಹಳೆ ವಿದ್ಯಾರ್ಥಿ)

-  ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.