ಶಿಥಿಲಾವಸ್ಥೆಯಲ್ಲಿ ರಾಮಸಮುದ್ರ ರುದ್ರಭೂಮಿ

ಮೂಲಸೌಕರ್ಯ ಕೊರತೆ ; ಅನುದಾನ ಇದ್ದರೂ ಅಭಿವೃದ್ಧಿಯಾಗಿಲ್ಲ

Team Udayavani, Mar 16, 2020, 5:54 AM IST

karkala

ಕಾರ್ಕಳ: ಹಲವು ದಶಕಗಳ ಹಿಂದೆ ನಿರ್ಮಾಣವಾದ ರಾಮಸಮುದ್ರ ರುದ್ರಭೂಮಿ ಶಿಥಿಲಾವಸ್ಥೆಯಲ್ಲಿದ್ದು, ಶವ ಸುಡಲಾಗದ ದುಸ್ಥಿತಿ ಇದೆ. ದಾನಶಾಲೆ, ತೆಳ್ಳಾರು, ಮಾರ್ಕೆಟ್‌ ಪ್ರದೇಶ, ಜೋಗಲ್‌ಬೆಟ್ಟು, ವರ್ಣಬೆಟ್ಟು, ಪತ್ತೂಂಜಿಕಟ್ಟೆ, ಕುಂಬ್ರಿಪದವು, ಕಾವೆರಡ್ಕ ಎಂಬ ಪುರಸಭೆಯ 5 ವಾರ್ಡ್‌ ವ್ಯಾಪ್ತಿಯವರು ಅಂತ್ಯಸಂಸ್ಕಾರ ನೆರವೇರಿಸಲು ಇದೇ ರುದ್ರಭೂಮಿ ಬಳಸುತ್ತಿದ್ದರು.

ಮೂಲಸೌಕರ್ಯ ಕೊರತೆ
ರುದ್ರಭೂಮಿಯಲ್ಲಿ ಅಗತ್ಯವಾಗಿ ಬೇಕಾಗಿದ್ದ ಮೂಲ ಸೌಕರ್ಯವಿಲ್ಲದ ಕಾರಣ 2 ವರ್ಷಗಳಿಂದ ಶವಸಂಸ್ಕಾರ ಇಲ್ಲಿ ನಡೆಯುತ್ತಿಲ್ಲ. ಹೀಗಾಗಿ ಯಾರಾದರೂ ನಿಧನರಾದರೆ ಶವಸಂಸ್ಕಾರಕ್ಕಾಗಿ ದೂರದಲ್ಲಿನ ಕರಿಯಕಲ್ಲು, ಕುಂಟಲ್ಪಾಡಿ ರುದ್ರಭೂಮಿ ಅವಲಂಬಿಸಬೇಕಿದೆ.

ಮಳೆಗಾಲದಲ್ಲಿ ಕಷ್ಟ
ಈ ರುದ್ರಭೂಮಿಯಲ್ಲಿ ಮಳೆಗಾಲದಲ್ಲಿ ಶವ ಸಂಸ್ಕಾರ ನಡೆಸುವುದು ತೀರ ಕಷ್ಟದ ಕಾರ್ಯ. ಮೇಲ್ಛಾವಣಿಗೆ ಅಳವಡಿಸಿದ ಶೀಟು ಒಡೆದ ಪರಿಣಾಮ ಮಳೆಗಾಲದಲ್ಲಿ ಮಳೆ ನೀರು ದಹನ ಮಾಡುವ ಪ್ರದೇಶಕ್ಕೆ ಬೀಳುವಂತಿದೆ. ಕಟ್ಟಿಗೆ ದಾಸ್ತಾನಿಡಲು ಇಲ್ಲಿರುವ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಬೀಳುವ ಹಂತದಲ್ಲಿದೆ.

ಅಭಿವೃದ್ಧಿಯಾಗಲಿ
ಸುಮಾರು 20 ಸೆಂಟ್ಸ್‌ ಸರಕಾರಿ ಜಾಗದಲ್ಲಿರುವ ಈ ರುದ್ರಭೂಮಿಯ ಅಭಿವೃದ್ಧಿ ಕಾರ್ಯವಾಗಬೇಕೆಂಬ ಮಾತು ಕೇಳಿಬರುತ್ತಿದೆ. ರುದ್ರಭೂಮಿಯ ಪ್ರದೇಶವನ್ನು ಸಮತಟ್ಟುಗೊಳಿಸಿ, ಆವರಣ ರಚನೆಯಾಗಬೇಕು. ಶವಗಳ ದಹನಕ್ಕೆ ಮಳೆ, ಬಿಸಿಲಿನಿಂದ ರಕ್ಷಣೆ ನೀಡಲು ಅಗತ್ಯ ವ್ಯವಸ್ಥೆ ಕಲ್ಪಿಸಿಕೊಡುವುದು, ದಹನಕ್ಕೆ ಸೂಕ್ತವಾದ ಕಟ್ಟಿಗೆ ದಾಸ್ತಾನು ಮಾಡಲು ಶೆಡ್‌ ಹಾಗೂ ಧಾರ್ಮಿಕ ಕ್ರಿಯೆಗಳನ್ನು ನೆರವೇರಿಸಲು ಅಗತ್ಯ ಕಟ್ಟಡ ನಿರ್ಮಾಣ ಮಾಡುವಲ್ಲಿ ಪುರಸಭೆ ಮುತುವರ್ಜಿ ವಹಿಸಬೇಕಾಗಿದೆ.

3 ಲಕ್ಷ ಅನುದಾನ
ಇಲ್ಲಿನ ಶ್ಮಶಾನದ ಅಭಿವೃದ್ಧಿಗಾಗಿ ವರ್ಷದ ಹಿಂದೆ ಪುರಸಭೆ 3 ಲಕ್ಷ ರೂ. ಅನುದಾನ ಮಂಜೂರು ಮಾಡಿದೆ. ಅನುದಾನ ಮೀಸಲಿರಿಸಿ ವರ್ಷ ಒಂದು ಕಳೆದರೂ ಮುಕ್ತಿಧಾಮದ ಅಭಿವೃದ್ಧಿಯಾಗಿಲ್ಲ. ವಿದ್ಯುತ್‌ ಸಂಪರ್ಕವಿದ್ದರೂ ಲೈಟ್‌ ಉರಿಯುತ್ತಿಲ್ಲ.

ಸಮಿತಿ ರಚನೆಯಾಗಲಿ
ರುದ್ರಭೂಮಿ ಅಭಿವೃದ್ಧಿ ನಿಟ್ಟಿನಲ್ಲಿ, ಈ ಪರಿಸರವನ್ನು ಅತ್ಯಂತ ಸ್ವತ್ಛವಾಗಿಟ್ಟುಕೊಳ್ಳುವಲ್ಲಿ ಸಿಬಂದಿ ನೇಮಕವಾಗಬೇಕಿದೆ. ಪುರಸಭೆ ಮೇಲುಸ್ತುವಾರಿಯಲ್ಲೇ ಸ್ಥಳೀಯ ನಿವಾಸಿಗಳನ್ನು ಸೇರಿಸಿಕೊಂಡು ರುದ್ರಭೂಮಿ ಅಭಿವೃದ್ಧಿ ಸಮಿತಿ ರಚನೆ ಮಾಡಿದಲ್ಲಿ ರುದ್ರಭೂಮಿ ನಿರ್ವಹಣೆ ಜವಾಬ್ದಾರಿ ಆ ಸಮಿತಿಗೆ ನೀಡಬಹುದಾಗಿದೆ.

ಮೂಲಸೌಕರ್ಯವಿಲ್ಲದ ಕಾರಣ ಈ ರುದ್ರಭೂಮಿಯಲ್ಲಿ ಸವಸಂಸ್ಕಾರ ನಿಂತು ಹೋಗಿದೆ. ದೂರದ ರುದ್ರಭೂಮಿಯನ್ನು ಅವಲಂಬಿಸಬೇಕಾಗಿದೆ.

ಪಕ್ಕದಲ್ಲಿದೆ ರಾಮಸಮುದ್ರ
ರುದ್ರಭೂಮಿ ಪಕ್ಕದಲ್ಲೇ ರಾಮಸಮುದ್ರವಿದೆ. ದೇಹ ದಹನ ಮಾಡಿದ ಬೂದಿ ರಾಮಸಮುದ್ರ ಸೇರುತ್ತಿದೆ ಎಂಬ ಗಂಭೀರ ಆಪಾದನೆಯಿದೆ. ಹೀಗಾಗಿ ರಾಮಸಮುದ್ರದಿಂದ ದೂರದಲ್ಲಿ ರುದ್ರಭೂಮಿ ನಿರ್ಮಿಸಿ, ಸಮರ್ಪಕ ನಿರ್ವಹಣೆ ಮಾಡುವಲ್ಲಿ ಪುರಸಭೆ ಅಗತ್ಯ ಕ್ರಮಕೈಗೊಳ್ಳುವುದು ಅಗತ್ಯ. ಕಡು ಬೇಸಗೆ ಸಂದರ್ಭ ಮುಂಡ್ಲಿ ಜಲಾಶಯದ ನೀರು ಬತ್ತಿದಲ್ಲಿ ಪುರಸಭಾ ವ್ಯಾಪ್ತಿಗೆ ಇದೇ ರಾಮಸಮುದ್ರದ ನೀರು ಉಪಯೋಗಿಸಲಾಗುವುದರಿಂದ ರಾಮಸಮುದ್ರ ಮಲಿನವಾಗದಂತೆ ಎಚ್ಚರಿಕೆ ವಹಿಸಬೇಕಿದೆ.

ಮೂಲಸೌಕರ್ಯ ಕಲ್ಪಿಸಲಾಗುವುದು
ಕಳೆದ ಅಕ್ಟೋಬರ್‌ ವೇಳೆ ರುದ್ರಭೂಮಿ ದುರಸ್ತಿಗಾಗಿ ಹಣ ಮೀಸಲಾಗಿಟ್ಟರೂ ಕಾಮಗಾರಿ ನಡೆಯುವಲ್ಲಿ ವಿಳಂಬವಾಗಿದೆ. ಮುಂದಿನ ದಿನಗಳಲ್ಲಿ ಈ ರುದ್ರಭೂಮಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿಕೊಡಲಾಗುವುದು.
-ವಿನ್ನಿಬೋಲ್ಡ್‌ ಮೆಂಡೊನ್ಸಾ, ಪುರಸಭೆ ಸದಸ್ಯರು

ಅಗತ್ಯ ಕ್ರಮ ಕೈಗೊಳ್ಳಲಿ
ಕಾರ್ಕಳದಲ್ಲಿ ಪ್ರಥಮವಾಗಿ ನಿರ್ಮಾಣವಾಗಿರುವ ರುದ್ರಭೂಮಿಯಿದು. ರುದ್ರಭೂಮಿ ಅಭಿವೃದ್ಧಿ ನಿಟ್ಟಿನಲ್ಲಿ ಪುರಸಭೆ ಅಗತ್ಯ ಕ್ರಮ ಕೈಗೊಳ್ಳಬೇಕು. ಶವ ದಹನ ಮಾಡಲು ಆಗಮಿಸುವ ಕುಟುಂಬಸ್ಥರಿಂದ ಇಂತಿಷ್ಟು ಹಣ ಪಡೆದು ರುದ್ರಭೂಮಿ ನಿರ್ವಹಣೆ ಮಾಡಬಹುದಾಗಿದೆ.
-ರಾಘವ ದೇವಾಡಿಗ,
ಸಾಮಾಜಿಕ ಕಾರ್ಯಕರ್ತರು

-ರಾಮಚಂದ್ರ ಬರೆಪ್ಪಾಡಿ

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.