ಮಾರುಕಟ್ಟೆಗಳಲ್ಲಿ ಮೀನಿನ ಕೊರತೆ; ಗಗನಕ್ಕೇರುತ್ತಿದೆ ದರ

ಕಡಲಿಗಿಳಿದರೂ ಬರಿಗೈಯಲ್ಲಿ ಬರುತ್ತಿವೆ ಬೋಟುಗಳು

Team Udayavani, Mar 2, 2020, 5:47 AM IST

fish-in-markets

ಗಂಗೊಳ್ಳಿ ಮ್ಯಾಂಗನೀಸ್‌ ವಾರ್ಫ್‌ನಲ್ಲಿ ಅನೇಕ ಬೋಟ್‌ಗಳು ಲಂಗರು ಹಾಕಿರುವುದು.

ಗಂಗೊಳ್ಳಿ: ಉತ್ತಮ ಮೀನಿನ ನಿರೀಕ್ಷೆಯಲ್ಲಿ ಕಡಲಿಗಿಳಿಯುವ ಮೀನುಗಾರರು ಬರಿಗೈಯಲ್ಲಿ ವಾಪಾಸಾಗುತ್ತಿರುವುದು ಒಂದೆಡೆಯಾದರೆ, ಮಾರುಕಟ್ಟೆಗಳಲ್ಲಿ ಬೇಡಿಕೆಯಷ್ಟು ಮೀನು ಸಿಗುತ್ತಿಲ್ಲ, ಇದ್ದ ಮೀನಿಗೆ ದುಬಾರಿ ಬೆಲೆ ಇನ್ನೊಂದೆಡೆ. ಇದೆಲ್ಲಕ್ಕಿಂತಲೂ ಮುಖ್ಯವಾಗಿ ಮೀನುಗಾರಿಕೆಯನ್ನೇ ನೆಚ್ಚಿಕೊಂಡಿರುವ ಗಂಗೊಳ್ಳಿ ಪೇಟೆಯಲ್ಲಿ ವ್ಯಾಪಾರ – ವಹಿವಾಟಿಗೆ ಮತ್ಸ್ಯಕ್ಷಾಮದ ಬಿಸಿ ತುಸು ಜೋರಾಗಿಯೇ ತಟ್ಟುತ್ತಿದೆ.

ಈ ಮೀನುಗಾರಿಕಾ ಋತುವಿನ ಆರಂಭದಿಂದಲೇ ಒಂದಿಲ್ಲೊಂದು ಪ್ರತಿಕೂಲ ಪರಿಸ್ಥಿತಿಯನ್ನೇ ಎದುರಿಸಿ ಕೊಂಡು ಬರುತ್ತಿರುವ ಮೀನುಗಾರರಿಗೆ ಈಗ ಮತ್ತಷ್ಟು ಸಂಕಷ್ಟಕ್ಕೀಡು ಮಾಡುವಂತಾಗಿದೆ.

ಮೀನುಗಾರಿಕೆಗೆ ತೆರಳಿದರೂ ಖರ್ಚು ಮಾಡಿದಷ್ಟು ಕೂಡ ಮೀನು ಸಿಗದಂತಾಗಿದೆ. ಕೆಲ ಬೋಟು, ದೋಣಿಗಳಂತೂ ಕೆಲ ಸಂದರ್ಭಗಳಲ್ಲಿ ಬರಿಗೈಯಲ್ಲಿ ಬಂದ ನಿದರ್ಶನಗಳು ಇದೆ.

ದರ ಏರಿಕೆ
ಮಾರುಕಟ್ಟೆಗಳಲ್ಲಿ ಅಗತ್ಯದಷ್ಟು ಮೀನು ಸಿಗುತ್ತಿಲ್ಲ. ಇದರಿಂದ ಮೀನಿನ ದರ ಗಗನಕ್ಕೇರಿದೆ. ಗಂಗೊಳ್ಳಿಯಲ್ಲಿ 1 ಕೆ.ಜಿ. ಬಂಗುಡೆಗೆ 150 ರಿಂದ 160 ರೂ. ಇದ್ದರೆ, ಕುಂದಾಪುರ ಮತ್ತಿತರ ಮಾರುಕಟ್ಟೆಗಳಲ್ಲಿ 20-30 ರೂ. ಹೆಚ್ಚಿರುತ್ತದೆ. ಬೂತಾಯಿ (ಬೈಗೆ) 120 ರಿಂದ 130 ರೂ. ಇದ್ದರೆ, ಬೇರೆಡೆ 150 ರೂ.ವರೆಗೆ ಮಾರಾಟವಾಗುತ್ತಿದೆ. ಆದರೆ ಈ ಬಾರಿ ಮಾರುಕಟ್ಟೆಗಳಲ್ಲಿ ಬೈಗೆ ಕಾಣಲು ಸಿಗುವುದೇ ಅಪರೂಪ ಎನ್ನುವಂತಾಗಿದೆ. ಇನ್ನು ಅಂಜಲ್‌ 560-600 ರೂ. ಇದ್ದರೆ, ಬೇರೆ ಕಡೆಗಳಲ್ಲಿ ಇದಕ್ಕಿಂತ 50 ರೂ. ಹೆಚ್ಚಿನ ದರದಲ್ಲಿ ಮಾರಾಟವಾಗುತ್ತಿದೆ.

ಖಾದ್ಯವೂ ದುಬಾರಿ
ಮತ್ಸ್ಯ ಪ್ರಿಯರಿಗಂತೂ ಈ ವರ್ಷ ಕಹಿಯಾಗಿದೆ. ಮೀನಿನ ದರದಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ಹೋಟೆಲ್‌ಗ‌ಳಲ್ಲಿಯೂ ಮೀನಿನ ಖಾದ್ಯಗಳ ಬೆಲೆಯೂ ಸಿಕ್ಕಾಪಟ್ಟೆ ಹೆಚ್ಚಳವಾಗಿದೆ. ಕೆಲವೆಡೆಗಳಲ್ಲಿ ಈಗ ಕೆಲವೇ ಕೆಲವು ಮೀನಿನ ಖಾದ್ಯವನ್ನು ಮಾತ್ರ ತಯಾರಿಸಲಾಗುತ್ತಿದೆ. ಈಗ ಮೀನಿಗಿಂತ ಕೋಳಿ ಖಾದ್ಯವೇ ವಾಸಿ ಎನ್ನುತ್ತಿದ್ದಾರೆ ಜನ.

ಸಂಕಷ್ಟದಲ್ಲಿ ಸಾವಿರಾರು ಕುಟುಂಬ
ಗಂಗೊಳ್ಳಿಯಲ್ಲಿ ಪರ್ಸಿನ್‌, ಟ್ರಾಲ್‌ ಬೋಟ್‌, ಪಾತಿ, ಗಿಲ್‌ನೆಟ್‌, ನಾಡದೋಣಿಗಳೆಲ್ಲ ಸೇರಿ ಸುಮಾರು 3,500 ಕ್ಕೂ ಮಿಕ್ಕಿ ಬೋಟುಗಳಿವೆ. ಇನ್ನು ಇಲ್ಲಿ ಈ ಮೀನುಗಾರಿಕೆ ವೃತ್ತಿಯನ್ನೇ ಮಾಡುತ್ತಿರುವವರು 10 ಸಾವಿರಕ್ಕೂ ಅಧಿಕ ಮಂದಿಯಿದ್ದರೆ, ಇದನ್ನೆ ನಂಬಿಕೊಂಡ ಸಾವಿರಾರು ಕುಟುಂಬಗಳು ಇವೆ. ಎಲ್ಲರೂ ಮೀನುಗಾರಿಕೆಯಿಲ್ಲದೆ ಸಂಕಷ್ಟ ಅನುಭವಿಸುವಂತಾಗಿದೆ.

ಸಾಲ ಪಾವತಿಗೂ ಕುತ್ತು
ಮಾರ್ಚ್‌ ಈ ಆರ್ಥಿಕ ವರ್ಷದ ಕೊನೆಯ ತಿಂಗಳಾಗಿದ್ದು, ಬ್ಯಾಂಕ್‌ಗಳಿಂದ, ಸಹಕಾರಿ ಸಂಘಗಳಿಂದ ಮೀನುಗಾರರು ಮೀನುಗಾರಿಕೆಯನ್ನೇ ನಂಬಿಕೊಂಡು ಸಾಲ ಪಡೆದವರು ಅನೇಕ ಮಂದಿಯಿದ್ದಾರೆ. ಆದರೆ ಈ ಋತುವಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮೀನುಗಾರಿಕೆ ಇಲ್ಲದ ಕಾರಣ, ಸಾಲ ಮರು ಪಾವತಿ ಮಾಡುವುದು ಹೇಗೆ ಎನ್ನುವ ಚಿಂತೆಯಲ್ಲಿ ಮೀನುಗಾರರಿದ್ದಾರೆ.

ಅವಧಿಗೆ ಮುನ್ನವೇ
ಸ್ಥಗಿತ ಸಂಭವ
ಯಾಂತ್ರೀಕೃತ ಮೀನುಗಾರಿಕೆಯು ಆಗಸ್ಟ್‌ನಿಂದ ಆರಂಭಗೊಂಡು ಮೇವರೆಗೆ ಕಾಲಾವಕಾಶವಿದೆ. ಆದರೆ ಕಳೆದ ಬಾರಿಯಂತೆ ಈ ಬಾರಿಯೂ ಮೀನಿಲ್ಲದೆ, ಗಂಗೊಳ್ಳಿಯಲ್ಲಿ ಅವಧಿಗಿಂತ ಮೊದಲೇ ಮೀನುಗಾರಿಕೆಯನ್ನು ಸ್ಥಗಿತಗೊಳಿಸುವ ಸಂಭವ ಕಂಡು ಬರುತ್ತಿದೆ. ಇಲ್ಲಿರುವ ನೂರಾರು ಬೋಟುಗಳ ಪೈಕಿ ಪ್ರಸ್ತುತ ಮೀನುಗಾರಿಕೆಗೆ ತೆರಳುವುದು ದಿನವೊಂದಕ್ಕೆ ಕನಿಷ್ಠ 10 ಕೂಡ ಇಲ್ಲ. ಹೆಚ್ಚಿನ ಬೋಟು ಮಾಲಕರು ತೆರಳಿದರೂ ಲಾಭಕ್ಕಿಂತ ನಷ್ಟವೇ ಹೆಚ್ಚು ಆಗುವುದಿರಿಂದ ತೆರಳದೇ ಇರುವುದೇ ವಾಸಿ ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ.

ಶೇ.80 ರಷ್ಟು ಕುಸಿತ
ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಗಂಗೊಳ್ಳಿಯ ದಿನಸಿ ಸಾಮಗ್ರಿ, ಇನ್ನಿತರ ವಸ್ತುಗಳ ಅಂಗಡಿಗಳಲ್ಲಿ ಶೇ. 80ರಷ್ಟು ವ್ಯಾಪಾರ – ವಹಿವಾಟು ಕುಸಿತಗೊಂಡಿದೆ. ಈಗ ಇಲ್ಲಿನ ಜನರಲ್ಲಿ ಸಂಪಾದನೆಯೇ ಕಷ್ಟ ಅನ್ನುವಂತಹ ಸ್ಥಿತಿಯಿದೆ. ಮೊದಲೆಲ್ಲ ಒಮ್ಮೆಗೆ 50 ಕೆ.ಜಿ. ಅಕ್ಕಿ ತೆಗೆದುಕೊಳ್ಳುವವರು ಈಗ ಇವತ್ತಿಗೆ ಸಾಕು ಎನ್ನುವಂತೆ ಬರೀ 5 ಕೆ.ಜಿ.ಯಷ್ಟೇ ಖರೀದಿಸಿಕೊಳ್ಳುತ್ತಿದ್ದಾರೆ. ಮೀನುಗಾರರಿಗೆ ಮಾತ್ರವಲ್ಲ ಇಲ್ಲಿನ ವರ್ತಕರಿಗೂ ಇದರ ಬಿಸಿ ಎದುರಾಗಿದೆ.
– ವಿಟಲ ಶೆಣೈ ಗಂಗೊಳ್ಳಿ, ವ್ಯಾಪಾರಿಗಳು – ಸದಸ್ಯರು, ಉಡುಪಿ ಜಿಲ್ಲಾ ವರ್ತಕರ ಸಂಘ

ಎಲ್ಲರಿಗೂ ಸಮಸ್ಯೆ
ಜನರ ಬೇಡಿಕೆಯಷ್ಟು ಮೀನು ಸಿಗುತ್ತಿಲ್ಲ. ಇದ್ದ ಮೀನಿನ ಬೆಲೆ ದುಬಾರಿಯಾಗಿದೆ. ಇದರಿಂದ ಮೀನು ಖರೀದಿಯ ಪ್ರಮಾಣವೂ ಕುಂಠಿತಗೊಂಡಿದೆ. ಮತ್ಸ್ಯಕ್ಷಾಮದಿಂದಾಗಿ ಮೀನುಗಾರರಿಗೆ, ಮೀನು ವ್ಯಾಪಾರಸ್ಥರು, ಅಂಗಡಿ ವ್ಯಾಪಾರಸ್ಥರು, ಐಸ್‌ ಪ್ಲಾಂಟ್‌ನವರು, ವಾಹನ ಚಾಲಕ- ಮಾಲಕರ ಸಹಿತ ಎಲ್ಲರಿಗೂ ಸಮಸ್ಯೆಯಾಗಿದೆ.
– ವಾಸುದೇವ ಖಾರ್ವಿ, ಅಧ್ಯಕ್ಷರು, ಹಸಿ ಮೀನು ವ್ಯಾಪಾರಸ್ಥರ ಸಂಘ

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.