ಕುತ್ಪಾಡಿ ಪಡುಕೆರೆ ಆರೋಗ್ಯ ಕೇಂದ್ರವೇ ಅಸ್ವಸ್ಥ!


Team Udayavani, Jun 21, 2018, 6:00 AM IST

1906mle1.jpg

ಮಲ್ಪೆ: ತಾಲೂಕಿನ ಕಡೆಕಾರು ಕುತ್ಪಾಡಿ ಗ್ರಾಮದ ಕುತ್ಪಾಡಿ ಕುದ್ರುಕರೆಯಲ್ಲಿರುವ ಪ್ರಾಥಮಿಕ ಆರೋಗ್ಯ ಉಪಕೇಂದ್ರ ಸಿಬಂದಿ ಕೊರತೆಯಿಂದ ಕಳೆದ ಒಂದು ವರ್ಷದಿಂದ ಬಾಗಿಲು ಮುಚ್ಚಿದೆ. ಇದರಿಂದ ಮಳೆಗಾಲದಲ್ಲಂತೂ ಬಡರೋಗಿಗಳಿಗೆ ತೀವ್ರ ಸಮಸ್ಯೆಯಾಗಿದೆ.  

20 ವರ್ಷಗಳ ಹಿಂದೆ ಆರೋಗ್ಯ ಉಪಕೇಂದ್ರವನ್ನು ಸ್ಥಾಪನೆ ಮಾಡ ಲಾಗಿತ್ತು. ಇದೀಗ ಇಲಾಖೆಯ ಸಿಬಂದಿ ಇಲ್ಲದ ಕಾರಣ ಸಂಪೂರ್ಣ ಸ್ಥಗಿತಗೊಂಡಿದೆ.

ಈ ಹಿಂದೆ ಇಲ್ಲಿ ವೈದ್ಯರು ವಾರಕ್ಕೊಮ್ಮೆ ಸಿಗುತ್ತಿದ್ದರು. ಇಲ್ಲಿ ಖಾಯಂ ಆಗಿ ಇದ್ದ ಒಬ್ಬ ಆರೋಗ್ಯ ಸಹಾಯಕಿ ವರ್ಗಾವಣೆಗೊಂಡಿದ್ದು, ಅಂದಿನಿಂದ ಆರೋಗ್ಯ ಕೇಂದ್ರಕ್ಕೆ ಬೀಗ ಬಿದ್ದಿದೆ. ಆದರೆ ಈ ಬಗ್ಗೆ ಉತ್ತರಿಸಬೇಕಾದ ಆರೋಗ್ಯ ಇಲಾಖೆ ಕಣ್ಮುಚ್ಚಿ ಕೂತಿದೆ. 

ಏಕೈಕ ಉಪಕೇಂದ್ರ
ಪಡುಕರೆ ಭಾಗದ ಮಲ್ಪೆ, 

ಕಿದಿಯೂರು, ಕುತ್ಪಾಡಿ, ಕಡೆಕಾರ್‌ ಉದ್ಯಾವರ ಗ್ರಾಮದ ಜನರಿಗೆ ಇದು ಏಕೈಕ ಆರೋಗ್ಯ ಉಪ ಕೇಂದ್ರವಾಗಿತ್ತು. ಬಹುತೇಕ ಬಡ ಮೀನುಗಾರರ ಮನೆಗಳೇ ಹೆಚ್ಚಿರುವ ಇಲ್ಲಿನ ಮಂದಿ ಯಾವುದೇ  ಸಣ್ಣಪುಟ್ಟ ಅನಾರೋಗ್ಯ ಬಂದರೂ ದೂರದ ಮಲ್ಪೆ ಪ್ರಾಥಮಿಕ ಕೇಂದ್ರ ಅಥವಾ ಇನ್ನಿತರ ಖಾಸಗಿ ಚಿಕಿತ್ಸಾ ಕೇಂದ್ರಕ್ಕೆ ಹೋಗಬೇಕಾದ ಅನಿವಾರ್ಯತೆ ಇದೆ. 

ಸರ್ವ ಸೌಕರ್ಯ 
ಇಲ್ಲಿನ ಆರೋಗ್ಯ ಕೇಂದ್ರ ಬೇಕಾದ ಎಲ್ಲ ಸೌಕರ್ಯಗಳನ್ನು ಹೊಂದಿದೆ. ಮಹಿಳಾ ಆರೋಗ್ಯ ಸಹಾಯಕಿಯರ ವಸತಿ ಗೃಹವೂ ಇದೆ. ಆಸ್ಪತ್ರೆಯಲ್ಲಿ ಇಂಜೆಕ್ಷನ್‌ ಮತ್ತು ಇನ್ನಿತರ ಅಗತ್ಯ ವೈದ್ಯಕೀಯ ವಸ್ತುಗಳನ್ನು ಸಂಗ್ರಹಿಸುವ ರೆಫ್ರಿಜರೇಟರ್‌ ಇಲ್ಲಿವೆ. 

ಇದೀಗ ವರ್ಷದಿಂದ ಮುಚ್ಚಿರುವುದ ರಿಂದ ಅವು ಕೆಟ್ಟು ಹೋಗುವ ಸಂಭವ ಇದೆ. ಈ ಕುರಿತು ಗ್ರಾಮಸ್ಥರು ಹಲವು ಬಾರಿ ಸಂಬಂಧಪಟ್ಟ ತಾಲೂಕು ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳಲ್ಲಿ ಮನವಿ ಮಾಡಿದರೂ ಯಾವುದೇ ಪ್ರಯೋಜನ ಕಂಡಿಲ್ಲ. 

ಆರೋಗ್ಯದ ಕಾಳಜಿ ವಹಿಸಿ 
ಇಲ್ಲಿನ ಆರೋಗ್ಯ ಉಪಕೇಂದ್ರಕ್ಕೆ ಆರೋಗ್ಯ ಸೇವಕಿಯನ್ನು ಒದಗಿಸಬೇಕೆಂದು ತಾಲೂಕು ಮತ್ತು ಜಿಲ್ಲಾ ವೈದ್ಯಾಧಿಕಾರಿಗಳ ಗಮನಕ್ಕೆ ತಂದಿದ್ದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇಲ್ಲಿ ಖಾಯಂ ಒಬ್ಬ ವೈದ್ಯರು ಹಾಗೂ ಆರೋಗ್ಯ ಸಹಾಯಕರನ್ನು ನೇಮಿಸಿ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗಿದೆ.
– ಆನಂದ ಪುತ್ರನ್‌, ಪಡುಕರೆ

 ಪ್ರಸ್ತಾವನೆ ಸಲ್ಲಿಕೆ
ಉಡುಪಿ ಜಿಲ್ಲೆಯಲ್ಲಿ ಖಾಲಿ ಇರುವ ಆರೋಗ್ಯ ಸಹಾಯಕಿಯರ ಹುದ್ದೆಯ ನೇಮಕಾತಿಗೆ ಸಂಬಂಧಪಟ್ಟಂತೆ ಈಗಾಗಲೇ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು ನೇಮಕಾತಿಯ ಪ್ರಕ್ರಿಯೆ ನಡೆಯುತ್ತಿದೆ. ಮಲ್ಪೆ ಆರೋಗ್ಯ ಕೇಂದ್ರದಲ್ಲಿಯೂ ಹುದ್ದೆಗಳು ಖಾಲಿ ಇದ್ದು  ಅಲ್ಲಿಗೆ ನೇಮಕಾತಿ ದೊರೆತಲ್ಲಿ ಮೊದಲು ಇಲ್ಲಿಗೆ ಭರ್ತಿ ಮಾಡಲಾಗುವುದು.
– ಡಾ|ರೋಹಿಣಿ
ಜಿಲ್ಲಾ ಆರೋಗ್ಯ ಇಲಾಖಾಧಿಕಾರಿ

 ಮನವಿಗೆ ಫ‌ಲವಿಲ್ಲ
ಹಿಂದಿನಂತೆ ದೋಣಿಯನ್ನೆ ಅವಲಂಬಿಸುವುದಾದರೆ ಆನಾರೋಗ್ಯ ಉಂಟಾದ ಸಂದರ್ಭದಲ್ಲಿ ಅತ್ಯಂತ ಕಷ್ಟದ ಪರಿಸ್ಥಿತಿಯನ್ನು ಎದುರಿಸಬೇಕಾಗಿತ್ತು. ಈಗ ಪಡುಕರೆಗೆ ಸೇತುವೆಯಾದ್ದರಿಂದ ವಾಹನದ ಮೂಲಕವಾದರೂ ಬೇರೆ ಕಡೆಗೆ ಹೋಗಬಹುದು. ಆರೋಗ್ಯ ಕೇಂದ್ರದ ಬಗ್ಗೆ  ಅಧಿಕಾರಿಗಳಲ್ಲಿ ಹಲವು ಬಾರಿ ಮನವಿ ಮಾಡಿದರೂ, ಯಾವ ಪ್ರಯೋಜನವೂ ಆಗಿಲ್ಲ. ಅಧಿಕಾರಿಗಳು ಕಾಯಕಲ್ಪ ನೀಡಿ ನಿರ್ವಹಣೆಗೆ ಒಳಪಡಿಸಬೇಕು. ಅಗತ್ಯ ವೈದ್ಯಾಧಿಕಾರಿ ಸಿಬಂದಿಗಳನ್ನು ನೇಮಕ ಮಾಡಬೇಕು.
– ಸುರೇಶ್‌ ಮೆಂಡನ್‌,ಪಡುಕೆರೆ

– ನಟರಾಜ್‌ ಮಲ್ಪೆ

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.