ಮಾಹಿತಿ ಕೊರತೆ; ಸೌಲಭ್ಯ ವಂಚಿತರಾಗುತ್ತಿರುವ ಅರ್ಹರು

ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ

Team Udayavani, Oct 7, 2019, 5:52 AM IST

GOVT-A

ಉಡುಪಿ: ಅಸಂಘಟಿತ ವಲಯದ ಕಾರ್ಮಿಕರ ಜೀವನ ಮಟ್ಟವನ್ನು ಸುಧಾರಿಸಿ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಒದಗಿಸಲು ರಾಜ್ಯ ಸರಕಾರ ಜಾರಿಗೆತಂದ “ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ’ ಯೋಜನೆಯ ಮಾಹಿತಿ ಕೊರತೆಯಿಂದ ಅರ್ಹರು ಪ್ರಯೋಜನ ವಂಚಿತರಾಗುತ್ತಿದ್ದಾರೆ.

ಉಡುಪಿ, ದ.ಕ. ಜಿಲ್ಲೆಗಳಲ್ಲಿ 20 ಸಾವಿರಕ್ಕೂ ಅಧಿಕ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಿದ್ದಾರೆ. ಯೋಜನೆಯಡಿಯಲ್ಲಿ ಕಾರ್ಮಿಕ ಇಲಾಖೆ ಮೂಲಕ 2014ರಿಂದ ಇಲ್ಲಿಯವರೆಗೆ ಉಡುಪಿಯ 14 ಮತ್ತು ದ.ಕ. 12 ಕುಟುಂಬಗಳು ಮಾತ್ರ ಮರಣ ಪರಿಹಾರ ವಿಮೆ ಪಡೆದಿವೆ. 14 ವಿದ್ಯಾರ್ಥಿಗಳು ಶೈಕ್ಷಣಿಕ ಸಹಾಯಧನ ಪಡೆದುಕೊಳ್ಳುತ್ತಿದ್ದಾರೆ.

ಯೋಜನೆ ಯಾರಿಗಾಗಿ?
20ರಿಂದ 70 ವರ್ಷ ವಯೋಮಿತಿಯ ರಿಕ್ಷಾ, ಕಾರು, ಲಾರಿ, ಬಸ್‌, ಟೆಂಪೋ ವಾಣಿಜ್ಯವಾಹನಗಳ ಚಾಲಕರು ಮತ್ತು ನಿರ್ವಾಹಕರು (ಖಾಸಗಿ ಬಸ್‌) ಈ ಯೋಜನೆಯ ಫ‌ಲಾನುಭವಿಗಳು. ಅವರು ಅಪಘಾತದಲ್ಲಿ ಮೃತರಾದರೆ ಅಥವಾ ಗಾಯಗೊಂಡರೆ ಸರಕಾರ ವಿಮೆ ರೂಪದಲ್ಲಿ ಪರಿಹಾರ ನೀಡುತ್ತದೆ.

ಯೋಜನೆಯ ಷರತ್ತು?
ರಾಜ್ಯ ಸಾರಿಗೆ ಇಲಾಖೆಯಿಂದ ವಾಣಿಜ್ಯ ವಾಹನ ಚಲಾಯಿಸಲು ಚಾಲನ ಪರವಾನಿಗೆ ಮತ್ತು ಖಾಸಗಿ ಬಸ್‌ ನಿರ್ವಾಹಕರಿಗೆ ಆರ್‌ಟಿಒ ಕಚೇರಿಯಿಂದ ಕೊಡಲ್ಪಡುವ ನಿರ್ವಾಹಕ ಲೈಸನ್ಸ್‌ ಬ್ಯಾಡ್ಜ್ ಹೊಂದಿರುವವರು ಯೋಜನೆಗೆ ಅರ್ಹರಾಗಿದ್ದಾರೆ.

ಅರ್ಜಿ ಸಲ್ಲಿಕೆ ಹೇಗೆ?
ಅಪಘಾತ ಸಂಭವಿಸಿದ 6 ತಿಂಗಳೊಳಗೆ ಅರ್ಜಿ ಸಲ್ಲಿಸಬೇಕು. ಒಳರೋಗಿಯಾಗಿ ಚಿಕಿತ್ಸೆ ಪಡೆದ ದಾಖಲೆ, ಮೃತಪಟ್ಟಲ್ಲಿ ನಾಮನಿರ್ದೇಶಿತರು ಮರಣ ಪ್ರಮಾಣ ಪತ್ರ, ಮರಣೋತ್ತರ ಪರೀಕ್ಷಾ ವರದಿ ಮತ್ತು ಪ್ರಥಮ ಮಾಹಿತಿ ವರದಿ (ಎಫ್ಐಆರ್‌), ಕಮರ್ಷಿಯಲ್‌ ಡಿಎಲ್‌ ಬ್ಯಾಡ್ಜ್ , ಬ್ಯಾಂಕ್‌ ಖಾತೆ (ನಾಮನಿರ್ದೇಶಿತ ವ್ಯಕ್ತಿಯ) ಮಾಹಿತಿಯನ್ನು ಲಗತ್ತಿಸಿ ಜಿಲ್ಲಾ ಕಾರ್ಮಿಕ ಇಲಾಖೆ ಅಥವಾ ಮಂಡಳಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು. ಆದರೆ ಅಪಘಾತದ ಸಂದರ್ಭ ಚಾಲಕನ ಮತ್ತು ಬಸ್‌ ನಿರ್ವಾಹಕನ ಪರವಾನಿಗೆ ಊರ್ಜಿತದಲ್ಲಿರಬೇಕು.

ಸೌಲಭ್ಯ
ಚಾಲಕ/ನಿರ್ವಾಹಕರು ಅಪಘಾತದಲ್ಲಿ ಮೃತರಾದರೆ ನಾಮನಿರ್ದೇಶಿತರಿಗೆ 5 ಲ.ರೂ. ಮತ್ತು ಶಾಶ್ವತವಾಗಿ ದುರ್ಬಲಗೊಂಡವರಿಗೆ ಗರಿಷ್ಠ 2 ಲ.ರೂ. ನೀಡಲಾಗುತ್ತದೆ. ಆಸ್ಪತ್ರೆಯಲ್ಲಿ 15 ದಿನಗಳ ವರೆಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದವರಿಗೆ 50 ಸಾವಿರ ಮತ್ತು 15 ದಿನಗಳಿಗಿಂತ ಮೇಲ್ಪಟ್ಟು ಚಿಕಿತ್ಸೆ ಪಡೆಯುವವರಿಗೆ 1 ಲ.ರೂ. ವರೆಗಿನ ಬಿಲ್‌ ಮೊತ್ತವನ್ನು ಸರಕಾರ ಭರಿಸಲಿದೆ.

ಮಕ್ಕಳಿಗೆ ಶೈಕ್ಷಣಿಕ ಸಹಾಯ ಶಾಶ್ವತ ವೈಕಲ್ಯ ಮತ್ತು ಮರಣ ಹೊಂದುವ ವ್ಯಕ್ತಿಯ ಇಬ್ಬರು ಮಕ್ಕಳಿಗೆ 1ರಿಂದ 12ನೇ ತರಗತಿ ವರೆಗೆ 10 ಸಾವಿರ ರೂ. ಶೈಕ್ಷಣಿಕ ಸಹಾಯಧನ ಸಿಗಲಿದೆ.

ವಾಣಿಜ್ಯ ಸಾರಿಗೆ ವಾಹನಗಳ ಚಾಲಕ/ ನಿರ್ವಾಹಕರಿಗೆ ಯೋಜನೆಯ ಮಾಹಿತಿ ನೀಡಲಾಗುತ್ತಿದೆ. ಹಿಂದೆ ಈ ಯೋಜನೆಯಡಿ ಸಂತ್ರಸ್ತರ ಕುಟುಂಬಕ್ಕೆ 2 ಲ.ರೂ. ಪರಿಹಾರ ನೀಡಲಾಗುತ್ತಿತ್ತು. ಈಗ 5 ಲ.ರೂ.ಗೇರಿಸಲಾಗಿದೆ.
– ಎಂ. ಬಾಲಕೃಷ್ಣ, ವಿಲ್ಮಾ
ಕಾರ್ಮಿಕ ಅಧಿಕಾರಿಗಳು, ಉಡುಪಿ, ದ.ಕ.

ಪರಿಹಾರ ಮೊತ್ತ ನೇರ ಖಾತೆಗೆ
ದಾಖಲೆ ಪರಿಶೀಲಿಸಿ ಪರಿಹಾರವನ್ನು ಅರ್ಜಿದಾರರ ಬ್ಯಾಂಕ್‌ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತದೆ. ಮಕ್ಕಳ ಶೈಕ್ಷಣಿಕ ಸಹಾಯಧನ ಅರ್ಜಿಯನ್ನು ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಮುಖಾಂತರ ಸಲ್ಲಿಸಬಹುದು.

– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.