ಶ್ರೀಕೃಷ್ಣ ಮಠದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ: ಕಲಾವಿದರಿಂದ ಭಜನೆ


Team Udayavani, Nov 21, 2018, 2:40 AM IST

lakshadeepa-20-11.jpg

ಉಡುಪಿ: ಶ್ರೀಕೃಷ್ಣಮಠದಲ್ಲಿ ಮಂಗಳವಾರ ಉತ್ಥಾನದ್ವಾದಶಿಯಂದು ಲಕ್ಷದೀಪೋತ್ಸವ ಶುಭಾರಂಭಗೊಂಡಿತು. ನಾಲ್ಕು ದಿನಗಳ ಲಕ್ಷ ದೀಪೋತ್ಸವದ ಆರಂಭದ ದಿನ ಹಲವು ಆಯಾಮಗಳ ಕಾರ್ಯಕ್ರಮ ಸಂಪನ್ನಗೊಂಡಿತು. ದ್ವಾದಶಿಯಾದ ಕಾರಣ ಬೆಳಗ್ಗೆ ಪರ್ಯಾಯ ಶ್ರೀ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ದೇವರಿಗೆ ಮಹಾಪೂಜೆಯನ್ನು ನಡೆಸಿದರು. ತುಳಸೀ ಪೂಜೆ, ಸಂಕೀರ್ತನೆಗಳು ನಡೆದವು. ಅನ್ನಸಂತರ್ಪಣೆ ನಡೆದ ಬಳಿಕ ಅಪರಾಹ್ನ ರಥಬೀದಿಯಲ್ಲಿ ಲಕ್ಷ ಹಣತೆಗಳನ್ನು ಸ್ಥಾಪಿಸಲು ಶ್ರೀಪಲಿಮಾರು ಮಠಾಧೀಶರು, ಶ್ರೀಪೇಜಾವರ ಮತ್ತು ಶ್ರೀಅದಮಾರು ಕಿರಿಯ ಶ್ರೀಪಾದರು ಮುಹೂರ್ತ ಮಾಡಿದರು.


ಶ್ರೀ ಕೃಷ್ಣ ಮಠದ ಮಧ್ವ ಸರೋವರದ ಬಳಿ ಗೋಷ್ಠಿ ಗಾನದ ‘ಏಳು ನಾರಾಯಣನೇ’, ‘ಪ್ರಬೋಧೋತ್ಸವ’ ಸಮಾರಂಭ ನಡೆಯಿತು. ಮಧ್ವಸರೋವರದ ಸುತ್ತ ಕುಳಿತು ಜಿಲ್ಲೆಯ ವಿವಿಧ ಭಜನ ಮಂಡಳಿಗಳಿಂದ ಮತ್ತು ದಾಸ ಸಾಹಿತ್ಯ ಪ್ರಾಜೆಕ್ಟ್ನಿಂದ ಬಂದ ಸಾವಿರಾರು ಭಜನ ಕಲಾವಿದರು ಗೋಷ್ಠಿ ಗಾನವನ್ನು ನಡೆಸಿಕೊಟ್ಟರು. ವಿದ್ವಾಂಸರಾದ ಕೊರ್ಲಳ್ಳಿ ವೆಂಕಟೇಶ ಆಚಾರ್ಯ, ಕೆ. ಅಪ್ಪಣ್ಣಾಚಾರ್ಯ, ವಿದ್ವಾನ್‌ ಸದಾನಂದ ಶಾಸ್ತ್ರಿಯವರು ಸಾಮೂಹಿಕ ಗೋಷ್ಠಿ ಗಾನದ ಸಾರಥ್ಯ ವಹಿಸಿ ಭಜನೆಯ ಮಹತ್ವವನ್ನು ಸಾರಿದರು.


ನಿರಂತರ ಭಜನೆಯ ಸಂಚಾಲಕ ಗುರುರಾಜ್‌ ಆಚಾರ್ಯ ಕಂಪ್ಲಿ, ಸಹ ಸಂಚಾಲಕಿ ಕಮಲಾವತಿ ವಾಸುದೇವ, ಗೀತಾ ಗುರುರಾಜ್‌ ಆಚಾರ್ಯ, ಉಡುಪಿ ಜಿಲ್ಲಾ ಭಜನ ಮಂಡಳಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಭೋಜರಾಜ್‌ ಆರ್‌. ಕಿದಿಯೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಶಿವಕುಮಾರ್‌ ಅಂಬಲಪಾಡಿ, ಸಂಘಟನಾ ಕಾರ್ಯದರ್ಶಿ ಸುಂದರ್‌ ಜತ್ತನ್‌ ತೆಂಕನಿಡಿಯೂರು, ಉಡುಪಿ ತಾಲೂಕು ಅಧ್ಯಕ್ಷ ಧನಂಜಯ ಕಾಂಚನ್‌ ಮಲ್ಪೆ, ಉಡುಪಿ ನಗರ ವಲಯಾಧ್ಯಕ್ಷ ಕಿಶೋರ್‌ ಕುಮಾರ್‌ ಕನ್ನರ್ಪಾಡಿ, ಉಡುಪಿ ಕರಾವಳಿ ವಲಯಾಧ್ಯಕ್ಷ ಕಿರಣ್‌ ಕುಂದರ್‌ ಮಲ್ಪೆ, ಉಮೇಶ್‌ ಆಚಾರ್ಯ ಉಪಸ್ಥಿತರಿದ್ದರು. ಬಳಿಕ ಭಜನ ಕಲಾವಿದರು ರಥಬೀದಿಯಲ್ಲಿ ಆಕರ್ಷಕ ಶೋಭಾಯಾತ್ರೆ ನಡೆಸಿಕೊಟ್ಟರು. ಕಲಾವಿದರು ಅರಸಿನ ಕುಂಕುಮದ ಪ್ರತೀಕವಾದ ಸಮವಸ್ತ್ರಗಳನ್ನು ಧರಿಸಿದ್ದರು. 


ಕಳೆದ ನಾಲ್ಕು ತಿಂಗಳಿಂದ ಚಾತುರ್ಮಾಸ್ಯ ವ್ರತವಾದ ಕಾರಣ ಕೃಷ್ಣಮಠದಲ್ಲಿ ಉತ್ಸವಗಳು ನಡೆಯುತ್ತಿರಲಿಲ್ಲ.ಉತ್ಥಾನ ದ್ವಾದಶಿಯಂದು ಲಕ್ಷ ದೀಪೋತ್ಸವದ ದಿನ ಶ್ರೀಕೃಷ್ಣಮಠದಲ್ಲಿ ಉತ್ಸವಗಳು ಆರಂಭಗೊಂಡಿತು. ರಾತ್ರಿ ರಥಬೀದಿ ಮತ್ತು ಮಧ್ವ ಸರೋವರದ ಸುತ್ತ ಲಕ್ಷ ಹಣತೆಗಳ ದೀಪದಲ್ಲಿ ಉತ್ಸವ ಸಂಪನ್ನಗೊಂಡಿತು. 


ಕೃಷ್ಣ ಮಠದಲ್ಲಿ ಚಾತುರ್ಮಾಸ್ಯ ಸಮಾಪ್ತಿಯ ದೇವಪ್ರಬೋಧಿನೀ ಏಕಾದಶಿಯಂದು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಪೇಜಾವರ ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹಾಗೂ ಅದಮಾರು ಕಿರಿಯ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ತುಳಸಿ ಹರಿಮಾಣವನ್ನು ತಲೆಯ ಮೇಲಿಟ್ಟು ‘ಡಂಗುರಾವ ಸಾರಿ ಹರಿಯ…’  ದಾಸರ ಪದಕ್ಕೆ ನೃತ್ಯ ಮಾಡಿದರು.


ಪರ್ಯಾಯ ಶ್ರೀಪಲಿಮಾರು, ಶ್ರೀಪೇಜಾವರ ಮತ್ತು ಶ್ರೀಅದಮಾರು ಕಿರಿಯ ಶ್ರೀಗಳು ಹಣತೆಗಳಿಗೆ ಮುಹೂರ್ತ ಮಾಡಿದರು.


ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ತಿರುಪತಿ ತಿರುಮಲ ದಾಸ ಸಾಹಿತ್ಯ ಪ್ರೊಜೆಕ್ಟ್, ಮಂತ್ರಾಲಯ ಗುರು ಸಾರ್ವಭೌಮ ದಾಸ ಸಾಹಿತ್ಯ ಪ್ರೊಜೆಕ್ಟ್  ಮತ್ತು ಉಡುಪಿ ಜಿಲ್ಲಾ ಭಜನ ಮಂಡಳಿಗಳ ಒಕ್ಕೂಟದವರಿಂದ ಭಜನ ಕಾರ್ಯಕ್ರಮ ನಡೆಯಿತು. 


ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಶ್ರೀವಿಜಯದಾಸರ ಆರಾಧನೆಯ ಕೊನೆಯ ದಿನ ಹಾಗೂ ದೇವಪ್ರಬೋಧಿನೀ ಏಕಾದಶಿ ಪ್ರಯುಕ್ತ ಮೈಸೂರು ರಾಮಚಂದ್ರಾಚಾರ್‌ ಇವರ ನೇತೃತ್ವದಲ್ಲಿ ಜಾಗರಣೆ ನಡೆಯಿತು.


ಚಿತ್ರಗಳು: ಆಸ್ಟ್ರೋ ಮೋಹನ್

ಟಾಪ್ ನ್ಯೂಸ್

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.