ಪಂ. ಸದಸ್ಯರಿಂದಲೇ ಕೆರೆ ಅತಿಕ್ರಮಣ: ಸ್ಥಳೀಯರ ಆರೋಪ


Team Udayavani, Feb 15, 2020, 6:15 AM IST

panchayath-sadasya

ತಲ್ಲೂರು: ಉಪ್ಪಿನಕುದ್ರು ಶಾಲೆಯ ಬಳಿಯ ವಾಸನಕೆರೆಯ ಸಮೀಪದ ಸುಮಾರು 13 ಸೆಂಟ್ಸ್‌ ಜಾಗದಲ್ಲಿರುವ ಸರಕಾರಿ ಅಧೀನದ ನಾಗನ ಕೆರೆಯ ಬಹುಭಾಗವನ್ನು ಗ್ರಾ.ಪಂ. ಸದಸ್ಯರೊಬ್ಬರು ಅತಿಕ್ರಮಣ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಸ್ಥಳೀಯರಿಂದ ವ್ಯಕ್ತವಾಗಿದೆ. ಈ ಸಂಬಂಧ ಈಗ ಊರವರು ಪಂಚಾಯತ್‌ಗೆ ದೂರನ್ನು ಕೂಡ ನೀಡಿದ್ದಾರೆ.

ತಲ್ಲೂರು ಗ್ರಾ.ಪಂ. ವ್ಯಾಪ್ತಿಯ ನಾಗನಕೆರೆಯು ಈ ಹಿಂದೆ 13 ಸೆಂಟ್ಸ್‌ ವಿಸ್ತೀರ್ಣ ಹೊಂದಿತ್ತು. ಆದರೆ ಈ ಕೆರೆಯ ಸಮೀಪದಲ್ಲೇ ಮನೆ ಹೊಂದಿರುವ ಪಂಚಾಯತ್‌ ಸದಸ್ಯರೊಬ್ಬರು ಒತ್ತುವರಿ ಮಾಡಿಕೊಂಡಿರುವುದಾಗಿ ಇಲ್ಲಿನ ಅಕ್ಕ-ಪಕ್ಕದ ನಿವಾಸಿಗಳು ಆರೋಪಿಸಿದ್ದಾರೆ.

ಕೃಷಿಗೆ ಅನುಕೂಲ
ಈ ನಾಗನಕೆರೆಯು ಹಿಂದೆ 30 ಎಕರೆ ಕೃಷಿ ಪ್ರದೇಶಕ್ಕೆ ನೀರುಣಿಸುವ ಜಲ ಸಂಪನ್ಮೂಲ ವಾಗಿತ್ತು. ಇದಲ್ಲದೆ ಈ ಕೆರೆಯ ಆಸುಪಾಸಿನಲ್ಲಿ 20-30
ಮನೆಗಳಿದ್ದು, ಅಲ್ಲಿನ ಬಾವಿಗಳಲ್ಲಿನ ನೀರಿನ ಮಟ್ಟ ಏರಿಸುವಲ್ಲಿಯೂ ಈ ಕೆರೆ ವರದಾನವಾಗಿತ್ತು. ಮೇಯಲು ಬಿಡುವ ಜಾನುವಾರು ಗಳಿಗೆ ದಣಿವಾರಿಸಿಕೊಳ್ಳಲು ಇದು ಪ್ರಯೋಜನವಾಗುತ್ತಿತ್ತು.

ಆದರೆ ಇದು ಸರಕಾರಿ ಕೆರೆಯಾಗಿದ್ದರೂ, ಈಗ ಈ ಕೆರೆಯ ಬಹುಭಾಗ ಒತ್ತುವರಿಯಾಗಿದೆ. ಬಾಕಿ ಇರುವ ಕೆರೆಯ ಅಲ್ಪ ಭಾಗದಲ್ಲಿ ಹೂಳು ತುಂಬಿಕೊಂಡಿದೆ. ಇರುವ ಅಲ್ಪ- ಸ್ವಲ್ಪ ಬಣ್ಣ ಬದಲಾಗಿ ಬಳಕೆಗೆ ಬಾರದಂತಾಗಿದೆ. ಇನ್ನು ಕೆಲ ವರ್ಷಗಳ ಹಿಂದೆ ಈ ಕೆರೆಯ ಒಂದು ಭಾಗಕ್ಕೆ ತಲ್ಲೂರು ಪಂಚಾಯತ್‌ ಅನುದಾನದಿಂದಲೇ ತಡೆಗೋಡೆಯನ್ನು ನಿರ್ಮಿಸಲಾಗಿತ್ತು.

ಈ ಬಗ್ಗೆ ಸ್ಥಳೀಯರಿಂದ ದೂರು ಬಂದಿದೆ. ಪರಿಶೀಲನೆ ನಡೆಸಿದ ಬಳಿಕ ತಹಶೀಲ್ದಾರ್‌ ಗಮನಕ್ಕೆ ತಂದು, ಮುಂದೆ ಕಾನೂನು ಪ್ರಕಾರ ಏನು ಕ್ರಮಕೈಗೊಳ್ಳಬೇಕು ಅದನ್ನು ತೆಗೆದುಕೊಳ್ಳುವುದಾಗಿ ತಲ್ಲೂರು ಗ್ರಾ.ಪಂ. ಪಿಡಿಒ ನಾಗೇಂದ್ರ ತಿಳಿಸಿದ್ದಾರೆ.

ಸೂಕ್ತ ಕ್ರಮ
ಆ ಮನೆಯ ಸಮೀಪವೇ ಕೆರೆ ಇರುವುದರಿಂದ ಅತಿಕ್ರಮಿಸಿರಬಹುದು. ಈ ಬಗ್ಗೆ ಪಂಚಾಯತ್‌ ಗಮನಕ್ಕೆ ಬಂದಿದ್ದು, ಅಧಿಕಾರಿಗಳೊಂದಿಗೆ ಚರ್ಚಿಸಿ, ಕೂಡಲೇ ಸೂಕ್ತ ಕ್ರಮಕೈಗೊಳ್ಳಲು ಸೂಚಿಸಲಾಗುವುದು.
– ಆನಂದ ಬಿಲ್ಲವ, ಅಧ್ಯಕ್ಷರು, ತಲ್ಲೂರು ಗ್ರಾ.ಪಂ.

ಅನೇಕ ಬಾರಿ ಮನವಿ
ಈ ಸಂಬಂಧ ಈಗಾಗಲೇ ಅನೇಕ ಬಾರಿ ಸ್ಥಳೀಯರಿಂದ ಪಂಚಾಯತ್‌ಗೆ ಮನವಿ ಸಲ್ಲಿಸಿದರೂ, ಈವರೆಗೆ ಪಂಚಾಯತ್‌ ಗಮನವೇ ಕೊಟ್ಟಿಲ್ಲ. ಪಂಚಾಯತ್‌ ಸದಸ್ಯರೇ ಆಗಿರುವುದರಿಂದ ಪ್ರಭಾವಕ್ಕೊಳಕ್ಕಾಗಿ ಅಧಿಕಾರಿಗಳು ನಿರ್ಲಕ್ಷé ವಹಿಸುತ್ತಿದ್ದಾರೆ. ಈಗ ಮತ್ತೆ ಮನವಿ ನೀಡಲಾಗಿದೆ.
– ಸುಧೀರ್‌ ನಾಗನಕೆರೆ, ಸ್ಥಳೀಯರು

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.