ಮಕ್ಕಳಿಗೆ ಪ್ರೇರಣೆ ನೀಡಬಲ್ಲ ಮಕ್ಕಳ ವಿಜ್ಞಾನ ಹಬ್ಬ

ತೆಕ್ಕಟ್ಟೆ ಕುವೆಂಪು ಶಾಲೆಯಲ್ಲಿ ಮಕ್ಕಳ ವಿಜ್ಞಾನ ಹಬ್ಬ

Team Udayavani, Jan 3, 2020, 5:09 AM IST

0101TKE2B

ತೆಕ್ಕಟ್ಟೆ : ಪ್ರತಿ ಮಗುವೂ ಅನನ್ಯವಾದ ಪ್ರತಿಭೆ ಮತ್ತು ಚೈತನ್ಯವನ್ನು ಹೊಂದಿರುವುದರಿಂದ ಇಂತಹ ಕಲಿಕೆಯ ಸಂದರ್ಭವನ್ನು ನಿಭಾಯಿಸುವ ರೀತಿಗಳಲ್ಲೂ ಸಾಕಷ್ಟು ವಿಭಿನ್ನತೆಗಳನ್ನು ನಾವು ನಿರೀಕ್ಷಿಸಬೇಕಾಗುತ್ತದೆ.

ಪ್ರತಿ ಮಗುವೂ ತನ್ನದೇ ವಿಶಿಷ್ಟ ಜ್ಞಾನವನ್ನು ರಚಿಸಿಕೊಳ್ಳಲು ಸಾಧ್ಯವಾಗಬಹುದಾದ ಕಲಿಕೆಯ ಪರಿಸರವನ್ನು ತರಗತಿ ಕೋಣೆಯಲ್ಲಿ ತರಲು ಈಗಾಗಲೆ ಸಾಕಷ್ಟು ಕಾರ್ಯಕ್ರಮಗಳು, ಸಾಕಷ್ಟು ಕಾರ್ಯಾಗಾರಗಳನ್ನು ಇಲಾಖೆಯು ಹಮ್ಮಿಕೊಳ್ಳುತ್ತಾ ಬಂದಿದೆ. ಜ.1 ರಂದು ತೆಕ್ಕಟ್ಟೆ ಕುವೆಂಪು ಶಾಲೆಯಲ್ಲಿ ಉಪನಿರ್ದೇಶಕರ ಕಚೇರಿ ಉಡುಪಿ ಜಿ.ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ವಲಯ, ಭಾರತ ಜ್ಞಾನ ವಿಜ್ಞಾನ ಸಮಿತಿ ಕರ್ನಾಟಕ ಹಾಗೂ ಕುವೆಂಪು ಶತಮಾನೋತ್ಸವ ಸ.ಹಿ.ಪ್ರಾ. ಶಾಲೆಯ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಹಬ್ಬ 2019-20 ಕಾರ್ಯಕ್ರಮ ಗಮನ ಸೆಳೆಯಿತು.

ತರಗತಿ ಕೋಣೆಯ ಒಳ-ಹೊರಗನ್ನು ಬದಲಿಸಬಲ್ಲ ಕತೃìತ್ವ ಶಕ್ತಿಯನ್ನು ನಮ್ಮ ಸಾಮಾಜಿಕ ಒಡನಾಟವು ಕರುಣಿಸಬಲ್ಲದು. ಮಕ್ಕಳ ಹಬ್ಬವು ಆ ಕಾರಣಕ್ಕಾಗಿಯೇ ಊರ ಹಬ್ಬವೂ ಆಗಬೇಕು. ಸಮಾಜದ ಎಲ್ಲ ಸ್ತರಗಳನ್ನು ಒಳಗೊಳ್ಳುವ ಹಬ್ಬವೂ ಆಗಬೇಕು. ಅತಿಥಿ-ಅತಿಥೇಯ ಮಾದರಿಯಲ್ಲಿ ಸಂಘಟಿಸ ಲ್ಪಡುತ್ತಿರುವ ಈ ಜಿಲ್ಲಾ ಹಬ್ಬವೂ ಸೇರಿದಂತೆ ಈ ಕಾರ್ಯಕ್ರಮದ ಒಟ್ಟು ಆಶಯ ಮತ್ತು ಆಕೃತಿಯು ಸಮಾನತೆ ಮತ್ತು ಸಹಬಾಳ್ವೆಯ ಬೆಳಕನ್ನು ಹಂಚಬೇಕು ಎನ್ನುವುದು ಈ ಕಾರ್ಯಕ್ರಮದ ಮೂಲ ಆಶಯದಲ್ಲಿ ಒಂದು.

ಹತ್ತು ವಿಭಾಗದಲ್ಲಿ ವಿದ್ಯಾರ್ಥಿಗಳಿಂದ ವಿಭಿನ್ನ ಚಟುವಟಿಕೆ
ಮೂರು ದಿನಗಳ ಕಾಲ ನಡೆಯುವ ಈ ವಿಜ್ಞಾನ ಹಬ್ಬದಲ್ಲಿ ಸುಮಾರು 10 ಕಾರ್ನರ್‌ಗಳಲ್ಲಿ ಕಲಿಕೆಗೆ ಪೂರಕವಾದ ಕಾಗದ ಕತ್ತರಿ, ಜೀವಭಾವ ಅಸ್ಥಿಪಂಜರ, ಕ್ರಾಫ್ಟ್‌, ಚುಕ್ಕಿ ಚಂದ್ರಮ, ಪಿನ್‌ಹೋಲ್‌ ಕೆಮರಾ ರಚನೆ, ಮಾಡು ಆಡು ಏರುವ ಹಲ್ಲಿ, ಮರಕುಟ್ಟಿಗ, ದೃಷ್ಟಿಭ್ರಮೆ ಗೊಂಬೆ, ಕಾಗದಲ್ಲಿ ಕೋಳಿ, ಆನೆ, ಹುಡುಗಿ, ನವಿಲು ಸೇರಿದಂತೆ ಕಲಾತ್ಮಕ ಚಟುವಟಿಕೆಯ ಜತೆಗೆ ನಾಟಕ ಪ್ರದರ್ಶನ ಗೊಳ್ಳಲಿದೆ.

ಅನುಭವಿ ಸಂಪನ್ಮೂಲ ವ್ಯಕ್ತಿಗಳು ಮಾರ್ಗ ದರ್ಶನ ನೀಡಲಿದ್ದು, ಬೇರೆ ಬೇರೆ ಶಿಕ್ಷಣ ಸಂಸ್ಥೆಗಳಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ಸ್ಥಳೀಯ ಶಾಲಾ ವಿದ್ಯಾರ್ಥಿಗಳು ಮನೆಯಲ್ಲಿ ಅತಿಥಿ ಸಂತ್ಕಾರವನ್ನು ಮಾಡುತ್ತಿರುವುದು ವಿಶೇಷವಾಗಿದೆ.

ಜ.7: ರಾಜ್ಯಮಟ್ಟದ ವಿಜ್ಞಾನ ಹಬ್ಬ
ರಾಜ್ಯ ಮಟ್ಟದ ವಿಜ್ಞಾನ ಹಬ್ಬ ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣದಲ್ಲಿ ಜ. 7ರಿಂದ ಆರಂಭವಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಒಟ್ಟು 150ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಲಿದ್ದು 5 ವಿಭಾಗ ಗಳಲ್ಲಿ ಬೇರೆ ಬೇರೆ ವೈಜ್ಞಾನಿಕ ವಿಷಯಗಳನ್ನು ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಲಿದ್ದಾರೆ. ಖಾಸಗಿ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೂ ಕೂಡ ಈ ಮಕ್ಕಳ ವಿಜ್ಞಾನ ಹಬ್ಬದ ವೀಕ್ಷಣೆಗೆ ಮುಕ್ತ ಅವಕಾಶ ನೀಡಲಾಗಿದೆ.

ಚಟುವಟಿಕಾ ಆಧಾರಿತ ಕಲಿಕೆಗೆ ಪ್ರೋತ್ಸಾಹ
ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಜತೆಗೆ ಮೂಡ ನಂಬಿಕೆಯನ್ನು ಹೋಗಲಾಡಿಸುವುದೇ ಮಕ್ಕಳ ವಿಜ್ಞಾನ ಹಬ್ಬದ ಮೂಲ ಉದ್ದೇಶ. ಚಟುವಟಿಕಾ ಆಧಾರಿತ ಕಲಿಕೆ ಪ್ರೋತ್ಸಾಹ ನೀಡುವುದರಿಂದ ಮಗುವಿನಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಮೂಲಕ ಧನಾತ್ಮಕ ಚಿಂತನೆಗಳು ಬೆಳೆಯುವುದು.
-ಪ್ರಭಾಕರ ಮಿತ್ಯಾಂತ
ಉಪಯೋಜನಾ ಸಮನ್ವಯಾಧಿಕಾರಿ,
ಸಮಗ್ರ ಶಿಕ್ಷಣ ಉಡುಪಿ ಜಿಲ್ಲೆ.

ಸ್ವಂತ ಅನುಭವ ,ಒಡನಾಟ
ಮಕ್ಕಳ ವಿಜ್ಞಾನ ಹಬ್ಬವು ಸಮಾಜಕ್ಕೂ ಸಂದೇಶವನ್ನು ನೀಡುತ್ತದೆ. ಸ್ವಂತ ಅನುಭವ ಮತ್ತು ಒಡನಾಟ ಮಾತ್ರ ಕಲಿಕೆಯನ್ನುಂಟು ಮಾಡಬಲ್ಲದು ಎಂಬುದೇ ಆ ಸಂದೇಶ.
-ಉದಯ ಗಾವಂಕಾರ
ರಾಜ್ಯ ಸಂಪನ್ಮೂಲ ವ್ಯಕ್ತಿ

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.