ಕುತ್ಯಾರು : ಸಾವಿನಲ್ಲೂ ಒಂದಾದ ಕೃಷಿಕ ದಂಪತಿ : ಒಂದೇ ಚಿತೆಯಲ್ಲಿ ಅಂತಿಮ ಸಂಸ್ಕಾರ
Team Udayavani, Aug 10, 2022, 12:34 PM IST
ಶಿರ್ವ : ಜೊತೆಗೇ ಮೃತಪಟ್ಟು, ಒಂದೇ ಚಿತೆಯಲ್ಲಿ ಅಂತ್ಯ ಸಂಸ್ಕಾರ ಕ್ರಿಯೆಗಳಿಗೆ ಒಳಗಾದ ಬೆಳಪುವಿನ ದಂಪತಿಯ ಸಾವಿನ ಘಟನೆಯ ನೆನಪು ಮಾಸುವ ಮುನ್ನವೇ ಅಂತಹುದೇ ಘಟನೆಯೊಂದು ಕುತ್ಯಾರು ಅಂಜಾರುವಿನಲ್ಲಿ ನಡೆದಿದೆ.
ಕುತ್ಯಾರು ಅಂಜಾರು ಮನೆ ಶಾಂತಾ ಆರ್. ಶೆಟ್ಟಿ (85) ಮತ್ತು ಕಿನ್ನಿಗೋಳಿ ಕೊಟ್ರಾಡಿ ರಾಮಣ್ಣ ಶೆಟ್ಟಿ (90) ಮೃತ ದಂಪತಿ. ಮೃತರು ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಪ್ರಗತಿಪರ ಕೃಷಿಕರಾಗಿದ್ದ ರಾಮಣ್ಣ ಶೆಟ್ಟಿ ಅವರು ವಯೋಸಹಜ ಕಾರಣಗಳಿಂದಾಗಿ ಅಸೌಖ್ಯಕ್ಕೊಳಗಾಗಿದ್ದು ಅವರ ಮಕ್ಕಳು ಮತ್ತು ಮನೆಯವರು ಮಂಗಳವಾರ ಸಂಜೆ ಕುಟುಂಬದ ಮೂಲಮನೆ ಕಿನ್ನಿಗೋಳಿ ಕೊಟ್ರಾಡಿಗೆ ಕರೆದೊಯ್ಯಲು ಸಿದ್ಧತೆ ನಡೆಸಿದ್ದರು. ಕೊಟ್ರಪಾಡಿಗೆ ಕರೆದೊಯ್ಯಲೆಂದು ಕುತ್ಯಾರು ಅಂಜಾರು ಮನೆಗೆ ಅಂಬುಲೆನ್ಸ್ ತರಿಸಲಾಗಿದ್ದು, ಅಂಬುಲೆನ್ಸ್ ಸೌಂಡ್ ಕೇಳುತ್ತಲೇ ಶಾಂತಾ ಶೆಟ್ಟಿ ಅವರು ಹೃದಯಾಘಾತಕ್ಕೊಳಗಾಗಿದ್ದರು. ಬಳಿಕ ಅದೇ ಅಂಬುಲೆನ್ಸ್ ನಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದರು.
ಮನೆಯವರು ಅವರ ಮೃತದೇಹವನ್ನು ಆಸ್ಪತ್ರೆಯ ಶೈತ್ಯಾಗಾರದಲ್ಲಿ ಇರಿಸಿ ಮನೆಗೆ ಬಂದಿದ್ದು, ಬುಧವಾರ ಬೆಳಗ್ಗೆ ಮೃತದೇಹವನ್ನು ಮನೆಗೆ ತಂದು ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿದ್ದಂತೆಯೇ ರಾಮಣ್ಣ ಶೆಟ್ಟಿ ಅವರು ಕೂಡಾ ಅಸು ನೀಗಿದ್ದಾರೆ.
ಸಪ್ತಪದಿ ತುಳಿದು, ಜೊತೆಗೆ ಬಾಳುವ ಪ್ರತಿಜ್ಞೆ ಸ್ವೀಕರಿಸಿದ ದಂಪತಿ ಜೊತೆಗೇ ಚಿತೆಗೇರುವ ಭಾಗ್ಯವನ್ನು ಸಂಪಾದಿಸಿದ್ದು ನೂರಾರು ಮಂದಿ ಮೃತರ ಮನೆಗೆ ಬಂದು ಮೃತ ದಂಪತಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಕುತ್ಯಾರು ಅಂಜಾರು ಮನೆಯಲ್ಲಿ ಇಬ್ಬರ ಮೃತದೇಹವನ್ನು ಒಂದೇ ಚಿತೆಯಲ್ಲಿ ಇರಿಸಿ ಅಂತಿಮ ಸಂಸ್ಕಾರ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ.
ಇದನ್ನೂ ಓದಿ : ನಾಲ್ವರ ಹಂತಕ ಪ್ರವೀಣ್ ಕುಮಾರ್ ಬಿಡುಗಡೆ ವಿಚಾರ: ಅಧಿಕಾರಿಗಳ ಸಭೆ ಬಳಿಕ ನಿರ್ಧಾರ; ಗೃಹ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ