ಪಾದೂರು ತೈಲಾಗಾರ ವಿಸ್ತರಣೆಗೆ 6,000 ಕೋ.ರೂ.: ಶಾಸಕ ಲಾಲಾಜಿ ಆರ್‌. ಮೆಂಡನ್‌

ಉದಯವಾಣಿಯಿಂದ ಶಾಸಕರ ಜತೆ ನಮ್ಮ ಮಾತುಕತೆ ಸರಣಿಯ ಕಾರ್ಯಕ್ರಮ

Team Udayavani, Jul 4, 2022, 7:35 AM IST

ಪಾದೂರು ತೈಲಾಗಾರ ವಿಸ್ತರಣೆಗೆ 6,000 ಕೋ.ರೂ.: ಶಾಸಕ ಲಾಲಾಜಿ ಆರ್‌. ಮೆಂಡನ್‌

ಮಣಿಪಾಲ: ಪಾದೂರು ಕಚ್ಚಾ ತೈಲ ಸಂಸ್ಕರಣ ಘಟಕ (ಐಎಸ್‌ಪಿಆರ್‌ಎಲ್‌)ದ ದ್ವಿತೀಯ ಹಂತದ ವಿಸ್ತರಣೆಯು 6 ಸಾವಿರ ಕೋ.ರೂ. ವೆಚ್ಚದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿಯವರು ಹೇಳಿದ್ದಾರೆ. ಇದರಿಂದ ಹಲವಾರು ಮಂದಿಗೆ ಉದ್ಯೋಗಾವಕಾಶ ಸಿಗಲಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯಲಿವೆ ಎಂದು ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌ ಹೇಳಿದರು.

ಉದಯವಾಣಿಯ ಮಣಿಪಾಲ ಕಚೇರಿಯಲ್ಲಿ ಶನಿವಾರ ನಡೆದ “ಶಾಸಕರ ಜತೆ ನಮ್ಮ ಮಾತುಕತೆ’ ಸರಣಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಗತಿಯಲ್ಲಿ ಹೆಜಮಾಡಿ ಮೀನುಗಾರಿಕೆ ಬಂದರು ಯೋಜನೆ
ಮೀನುಗಾರರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಕೇಂದ್ರ-ರಾಜ್ಯ ಸಹಯೋಗದಲ್ಲಿ 181 ಕೋ.ರೂ. ಮೊತ್ತದ ಬಂದರು ಯೋಜನೆಗೆ ಅನುಮೋದನೆ ದೊರೆತಿದ್ದು, ಕಾಮಗಾರಿ ಪ್ರಗತಿಯ ಹಂತದಲ್ಲಿದೆ. ಮಲ್ಪೆ, ಮಂಗಳೂರು ಬಂದರಿಗಿಂತ ಇದು ಸುರಕ್ಷಿತವಾಗಿರಲಿದೆ ಎಂದರು.

ಕಡಲ್ಕೊರೆತ ನಿವಾರಣೆಗೆ ಶಾಶ್ವತ ಪರಿಹಾರ
ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಉದ್ಯಾವರ ಪಡುಕೆರೆ, ಮಟ್ಟು ಭಾಗಗಳಲ್ಲಿ ಗ್ರೇಯನ್ಸ್‌ ಮಾದರಿಯ ಶಾಶ್ವತ ತಡೆಗೋಡೆ ನಿರ್ಮಾಣ, ಬಡಾ ಎರ್ಮಾಳು ಮತ್ತು ತೆಂಕ ಎರ್ಮಾಳಿನ 3.34 ಕಿ.ಮೀ. ಉದ್ದದ ಕರಾವಳಿಯಲ್ಲಿ 43 ಕೋ.ರೂ. ಮೊತ್ತದ ಶಾಶ್ವತ ತಡೆಗೋಡೆ ನಿರ್ಮಿಸಲಾಗಿದೆ. ಕೈಪುಂಜಾಲು, ಮೂಳೂರು, ಪಡುಬಿದ್ರಿ ಹಾಗೂ ಹೆಜಮಾಡಿ ತೀರ ಪ್ರದೇಶಗಳಲ್ಲಿಯೂ ಸಮುದ್ರಕೊರೆತ ತಡೆಗಟ್ಟಲು ತಡೆಗೋಡೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕಡಲ್ಕೊರೆತ ಇರುವಲ್ಲಿ ಡಕ್‌ಫ‌ೂಟ್‌ ಮಾದರಿ ಶಾಶ್ವತ ತಡೆಗೋಡೆ ಸೇರಿದಂತೆ ವಿವಿಧ ಮಾದರಿಯ ಶಾಶ್ವತ ಸಮುದ್ರ ಕೊರೆತ ಪ್ರತಿಬಂಧಕ ತಡೆಗೋಡೆ ನಿರ್ಮಿಸಲು ಆದ್ಯತೆ ನೀಡಲಾಗುವುದು ಎಂದರು.

ವಿಜ್ಞಾನ ಸಂಶೋಧನ ಕೇಂದ್ರ ಕಟ್ಟಡ
ಬೆಳಪುವಿನಲ್ಲಿ ರಾಜ್ಯ ಸರಕಾರ ಹಾಗೂ ಮಂಗಳೂರು ವಿ.ವಿ. ಸಹಯೋಗದೊಂದಿಗೆ ಪಶ್ಚಿಮ ಘಟ್ಟಗಳ ಜೀವ ಸಂಕುಲದ ಅಧ್ಯಯನ, ಕರಾವಳಿ ಹಾಗೂ ಮಲೆನಾಡು ಪರಿಸರಕ್ಕೆ ಪಶ್ಚಿಮ ಘಟ್ಟಗಳ ಇರುವಿಕೆಯ ಮಹತ್ವದ ಅಧ್ಯಯನ ಹಾಗೂ ವಿಜ್ಞಾನ ವಿದ್ಯಾರ್ಥಿಗಳಿಗೆ ಉನ್ನತ ಕಲಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಅತ್ಯಾಧುನಿಕ ವಿಜ್ಞಾನ ಸಂಶೋಧನ ಕೇಂದ್ರದ ಕಟ್ಟಡ ಕಾಮಗಾರಿ ಚಾಲನೆಯಲ್ಲಿದೆ ಎಂದು ಲಾಲಾಜಿ ಹೇಳಿದರು. “ಉದಯವಾಣಿ’ ವತಿಯಿಂದ ಶಾಸಕರನ್ನು ಗೌರವಿಸಲಾಯಿತು.

ಉದಯವಾಣಿ ತಂದು ಓದುತ್ತಿದ್ದೆವು
ಚಿಕ್ಕ ಪ್ರಾಯದಿಂದಲೂ “ಉದಯವಾಣಿ’ಯನ್ನು ಓದುತ್ತಿದ್ದೆ. ಎಷ್ಟೋ ಬಾರಿ ನಾನೇ ಪೇಟೆಗೆ ಹೋಗಿ ಪತ್ರಿಕೆಯನ್ನು ತರುತ್ತಿದ್ದೆ. ವಿಶಿಷ್ಟ ವಿನ್ಯಾಸ, ಸುದ್ದಿಗಳಿಂದ ಉದಯವಾಣಿ ಈಗಲೂ ಓದುಗರನ್ನು ಆಕರ್ಷಿಸುತ್ತಿದೆ. ನನ್ನ ತಂದೆಯವರಿಗೆ ಆಧುನಿಕ ಮಣಿಪಾಲದ ಶಿಲ್ಪಿ ಡಾ| ಟಿಎಂಎ ಪೈಯವರೊಂದಿಗೆ ಆತ್ಮೀಯ ಒಡನಾಟವಿತ್ತು. ನಮ್ಮ ಮನೆಯಲ್ಲಿ ಅವರ ಭಾವಚಿತ್ರವಿತ್ತು ಎಂದು ಲಾಲಾಜಿ ಮೆಂಡನ್‌ ಹೇಳಿದರು.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.