Udupi ಖಾತೆಯಿಂದ ಲಕ್ಷಾಂತರ ರೂ. ವಂಚನೆ
Team Udayavani, Feb 24, 2024, 11:55 PM IST
ಉಡುಪಿ: ಆನ್ಲೈನ್ ಮೂಲಕ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ಲಪಟಾಯಿಸಿದ ಘಟನೆ ನಡೆದಿದೆ.
ಬೆಳ್ಮಣ್ನ ಜಯ ಶೆಟ್ಟಿ ಅವರ ಮಗ ವಿದೇಶದಲ್ಲಿ ಉದ್ಯೋಗ ಮಾಡಿಕೊಂಡಿದ್ದು ಯುನಿಯನ್ ಬ್ಯಾಂಕ್ನ ಕಾರ್ಕಳ ಶಾಖೆಯಲ್ಲಿ ಎರಡು ಖಾತೆ ಹೊಂದಿದ್ದರು. ಅವರ ಎರಡೂ ಖಾತೆಗಳಲ್ಲಿ ಪೇಟಿಎಂ ಆನ್ಲೈನ್ ಪೇಮೆಂಟ್ ಸಿಸ್ಟಂ ಹೊಂದಿದ್ದು ಫೆ. 10ರಿಂದ 20ರ ನಡುವೆ ಜಯಶೆಟ್ಟಿ ಅವರ ಮಗನ ಗಮನಕ್ಕೆ ಬಾರದೇ ಅಪರಿಚಿತರು ಆನ್ಲೈನ್ ಮೂಲಕ ಎರಡೂ ಖಾತೆಗಳಿಂದ ಹಂತ ಹಂತವಾಗಿ 1,56,100 ರೂ. ವರ್ಗಾಯಿಸಿಕೊಂಡಿದ್ದಾರೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಂಜಾ ಸೇವನೆ: ಇಬ್ಬರು ವಶಕ್ಕೆ
ಉಡುಪಿ: ಕರಂಬಳ್ಳಿ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ನಿಟ್ಟೂರಿನ ದೇಶ್ರಾಜ್ (19), ಪಿತ್ರೋಡಿಯ ನಾಗರಾಜ್ (21) ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಫೋರೆನ್ಸಿಕ್ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್ ಇದ್ದಂತೆ…
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ