ಪಾಳುಬಿದ್ದ ಬೀಡಿನಗುಡ್ಡೆ ಬಯಲು ರಂಗಮಂದಿರ
Team Udayavani, May 10, 2022, 12:31 PM IST
ಉಡುಪಿ: ನಗರಕ್ಕೊಂದು ಸುಸಜ್ಜಿತ ಬಯಲು ರಂಗ ಮಂದಿರದ ಬೇಡಿಕೆಯಂತೆ ನಿರ್ಮಾಣಗೊಂಡ ಬೀಡಿನಗುಡ್ಡೆ ಬಯಲು ರಂಗಮಂದಿರ ಇದೀಗ ನಿರ್ವಹಣೆ ಕೊರತೆಯಿಂದ ಸಂಪೂರ್ಣ ಪಾಳುಬಿದ್ದಿದೆ.
ಬೀಡಿನಗುಡ್ಡೆ ರಂಗಮಂದಿರವು ಸೌಲಭ್ಯ ಮತ್ತು ನಿರ್ವಹಣೆ ಕೊರತೆಯಿಂದ ಮಹತ್ವ ಕಳೆದುಕೊಳ್ಳುತ್ತಿದೆ. ಕ್ರೀಡೆ, ಉತ್ಸವ, ಸಾರ್ವಜನಿಕ ಸಭೆ, ಸಮಾರಂಭ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೊಸ ಪರಿಕಲ್ಪನೆಯಡಿ, ರಿಯಾಯತಿ ದರದಲ್ಲಿ ಸಭಾಂಗಣ ಒದಗಿಸುವ ಉದ್ದೇಶದಿಂದ ಬಯಲು ರಂಗಮಂದಿರ ನಿರ್ಮಿಸಲಾಗಿತ್ತು. ಸರಿಯಾಗಿ ನಿರ್ವಹಣೆ ಮಾಡದೆ, ಅಗತ್ಯ ಸೌಲಭ್ಯಗಳನ್ನೂ ಕಲ್ಪಿಸದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ ರಂಗಮಂದಿರ ಈಗ ದುಃಸ್ಥಿತಿಗೆ ತಲುಪಿದೆ. ಪ್ರತೀ ವರ್ಷ ಜಿಲ್ಲಾಡಳಿತ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆಯ ಜತೆಗೆ ಕ್ರಿಕೆಟ್, ಕಲಾ ಚಟುವಟಿಕೆಗಳು, ಉತ್ಸವ, ಮೇಳಗಳನ್ನು ಇಲ್ಲಿ ಆಯೋಜಿಸಲಾಗುತ್ತಿತ್ತು. ಕೋವಿಡ್ಲಾಕ್ಡೌನ್ ಬಳಿಕ ಇಲ್ಲಿ ನಡೆಯುತ್ತಿದ್ದ ಚಟುವಟಿಕೆಗಳಿಗೆ ಸಂಪೂರ್ಣ ಬ್ರೇಕ್ಬಿದ್ದಿದೆ. ಕೋವಿಡ್ ಲಾಕ್ಡೌನ್ ಸಂದರ್ಭ ಇಲ್ಲಿ ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಲಾರಿ, ಟೆಂಪೋ ಓಡಾಟದ ವೇಳೆ ಆವರಣ ಗೋಡೆಗೆ ಢಿಕ್ಕಿಯಾಗಿ ಹಾನಿ ಸಂಭವಿಸಿದೆ. ಬಳಿಕ ಮರು ನಿರ್ಮಾಣವಾಗಿಲ್ಲ.
ನಿರ್ವಹಣೆ ಕೊರತೆ
ಎರಡು ಕಡೆಗಳಲ್ಲಿ ಮಂದಿರದ ಆವರಣ ಗೋಡೆ ಕುಸಿದುಬಿದ್ದಿದೆ. ಇನ್ನೊಂದು ಬದಿಯಲ್ಲಿ ಗೋಡೆ ಕುಸಿದು ಬೀಳುವ ಹಂತದಲ್ಲಿದೆ. ಒಂದು ಗೋಡೆಯು ವಾಹನ ಢಿಕ್ಕಿಯಾಗಿ ಉರುಳಿದ್ದರೆ, ಇನ್ನೊಂದು ಎರಡು ವರ್ಷದ ಹಿಂದೆ ಮಳೆಗಾಲದ ಮಳೆ ರಭಸಕ್ಕೆ ಗೋಡೆ ಕುಸಿದಿದೆ. ಇದುವರೆಗೆ ಅದನ್ನು ಸರಿಪಡಿಸುವ ಕೆಲಸವಾಗಿಲ್ಲ. ಮೈದಾನದ ಒಳಗಿರುವ ಬೆಂಚ್ಗಳನ್ನು ಗಿಡಗಂಟಿಗಳು ಆವರಿಸಿಕೊಂಡಿವೆ.
ವೇದಿಕೆಯೂ ನಿರ್ವಹಣೆಯಿಲ್ಲದ ಶಿಥಿಲಾವಸ್ಥೆಗೆ ತಲುಪಿದೆ. ಮದ್ಯದ ಬಾಟಲಿ, ಪ್ಲಾಸ್ಟಿಕ್ ತ್ಯಾಜ್ಯ ರಾಶಿ ಪರಿಸರದ ಅಂದವನ್ನು ಕೆಡಿಸಿದೆ. ರಾತ್ರಿ ಅಕ್ರಮ ಚಟುವಟಿಕೆಗಳ ಜತೆಗೆ ಮದ್ಯ ಪಾರ್ಟಿ, ಜೂಜಾಟದ ಕೇಂದ್ರವಾಗಿ ಮಾರ್ಪಟ್ಟಿದೆ.
ನಗರಸಭೆಗೆ ಹಸ್ತಾಂತರಿಸಲು ಕೋರಿಕೆ
ಬಯಲು ರಂಗಮಂದಿರ ಜಿಲ್ಲಾಡಳಿತಕ್ಕೆ ಒಳಪಟ್ಟಿದ್ದು, ನಿರ್ವಹಣೆ ನಗರಸಭೆಗೆ ವಹಿಸಲಾಗಿದೆ. ಇಲ್ಲಿನ ಕಾವಲು ಸಿಬಂದಿಗೆ ವೇತನವನ್ನು ನಗರಸಭೆ ಪಾವತಿಸಬೇಕು. ಅಲ್ಲದೆ ಈ ಹಿಂದೆ ಕ್ರೀಡೆ, ಕಲಾ ಚಟುವಟಿಕೆ, ಉತ್ಸವಕ್ಕೆ ಹೆಚ್ಚು ದರವನ್ನು ವಿಧಿಸುತ್ತಿರುವುದು ಸಾರ್ವಜನಿಕ ವಲಯದಲ್ಲಿ ಬೇಸರಕ್ಕೆ ಕಾರಣವಾಗಿದೆ. ಬಯಲು ರಂಗಮಂದಿರ ಸಂಪೂರ್ಣವಾಗಿ ನಗರಸಭೆಗೆ ಬಿಟ್ಟುಕೊಡಬೇಕು ಎಂಬ ಆಗ್ರಹವಿದೆ. ಮುಂದಿನ ದಿನಗಳಲ್ಲಿ ರಂಗಮಂದಿರಕ್ಕೆ ಕಾಯಕಲ್ಪ ನೀಡುವುದಿದ್ದರೆ ಸೂಕ್ತ ಬಸ್ ಸೌಕರ್ಯ ಮತ್ತು ಪಾರ್ಕಿಂಗ್ ವ್ಯವಸ್ಥೆಯನ್ನು ಅನುಕೂಲವಾಗಿಸಬೇಕಿದೆ.
ಡಿಸಿಗೆ ಮನವಿ
ಬೀಡಿನಗುಡ್ಡೆ ರಂಗಮಂದಿರ ಸಂಪೂರ್ಣ ನಗರಸಭೆಗೆ ವಹಿಸಿಕೊಡಲು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ನಗರಸಭೆಗೆ ಹಸ್ತಾಂತರವಾದ ಬಳಿಕ ವ್ಯವಸ್ಥಿತ ಅಭಿವೃದ್ಧಿ ಮತ್ತು ನಿರ್ವಹಣೆ ನಗರಸಭೆಯಿಂದ ಮಾಡಲಾಗುತ್ತದೆ. ನಗರದ ಮಾದರಿ ಬಯಲು ರಂಗಮಂದಿರವಾಗಿ ರೂಪಿಸುತ್ತೇವೆ. -ಸುಮಿತ್ರಾ ನಾಯಕ್, ಅಧ್ಯಕ್ಷೆ, ಉಡುಪಿ ನಗರಸಭೆ
ಶೀಘ್ರ ಕ್ರಮ
ಬಯಲು ರಂಗ ಮಂದಿರವನ್ನು ಯಾವ ಮಾದರಿಯಲ್ಲಿ ಅಭಿವೃದ್ಧಿ ಮತ್ತು ನಿರ್ವಹಣೆ ಮಾಡಬೇಕು ಎಂಬುದನ್ನು ಸ್ಥಳ ಪರಿಶೀಲನೆಯ ಅನಂತರ ನಿರ್ಧರಿಸಲಾಗುವುದು. ನಗರಸಭೆಯ ಬೇಡಿಕೆಯನ್ನು ಪರಿಶೀಲಿಸಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು. –ಕೂರ್ಮಾ ರಾವ್, ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ